<p><strong>ವಿಜಯಪುರ</strong>: ‘ಸಾವಿರ ದಿನದ ಸರ್ಕಾರ ಎಂದು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ಪ್ರತಿ ವರ್ಷ ₹1 ಲಕ್ಷ ಕೋಟಿ ಸಾಲ ಮಾಡಲಾಗುತ್ತಿದೆ. ಪ್ರತಿ ದಿನಕ್ಕೆ ₹ 300 ಕೋಟಿ ಸಾಲ ಆಗ್ತಿದೆ. ಇಂದಿನ ರಾಜ್ಯದ ಮುಖ್ಯಮಂತ್ರಿಗಳ ಆಡಳಿತ ವೈಖರಿ ಪ್ರತಿ ವರ್ಷ ಕೂಡ ₹ 1 ಲಕ್ಷ ಕೋಟಿ ಸಾಲದಲ್ಲಿದೆ. ಇಲ್ಲಿಯವರೆಗೆ ₹ 7 ಲಕ್ಷ ಕೋಟಿ ಸಾಲ ಮಾಡಿದೆ. ಈ ಸಾಲದ ಹೊರೆ ನಮ್ಮ ತಲೆಯ ಮೇಲೆ ಹಾಕುತ್ತಿದ್ದಾರೆ. ನಮ್ಮ ಮೇಲೆ ಸಾಲ ಹೊರೆಸುತ್ತಿರುವುದೇ ನಮಗೆ ಕೊಟ್ಟ ರಾಜ್ಯ ಸರ್ಕಾರದ ದೊಡ್ಡ ಕೊಡುಗೆಯಾಗಿದೆ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.</p><p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಪ್ರತಿನಿತ್ಯ ಕುರ್ಚಿ ಕಿತ್ತಾಟದಿಂದಲೇ ಕಾಲ ಕಳೆಯುತ್ತಿದ್ದಾರೆ. ಇದರಿಂದಾಗಿ ಸಂಪದ್ಭರಿತ ರಾಜ್ಯ ಬಡವಾಗುತ್ತಿದೆ’ ಎಂದು ಆರೋಪಿಸಿದರು.</p><p>‘ಬಿಜೆಪಿ ಮೈತ್ರಿ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಜೆಡಿಎಸ್–ಬಿಜೆಪಿ ಮೈತ್ರಿ ಗಟ್ಟಿಯಾಗಿದೆ. ಕೆಲ ನಾಯಕರಿಂದ ಅಲ್ಪಸ್ವಲ್ಪ ಅಪಸ್ವರ ಇರಬಹುದು ಎಲ್ಲವೂ ಸರಿಹೋಗುತ್ತದೆ’ ಎಂದರು.</p><p><strong>ಜನತಾ ಸಮಾವೇಶ: </strong>‘ಜೆಡಿಎಸ್ ಸ್ಥಾಪನೆಯಾಗಿ 25 ವರ್ಷವಾಗಿರುವುದರಿಂದ ನಾಡಿನಾದ್ಯಂತ ಬೆಳ್ಳಿಹಬ್ಬ ಆಚರಿಸಲಾಗುತ್ತಿದೆ. ಫೆ.27 ರಂದು ವಿಜಯಪುರ, ಬಾಗಲಕೋಟೆ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಏಳು ಜಿಲ್ಲೆಗಳ ಕಿತ್ತೂರು ಕರ್ನಾಟಕದ ಜನತಾ ಸಮಾವೇಶ ವಿಜಯಪುರದಲ್ಲಿ ಆಯೋಜಿಸಲಾಗುತ್ತಿದೆ’ ಎಂದರು.</p><p>‘ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಪ್ರಮುಖ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಸುಮಾರು ಒಂದು ಲಕ್ಷ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p><p>‘ದೇವೇಗೌಡರು ಕಟ್ಟಿ ಬೆಳೆಸಿದ ಪ್ರಾದೇಶಿಕ ಪಕ್ಷ ಜೆಡಿಎಸ್ ನಾಯಕರನ್ನು ತಯಾರು ಮಾಡುವ ಕಾರ್ಖಾನೆ. ಇನ್ನೂ ಸಹ ಜೆಡಿಎಸ್ ಪಕ್ಷ ಸದೃಢವಾಗಿದೆ, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಜೆಡಿಎಸ್ ತನ್ನ ಜಾತ್ಯತೀತ ಧೋರಣೆಯಿಂದ ಹಿಂದೆ ಸರಿದಿಲ್ಲ’ ಎಂದು ಹೇಳಿದರು.</p><p>‘ಜನತಾದಳ ಪಕ್ಷ ಸರ್ವ ಜನಾಂಗಕ್ಕೂ, ಸರ್ವ ಸಮಾಜಕ್ಕೂ ನ್ಯಾಯ ಒದಗಿಸಿದೆ, ಪಕ್ಷ ತನ್ನದೇ ಶಕ್ತಿ, ತನ್ನ ವರ್ಚಸ್ಸನ್ನು ಉಳಿಸಿಕೊಂಡಿದೆ. ಭ್ರಷ್ಟ ಕಾಂಗ್ರೆಸ್ ಪಕ್ಷವನ್ನು ಹೊಡೆದೋಡಿಸಲು ಬಿಜೆಪಿಯ ಜೊತೆಗೆ ಸೇರಿದ್ದೇವೆ’ ಎಂದು ಹೇಳಿದರು.</p><p><strong>ಕೊಡುಗೆ ಅಪಾರ: </strong>‘ವಿಜಯಪುರ ಜಿಲ್ಲೆಗೂ ದೇವೇಗೌಡರಿಗೂ ಅವಿನಾಭಾವ ಸಂಬಂಧವಿದೆ. ಆಲಮಟ್ಟಿ ಎತ್ತರಕ್ಕೆ ದೇವೇಗೌಡರು ಕೊಡುಗೆ ಕೊಟ್ಟಿದ್ದಾರೆ. ಜಿಲ್ಲೆಯ ಜನತೆ ಮುಂದಿನ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಲಿದ್ದಾರೆ’ ಎಂದರು.</p><p>‘ಚುನಾವಣೆಯ ಗೆಲುವು ಸೋಲು ನಾಯಕತ್ವವನ್ನು ನಿರ್ಣಯಿಸುವುದಿಲ್ಲ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಈಗಾಗಲೇ ಮೊದಲ ಹಂತದಲ್ಲಿ ರಾಜ್ಯದಾದ್ಯಂತ ಸಂಚರಿಸಿ ಕೆಲಸ ಮಾಡಿದ್ದೇನೆ’ ಎಂದು ಹೇಳಿದರು.</p><p>ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ದೇವಾನಂದ ಚಹ್ವಾಣ, ಜಿಲ್ಲಾ ಘಟಕದ ಅಧ್ಯಕ್ಷ ಬಸನಗೌಡ ಮಾಡಗಿ, ಮುಖಂಡರಾದ ವೆಂಕಟರಾವ್ ನಾಡಗೌಡ, ಬಿ.ಡಿ.ಪಾಟೀಲ, ಅಪ್ಪುಗೌಡ ಪಾಟೀಲ, ಮಲ್ಲಿಕಾರ್ಜುನ ಯಂಡಿಗೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಸಾವಿರ ದಿನದ ಸರ್ಕಾರ ಎಂದು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ಪ್ರತಿ ವರ್ಷ ₹1 ಲಕ್ಷ ಕೋಟಿ ಸಾಲ ಮಾಡಲಾಗುತ್ತಿದೆ. ಪ್ರತಿ ದಿನಕ್ಕೆ ₹ 300 ಕೋಟಿ ಸಾಲ ಆಗ್ತಿದೆ. ಇಂದಿನ ರಾಜ್ಯದ ಮುಖ್ಯಮಂತ್ರಿಗಳ ಆಡಳಿತ ವೈಖರಿ ಪ್ರತಿ ವರ್ಷ ಕೂಡ ₹ 1 ಲಕ್ಷ ಕೋಟಿ ಸಾಲದಲ್ಲಿದೆ. ಇಲ್ಲಿಯವರೆಗೆ ₹ 7 ಲಕ್ಷ ಕೋಟಿ ಸಾಲ ಮಾಡಿದೆ. ಈ ಸಾಲದ ಹೊರೆ ನಮ್ಮ ತಲೆಯ ಮೇಲೆ ಹಾಕುತ್ತಿದ್ದಾರೆ. ನಮ್ಮ ಮೇಲೆ ಸಾಲ ಹೊರೆಸುತ್ತಿರುವುದೇ ನಮಗೆ ಕೊಟ್ಟ ರಾಜ್ಯ ಸರ್ಕಾರದ ದೊಡ್ಡ ಕೊಡುಗೆಯಾಗಿದೆ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.</p><p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಪ್ರತಿನಿತ್ಯ ಕುರ್ಚಿ ಕಿತ್ತಾಟದಿಂದಲೇ ಕಾಲ ಕಳೆಯುತ್ತಿದ್ದಾರೆ. ಇದರಿಂದಾಗಿ ಸಂಪದ್ಭರಿತ ರಾಜ್ಯ ಬಡವಾಗುತ್ತಿದೆ’ ಎಂದು ಆರೋಪಿಸಿದರು.</p><p>‘ಬಿಜೆಪಿ ಮೈತ್ರಿ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಜೆಡಿಎಸ್–ಬಿಜೆಪಿ ಮೈತ್ರಿ ಗಟ್ಟಿಯಾಗಿದೆ. ಕೆಲ ನಾಯಕರಿಂದ ಅಲ್ಪಸ್ವಲ್ಪ ಅಪಸ್ವರ ಇರಬಹುದು ಎಲ್ಲವೂ ಸರಿಹೋಗುತ್ತದೆ’ ಎಂದರು.</p><p><strong>ಜನತಾ ಸಮಾವೇಶ: </strong>‘ಜೆಡಿಎಸ್ ಸ್ಥಾಪನೆಯಾಗಿ 25 ವರ್ಷವಾಗಿರುವುದರಿಂದ ನಾಡಿನಾದ್ಯಂತ ಬೆಳ್ಳಿಹಬ್ಬ ಆಚರಿಸಲಾಗುತ್ತಿದೆ. ಫೆ.27 ರಂದು ವಿಜಯಪುರ, ಬಾಗಲಕೋಟೆ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಏಳು ಜಿಲ್ಲೆಗಳ ಕಿತ್ತೂರು ಕರ್ನಾಟಕದ ಜನತಾ ಸಮಾವೇಶ ವಿಜಯಪುರದಲ್ಲಿ ಆಯೋಜಿಸಲಾಗುತ್ತಿದೆ’ ಎಂದರು.</p><p>‘ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಪ್ರಮುಖ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಸುಮಾರು ಒಂದು ಲಕ್ಷ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p><p>‘ದೇವೇಗೌಡರು ಕಟ್ಟಿ ಬೆಳೆಸಿದ ಪ್ರಾದೇಶಿಕ ಪಕ್ಷ ಜೆಡಿಎಸ್ ನಾಯಕರನ್ನು ತಯಾರು ಮಾಡುವ ಕಾರ್ಖಾನೆ. ಇನ್ನೂ ಸಹ ಜೆಡಿಎಸ್ ಪಕ್ಷ ಸದೃಢವಾಗಿದೆ, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಜೆಡಿಎಸ್ ತನ್ನ ಜಾತ್ಯತೀತ ಧೋರಣೆಯಿಂದ ಹಿಂದೆ ಸರಿದಿಲ್ಲ’ ಎಂದು ಹೇಳಿದರು.</p><p>‘ಜನತಾದಳ ಪಕ್ಷ ಸರ್ವ ಜನಾಂಗಕ್ಕೂ, ಸರ್ವ ಸಮಾಜಕ್ಕೂ ನ್ಯಾಯ ಒದಗಿಸಿದೆ, ಪಕ್ಷ ತನ್ನದೇ ಶಕ್ತಿ, ತನ್ನ ವರ್ಚಸ್ಸನ್ನು ಉಳಿಸಿಕೊಂಡಿದೆ. ಭ್ರಷ್ಟ ಕಾಂಗ್ರೆಸ್ ಪಕ್ಷವನ್ನು ಹೊಡೆದೋಡಿಸಲು ಬಿಜೆಪಿಯ ಜೊತೆಗೆ ಸೇರಿದ್ದೇವೆ’ ಎಂದು ಹೇಳಿದರು.</p><p><strong>ಕೊಡುಗೆ ಅಪಾರ: </strong>‘ವಿಜಯಪುರ ಜಿಲ್ಲೆಗೂ ದೇವೇಗೌಡರಿಗೂ ಅವಿನಾಭಾವ ಸಂಬಂಧವಿದೆ. ಆಲಮಟ್ಟಿ ಎತ್ತರಕ್ಕೆ ದೇವೇಗೌಡರು ಕೊಡುಗೆ ಕೊಟ್ಟಿದ್ದಾರೆ. ಜಿಲ್ಲೆಯ ಜನತೆ ಮುಂದಿನ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಲಿದ್ದಾರೆ’ ಎಂದರು.</p><p>‘ಚುನಾವಣೆಯ ಗೆಲುವು ಸೋಲು ನಾಯಕತ್ವವನ್ನು ನಿರ್ಣಯಿಸುವುದಿಲ್ಲ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಈಗಾಗಲೇ ಮೊದಲ ಹಂತದಲ್ಲಿ ರಾಜ್ಯದಾದ್ಯಂತ ಸಂಚರಿಸಿ ಕೆಲಸ ಮಾಡಿದ್ದೇನೆ’ ಎಂದು ಹೇಳಿದರು.</p><p>ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ದೇವಾನಂದ ಚಹ್ವಾಣ, ಜಿಲ್ಲಾ ಘಟಕದ ಅಧ್ಯಕ್ಷ ಬಸನಗೌಡ ಮಾಡಗಿ, ಮುಖಂಡರಾದ ವೆಂಕಟರಾವ್ ನಾಡಗೌಡ, ಬಿ.ಡಿ.ಪಾಟೀಲ, ಅಪ್ಪುಗೌಡ ಪಾಟೀಲ, ಮಲ್ಲಿಕಾರ್ಜುನ ಯಂಡಿಗೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>