<p><strong>ವಿಜಯಪುರ:</strong> ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಆಲಮಟ್ಟಿ ಜಲಾಶಯವನ್ನು ಪೂರ್ವ ನಿಗದಿತ 524.256 ಮೀಟರ್ ಗೆ ಎತ್ತರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿಯೂ ಆದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.</p>.ಕೃಷ್ಣಾ ಮೇಲ್ದಂಡೆ ಯೋಜನೆ ಭೂಸ್ವಾಧೀನ: ಸರ್ಕಾರಕ್ಕೆ ನಿತ್ಯ ₹1 ಕೋಟಿ ಬಡ್ಡಿ ಹೊರೆ!.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಮುಳುಗಡೆ ಭೂಮಿಗೆ ನಿಗದಿಯಾದ ಪರಿಹಾರ ಕೊಡಲು ನಮ್ಮ ಸರ್ಕಾರದ ಅಭ್ಯಂತರವಿಲ್ಲ ಎಂದರು.</p><p>ಸೋಮುವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿಯವರು ಯುಕೆಪಿ ಸಂತ್ರಸ್ತರ ಮತ್ತು ಈ ಭಾಗದ ಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಿ, ತೀರ್ಮಾನಿಸುತ್ತೇವೆ ಎಂದರು.</p>.ಕೃಷ್ಣಾ ಮೇಲ್ದಂಡೆ ಯೋಜನೆ | ತೆಲಂಗಾಣ ಮಾದರಿಯಾಗಲಿ: ಶ್ರೀಶೈಲ ಶ್ರೀ.<p>ಕೃಷ್ಣಾ ಮೇಲ್ದಂಡೆ ಯೋಜನೆಯ ಅಂತಿಮ ತೀರ್ಪಿನ ಕುರಿತು ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸದ ಹೊರತು ಸದ್ಯ ನಾವೇನು ಮಾಡಲು ಸಾಧ್ಯವಿಲ್ಲ ಎಂದರು.</p><p>ಗೆಜೆಟ್ ನೋಟಿಫಿಕೇಶನ್ ಆಗುವ ಮುನ್ನ ಕಾಮಗಾರಿ ಮಾಡಬೇಕಾ, ಬೇಡವಾ ಎಂಬುದರ ಬಗ್ಗೆ ಚರ್ಚೆ ಮಾಡುತ್ತೇವೆ. ಅದರ ಮಧ್ಯೆಯೂ ನಾವು ಪರ್ಯಾಯ ಏನೇನು ಮಾಡಬೇಕು ಎಂಬ ಚರ್ಚೆ ಮಾಡುತ್ತೇವೆ ಎಂದರು.</p>.ವಿಜಯಪುರ: ನನೆಗುದಿಗೆ ಬಿದ್ದ ಕೃಷ್ಣಾ ಮೇಲ್ದಂಡೆ ಯೋಜನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಆಲಮಟ್ಟಿ ಜಲಾಶಯವನ್ನು ಪೂರ್ವ ನಿಗದಿತ 524.256 ಮೀಟರ್ ಗೆ ಎತ್ತರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿಯೂ ಆದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.</p>.ಕೃಷ್ಣಾ ಮೇಲ್ದಂಡೆ ಯೋಜನೆ ಭೂಸ್ವಾಧೀನ: ಸರ್ಕಾರಕ್ಕೆ ನಿತ್ಯ ₹1 ಕೋಟಿ ಬಡ್ಡಿ ಹೊರೆ!.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಮುಳುಗಡೆ ಭೂಮಿಗೆ ನಿಗದಿಯಾದ ಪರಿಹಾರ ಕೊಡಲು ನಮ್ಮ ಸರ್ಕಾರದ ಅಭ್ಯಂತರವಿಲ್ಲ ಎಂದರು.</p><p>ಸೋಮುವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿಯವರು ಯುಕೆಪಿ ಸಂತ್ರಸ್ತರ ಮತ್ತು ಈ ಭಾಗದ ಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಿ, ತೀರ್ಮಾನಿಸುತ್ತೇವೆ ಎಂದರು.</p>.ಕೃಷ್ಣಾ ಮೇಲ್ದಂಡೆ ಯೋಜನೆ | ತೆಲಂಗಾಣ ಮಾದರಿಯಾಗಲಿ: ಶ್ರೀಶೈಲ ಶ್ರೀ.<p>ಕೃಷ್ಣಾ ಮೇಲ್ದಂಡೆ ಯೋಜನೆಯ ಅಂತಿಮ ತೀರ್ಪಿನ ಕುರಿತು ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸದ ಹೊರತು ಸದ್ಯ ನಾವೇನು ಮಾಡಲು ಸಾಧ್ಯವಿಲ್ಲ ಎಂದರು.</p><p>ಗೆಜೆಟ್ ನೋಟಿಫಿಕೇಶನ್ ಆಗುವ ಮುನ್ನ ಕಾಮಗಾರಿ ಮಾಡಬೇಕಾ, ಬೇಡವಾ ಎಂಬುದರ ಬಗ್ಗೆ ಚರ್ಚೆ ಮಾಡುತ್ತೇವೆ. ಅದರ ಮಧ್ಯೆಯೂ ನಾವು ಪರ್ಯಾಯ ಏನೇನು ಮಾಡಬೇಕು ಎಂಬ ಚರ್ಚೆ ಮಾಡುತ್ತೇವೆ ಎಂದರು.</p>.ವಿಜಯಪುರ: ನನೆಗುದಿಗೆ ಬಿದ್ದ ಕೃಷ್ಣಾ ಮೇಲ್ದಂಡೆ ಯೋಜನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>