'ಐದು ವರ್ಷ ಉತ್ತಮವಾಗಿ ಕೆಲಸ ಮಾಡಿರುವ ಕಾರಣ ಪಕ್ಷದ ಟಿಕೆಟ್ ನನಗೆ ಸಿಗಲಿದೆ" ಎನ್ನುವ ವಿಶ್ವಾಸದಲ್ಲಿ ರಾಜಾ ಅಮರೇಶ್ವರ ಇದ್ದಾರೆ. ಬಿಜೆಪಿ ಕಾರ್ಯಕರ್ತರು ಮಾತ್ರ ಬೇರೆ ಸಮರ್ಥ ಅಭ್ಯರ್ಥಿಗೆ ಟಿಕೆಟ್ ಕೊಡುವುದು ಸೂಕ್ತ ಎಂದು ಪಕ್ಷದ ಮುಖಂಡರಿಗೆ ಸಲಹೆ ಕೊಡುತ್ತಿದ್ದಾರೆ. ಮಾ.22ರಂದು ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದ್ದು, ಕುತೂಹಲಕ್ಕೆ ತೆರೆಬೀಳಲಿದೆ.