ಜೆ.ಸಿ.ಮಾಧುಸ್ವಾಮಿ ಅವರಿಗೆ ಕಾಂಗ್ರೆಸ್ ಬಲೆ ಬೀಸಿದ್ದು, ಲೋಕಸಭೆ ಟಿಕೆಟ್ ಅಥವಾ ವಿಧಾನಪರಿಷತ್ ಸದಸ್ಯತ್ವ ನೀಡುವುದಾಗಿ ಭರವಸೆ ನೀಡಿದೆ. ಒಂದೆರಡು ದಿನಗಳಲ್ಲಿ ಅವರು ತಮ್ಮ ನಿರ್ಣಯ ಪ್ರಕಟಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ‘ಅಂತಹ ಪ್ರಯತ್ನಗಳು ನಡೆದಿಲ್ಲ, ಮುಂದೆ ನೋಡೋಣ’ ಎಂದಷ್ಟೇ ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.