<p><strong>ಹೈದರಾಬಾದ್:</strong> ‘ಪುಷ್ಪ–2’ ಚಿತ್ರ ಪ್ರದರ್ಶನ ವೇಳೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ತೆಲುಗು ನಟ ಅಲ್ಲು ಅರ್ಜುನ್ ಅವರನ್ನು ನಾಂಪಲ್ಲಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. </p><p>ಇದೇ ಪ್ರಕರಣ ಸಂಬಂಧ ಅಲ್ಲು ಅರ್ಜುನ್ ಅವರನ್ನು ಇಂದು ಬೆಳಿಗ್ಗೆ ಹೈದರಾಬಾದ್ ನಿವಾಸದಲ್ಲಿ ಪೊಲೀಸರು ಬಂಧಿಸಿ, ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು.</p><p>ಹೈದರಾಬಾದ್ನಲ್ಲಿ ಡಿ.4ರಂದು ಪುಷ್ಪ–2 ಪ್ರೀಮಿಯರ್ ಪ್ರದರ್ಶನದ ವೇಳೆ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದ. ಹೈದರಾಬಾದ್ನಲ್ಲಿರುವ ಸಂಧ್ಯಾ ಚಿತ್ರಮಂದಿರದಲ್ಲಿ ಘಟನೆ ನಡೆದಿತ್ತು. </p><p>ಚಿತ್ರಮಂದಿರದಲ್ಲಿ ನಟನ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅಭಿಮಾನಿಗಳ ಜೊತೆಯಲ್ಲಿ ಸಿನಿಮಾ ವೀಕ್ಷಿಸಲು ನಟ ಅಲ್ಲು ಅರ್ಜುನ್, ನಟಿ ರಶ್ಮಿಕಾ ಮಂದಣ್ಣ ಚಿತ್ರಮಂದಿರಕ್ಕೆ ಬಂದಿದ್ದರು. ಈ ವೇಳೆ ಚಿತ್ರಮಂದಿರದೊಳಗೆ ನೂಕುನುಗ್ಗಲು ಉಂಟಾಗಿತ್ತು. </p><p>ಚಿತ್ರ ವೀಕ್ಷಣೆಗಾಗಿ ಚಿತ್ರಮಂದಿರದ ಬಳಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ನೂಕುನುಗ್ಗಲು ಉಂಟಾಗುವ ಸಾಧ್ಯತೆ ಇದ್ದು, ಚಿತ್ರಮಂದಿರಕ್ಕೆ ಬರದಂತೆ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ಸೂಚನೆ ನೀಡಿದ್ದರು. ಆದರೂ ಅಲ್ಲು ಅರ್ಜುನ್ ಚಿತ್ರಮಂದಿರಕ್ಕೆ ಬಂದಿದ್ದರು ಎಂದು ಮೂಲಗಳು ತಿಳಿಸಿವೆ.</p><p>ಘಟನೆ ಸಂಬಂಧ ಮೃತ ಮಹಿಳೆಯ ಕುಟುಂಬಸ್ಥರು ಡಿ.5ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.</p>.ಪುಷ್ಪ–2 ಸಿನಿಮಾ ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಬಂಧನ.ಕಾಲ್ತುಳಿತ ದುರಂತ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ಅಲ್ಲು ಅರ್ಜುನ್.ಕ್ರಿಮಿನಲ್ ರೀತಿ ಅಲ್ಲು ಅರ್ಜುನ್ ಬಂಧನ: ಕೆಟಿಆರ್ ಕಿಡಿ.VIDEO | ಪುಷ್ಪ-2 ಬಿಡುಗಡೆ: ಅಭಿಮಾನಿಗಳ ಜತೆ ಸಂಭ್ರಮದಲ್ಲಿ ಅಲ್ಲು ಅರ್ಜುನ್ ಭಾಗಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ‘ಪುಷ್ಪ–2’ ಚಿತ್ರ ಪ್ರದರ್ಶನ ವೇಳೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ತೆಲುಗು ನಟ ಅಲ್ಲು ಅರ್ಜುನ್ ಅವರನ್ನು ನಾಂಪಲ್ಲಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. </p><p>ಇದೇ ಪ್ರಕರಣ ಸಂಬಂಧ ಅಲ್ಲು ಅರ್ಜುನ್ ಅವರನ್ನು ಇಂದು ಬೆಳಿಗ್ಗೆ ಹೈದರಾಬಾದ್ ನಿವಾಸದಲ್ಲಿ ಪೊಲೀಸರು ಬಂಧಿಸಿ, ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು.</p><p>ಹೈದರಾಬಾದ್ನಲ್ಲಿ ಡಿ.4ರಂದು ಪುಷ್ಪ–2 ಪ್ರೀಮಿಯರ್ ಪ್ರದರ್ಶನದ ವೇಳೆ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದ. ಹೈದರಾಬಾದ್ನಲ್ಲಿರುವ ಸಂಧ್ಯಾ ಚಿತ್ರಮಂದಿರದಲ್ಲಿ ಘಟನೆ ನಡೆದಿತ್ತು. </p><p>ಚಿತ್ರಮಂದಿರದಲ್ಲಿ ನಟನ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅಭಿಮಾನಿಗಳ ಜೊತೆಯಲ್ಲಿ ಸಿನಿಮಾ ವೀಕ್ಷಿಸಲು ನಟ ಅಲ್ಲು ಅರ್ಜುನ್, ನಟಿ ರಶ್ಮಿಕಾ ಮಂದಣ್ಣ ಚಿತ್ರಮಂದಿರಕ್ಕೆ ಬಂದಿದ್ದರು. ಈ ವೇಳೆ ಚಿತ್ರಮಂದಿರದೊಳಗೆ ನೂಕುನುಗ್ಗಲು ಉಂಟಾಗಿತ್ತು. </p><p>ಚಿತ್ರ ವೀಕ್ಷಣೆಗಾಗಿ ಚಿತ್ರಮಂದಿರದ ಬಳಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ನೂಕುನುಗ್ಗಲು ಉಂಟಾಗುವ ಸಾಧ್ಯತೆ ಇದ್ದು, ಚಿತ್ರಮಂದಿರಕ್ಕೆ ಬರದಂತೆ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ಸೂಚನೆ ನೀಡಿದ್ದರು. ಆದರೂ ಅಲ್ಲು ಅರ್ಜುನ್ ಚಿತ್ರಮಂದಿರಕ್ಕೆ ಬಂದಿದ್ದರು ಎಂದು ಮೂಲಗಳು ತಿಳಿಸಿವೆ.</p><p>ಘಟನೆ ಸಂಬಂಧ ಮೃತ ಮಹಿಳೆಯ ಕುಟುಂಬಸ್ಥರು ಡಿ.5ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.</p>.ಪುಷ್ಪ–2 ಸಿನಿಮಾ ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಬಂಧನ.ಕಾಲ್ತುಳಿತ ದುರಂತ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ಅಲ್ಲು ಅರ್ಜುನ್.ಕ್ರಿಮಿನಲ್ ರೀತಿ ಅಲ್ಲು ಅರ್ಜುನ್ ಬಂಧನ: ಕೆಟಿಆರ್ ಕಿಡಿ.VIDEO | ಪುಷ್ಪ-2 ಬಿಡುಗಡೆ: ಅಭಿಮಾನಿಗಳ ಜತೆ ಸಂಭ್ರಮದಲ್ಲಿ ಅಲ್ಲು ಅರ್ಜುನ್ ಭಾಗಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>