<p><strong>ಹೈದರಾಬಾದ್</strong>: ‘ಪುಷ್ಟ–2’ ಸಿನಿಮಾದ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ವಿಷಯವನ್ನು ನಟ ಅಲ್ಲು ಅರ್ಜುನ್ ಅವರಿಗೆ ಹೇಳಿದ್ದರೂ ಚಿತ್ರಮಂದಿರ ಬಿಟ್ಟು ಅವರು ತೆರಳಿರಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.</p><p>2024ರ ವಾರ್ಷಿಕ ಸಮಗ್ರ ವರದಿ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸಿ.ವಿ.ಆನಂದ್, ಕಾಲ್ತುಳಿತ ಸಂಭವಿಸಿದಾಗ ಉಂಟಾದ ಪರಿಸ್ಥಿತಿಯ ಕುರಿತು ಪೊಲೀಸರು ಮಾಡಿದ ವಿಡಿಯೊವನ್ನು ತೋರಿಸಿದ್ದಾರೆ.</p>.ಅನುಮತಿ ನಿರಾಕರಿಸಿದರೂ ಚಿತ್ರಮಂದಿರಕ್ಕೆ ಬಂದಿದ್ದ ಅಲ್ಲು: ಸಿಎಂ ರೇವಂತ ರೆಡ್ಡಿ.ಪುಷ್ಪ–2 ಕಾಲ್ತುಳಿತ: ಜನರ ಸುರಕ್ಷತೆಗಿಂತ ಸಿನಿಮಾ ಪ್ರಚಾರ ಹೆಚ್ಚು ಮುಖ್ಯವಲ್ಲ:DGP.<p>ಸುದ್ದಿ ವಾಹಿನಿ ಮತ್ತು ಮೊಬೈಲ್ ಫೋನ್ಗಳ ದೃಶ್ಯಗಳನ್ನು ಒಟ್ಟುಗೂಡಿಸಿ ಮಾಡಿದ ವಿಡಿಯೊ ಇದಾಗಿದ್ದು, ಅಲ್ಲು ಅರ್ಜುನ್ ಅವರು ಮಧ್ಯರಾತ್ರಿಯವರೆಗೂ ಚಿತ್ರಮಂದಿರದಲ್ಲಿಯೇ ಇರುವುದು ವಿಡಿಯೊದಲ್ಲಿ ಕಾಣಬಹುದು.</p><p>ವಿಡಿಯೊ ಕುರಿತು ಯಾವುದೇ ಪ್ರತಿಕ್ರಿಯೆ ನೀಡದ ಆಯುಕ್ತರು, ‘ಈ ಬಗ್ಗೆ ನೀವೇ(ಮಾಧ್ಯಮದವರು) ನಿರ್ಧಾರ ತೆಗೆದುಕೊಳ್ಳಬಹುದು’ ಎಂದಿದ್ದಾರೆ.</p><p>ಮುಂದುವರಿದು, ‘ಮಹಿಳೆಯ ಸಾವಿನ ಬಗ್ಗೆ ನಾನು ಮತ್ತು ಇತರ ಪೊಲೀಸ್ ಅಧಿಕಾರಿಗಳು ಅಲ್ಲು ಅರ್ಜುನ್ ಅವರ ಮ್ಯಾನೇಜರ್ಗೆ ಮಾಹಿತಿ ನೀಡಿ ನೀಡಿದ್ದೆವು. ನಟನನ್ನು ನೇರವಾಗಿ ಭೇಟಿಯಾಗಲು ಆಗ ನಮಗೆ ಅವಕಾಶವಿರಲಿಲ್ಲ’ ಎಂದು ಹೇಳಿದ್ದಾರೆ.</p>.ಪುಷ್ಪ–2: ಕಾಲ್ತುಳಿತ– ಗಾಯಗೊಂಡಿದ್ದ ಬಾಲಕನ ಭೇಟಿಯಾಗಿ ಸಾಂತ್ವನ ಹೇಳಿದ ಸುಕುಮಾರ್.ಕಾಲ್ತುಳಿತ ಪ್ರಕರಣ: ಬಾಲಕನ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅಲ್ಲು ಅರ್ಜುನ್.<p>‘ಈ ವಿಚಾರವನ್ನು ಅಲ್ಲು ಅರ್ಜುನ್ ಅವರಿಗೆ ತಿಳಿಸುವುದಾಗಿ ಅವರ ಸಿಬ್ಬಂದಿ ಹೇಳಿದ್ದರೂ ಹಾಗೆ ಮಾಡಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>‘ಕೊನೆಗೂ ನಟನನ್ನು ಭೇಟಿಯಾದ ನಾವು ಮಹಿಳೆಯ ಸಾವಿನ ಬಗ್ಗೆ ತಿಳಿಸಿ ತಕ್ಷಣ ಚಿತ್ರಮಂದಿರದಿಂದ ತೆರಳುವಂತೆ ತಿಳಿಸಿದ್ದೆವು. ಅಲ್ಲದೇ ಅವರ ನಿರ್ಗಮಕ್ಕೆ ಭದ್ರತಾ ವ್ಯವಸ್ಥೆ ಮಾಡುವುದಾಗಿಯೂ ಹೇಳಿದ್ದೆವು. ಆದರೆ, ಚಿತ್ರವನ್ನು ನೋಡಿದ ನಂತರವೇ ತೆರಳುವುದಾಗಿ ಅಲ್ಲು ಅರ್ಜುನ್ ಹೇಳಿದ್ದರು’ ಎಂದು ತಿಳಿಸಿದ್ದಾರೆ.</p><p>ನಂತರ, ‘ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಒಳಗೆ ಹೋಗಿ ನಟನನ್ನು ಹೊರಗೆ ಕರೆತರಲಾಯಿತು’ ಎಂದು ತಿಳಿಸಿದ್ದಾರೆ.</p><p>ಅಲ್ಲು ಅರ್ಜುನ್ಗೆ ನೀಡಿರುವ ಮಧ್ಯಂತರ ಜಾಮೀನಿನ ವಿರುದ್ಧ ಪೊಲೀಸರು ಮೇಲ್ಮನವಿ ಸಲ್ಲಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಆಯುಕ್ತರು, ‘ಇದು ತನಿಖೆಯ ಭಾಗವಾಗಿದ್ದು, ಮುಂದಿನ ದಿನಗಳಲ್ಲಿ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದು ತಿಳಿಯಲಿದೆ’ ಎಂದಷ್ಟೆ ಹೇಳಿದ್ದಾರೆ.</p>.ಪುಷ್ಪ–2 ಸಿನಿಮಾ ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಬಂಧನ.ಕಾಲ್ತುಳಿತ ದುರಂತ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ಅಲ್ಲು ಅರ್ಜುನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ‘ಪುಷ್ಟ–2’ ಸಿನಿಮಾದ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ವಿಷಯವನ್ನು ನಟ ಅಲ್ಲು ಅರ್ಜುನ್ ಅವರಿಗೆ ಹೇಳಿದ್ದರೂ ಚಿತ್ರಮಂದಿರ ಬಿಟ್ಟು ಅವರು ತೆರಳಿರಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.</p><p>2024ರ ವಾರ್ಷಿಕ ಸಮಗ್ರ ವರದಿ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸಿ.ವಿ.ಆನಂದ್, ಕಾಲ್ತುಳಿತ ಸಂಭವಿಸಿದಾಗ ಉಂಟಾದ ಪರಿಸ್ಥಿತಿಯ ಕುರಿತು ಪೊಲೀಸರು ಮಾಡಿದ ವಿಡಿಯೊವನ್ನು ತೋರಿಸಿದ್ದಾರೆ.</p>.ಅನುಮತಿ ನಿರಾಕರಿಸಿದರೂ ಚಿತ್ರಮಂದಿರಕ್ಕೆ ಬಂದಿದ್ದ ಅಲ್ಲು: ಸಿಎಂ ರೇವಂತ ರೆಡ್ಡಿ.ಪುಷ್ಪ–2 ಕಾಲ್ತುಳಿತ: ಜನರ ಸುರಕ್ಷತೆಗಿಂತ ಸಿನಿಮಾ ಪ್ರಚಾರ ಹೆಚ್ಚು ಮುಖ್ಯವಲ್ಲ:DGP.<p>ಸುದ್ದಿ ವಾಹಿನಿ ಮತ್ತು ಮೊಬೈಲ್ ಫೋನ್ಗಳ ದೃಶ್ಯಗಳನ್ನು ಒಟ್ಟುಗೂಡಿಸಿ ಮಾಡಿದ ವಿಡಿಯೊ ಇದಾಗಿದ್ದು, ಅಲ್ಲು ಅರ್ಜುನ್ ಅವರು ಮಧ್ಯರಾತ್ರಿಯವರೆಗೂ ಚಿತ್ರಮಂದಿರದಲ್ಲಿಯೇ ಇರುವುದು ವಿಡಿಯೊದಲ್ಲಿ ಕಾಣಬಹುದು.</p><p>ವಿಡಿಯೊ ಕುರಿತು ಯಾವುದೇ ಪ್ರತಿಕ್ರಿಯೆ ನೀಡದ ಆಯುಕ್ತರು, ‘ಈ ಬಗ್ಗೆ ನೀವೇ(ಮಾಧ್ಯಮದವರು) ನಿರ್ಧಾರ ತೆಗೆದುಕೊಳ್ಳಬಹುದು’ ಎಂದಿದ್ದಾರೆ.</p><p>ಮುಂದುವರಿದು, ‘ಮಹಿಳೆಯ ಸಾವಿನ ಬಗ್ಗೆ ನಾನು ಮತ್ತು ಇತರ ಪೊಲೀಸ್ ಅಧಿಕಾರಿಗಳು ಅಲ್ಲು ಅರ್ಜುನ್ ಅವರ ಮ್ಯಾನೇಜರ್ಗೆ ಮಾಹಿತಿ ನೀಡಿ ನೀಡಿದ್ದೆವು. ನಟನನ್ನು ನೇರವಾಗಿ ಭೇಟಿಯಾಗಲು ಆಗ ನಮಗೆ ಅವಕಾಶವಿರಲಿಲ್ಲ’ ಎಂದು ಹೇಳಿದ್ದಾರೆ.</p>.ಪುಷ್ಪ–2: ಕಾಲ್ತುಳಿತ– ಗಾಯಗೊಂಡಿದ್ದ ಬಾಲಕನ ಭೇಟಿಯಾಗಿ ಸಾಂತ್ವನ ಹೇಳಿದ ಸುಕುಮಾರ್.ಕಾಲ್ತುಳಿತ ಪ್ರಕರಣ: ಬಾಲಕನ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅಲ್ಲು ಅರ್ಜುನ್.<p>‘ಈ ವಿಚಾರವನ್ನು ಅಲ್ಲು ಅರ್ಜುನ್ ಅವರಿಗೆ ತಿಳಿಸುವುದಾಗಿ ಅವರ ಸಿಬ್ಬಂದಿ ಹೇಳಿದ್ದರೂ ಹಾಗೆ ಮಾಡಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>‘ಕೊನೆಗೂ ನಟನನ್ನು ಭೇಟಿಯಾದ ನಾವು ಮಹಿಳೆಯ ಸಾವಿನ ಬಗ್ಗೆ ತಿಳಿಸಿ ತಕ್ಷಣ ಚಿತ್ರಮಂದಿರದಿಂದ ತೆರಳುವಂತೆ ತಿಳಿಸಿದ್ದೆವು. ಅಲ್ಲದೇ ಅವರ ನಿರ್ಗಮಕ್ಕೆ ಭದ್ರತಾ ವ್ಯವಸ್ಥೆ ಮಾಡುವುದಾಗಿಯೂ ಹೇಳಿದ್ದೆವು. ಆದರೆ, ಚಿತ್ರವನ್ನು ನೋಡಿದ ನಂತರವೇ ತೆರಳುವುದಾಗಿ ಅಲ್ಲು ಅರ್ಜುನ್ ಹೇಳಿದ್ದರು’ ಎಂದು ತಿಳಿಸಿದ್ದಾರೆ.</p><p>ನಂತರ, ‘ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಒಳಗೆ ಹೋಗಿ ನಟನನ್ನು ಹೊರಗೆ ಕರೆತರಲಾಯಿತು’ ಎಂದು ತಿಳಿಸಿದ್ದಾರೆ.</p><p>ಅಲ್ಲು ಅರ್ಜುನ್ಗೆ ನೀಡಿರುವ ಮಧ್ಯಂತರ ಜಾಮೀನಿನ ವಿರುದ್ಧ ಪೊಲೀಸರು ಮೇಲ್ಮನವಿ ಸಲ್ಲಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಆಯುಕ್ತರು, ‘ಇದು ತನಿಖೆಯ ಭಾಗವಾಗಿದ್ದು, ಮುಂದಿನ ದಿನಗಳಲ್ಲಿ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದು ತಿಳಿಯಲಿದೆ’ ಎಂದಷ್ಟೆ ಹೇಳಿದ್ದಾರೆ.</p>.ಪುಷ್ಪ–2 ಸಿನಿಮಾ ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಬಂಧನ.ಕಾಲ್ತುಳಿತ ದುರಂತ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ಅಲ್ಲು ಅರ್ಜುನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>