<p><strong>ತಿರುವನಂತಪುರ</strong>: ‘ದಿ ಕೇರಳ ಸ್ಟೋರಿ–2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ಗುರುವಾರ ಮಧ್ಯಂತರ ತಡೆ ನೀಡಿದೆ.</p><p>ಸೆನ್ಸಾರ್ ಮಂಡಳಿಯು ಚಲನಚಿತ್ರವನ್ನು ಪ್ರಮಾಣೀಕರಿಸುವಾಗ ಮಾರ್ಗಸೂಚಿಗಳನ್ನು ಮನದಲ್ಲಿ ಇಟ್ಟುಕೊಂಡಿಲ್ಲ ಎಂದು ಅದು ಬೇಸರ ವ್ಯಕ್ತಪಡಿಸಿದೆ.</p><p>ಸಿನಿಮಾ ಬಿಡುಗಡೆ ವಿರೋಧಿಸಿ ಸಲ್ಲಿಕೆಯಾದ ಎರಡು ಅರ್ಜಿಗಳ ಕುರಿತು ನ್ಯಾಯಮೂರ್ತಿ ಬೇಚು ಕುರಿಯನ್ ಥಾಮಸ್ ಅವರು ಆದೇಶ ಹೊರಡಿಸಿದ್ದಾರೆ.</p><p>ಇದೇ 27ರಂದು ಚಲನಚಿತ್ರ ಬಿಡುಗಡೆಗೆ ಚಿತ್ರ ತಂಡ ನಿರ್ಧರಿಸಿತ್ತು. </p><p>ಚಲನಚಿತ್ರವು ಸಾಮಾಜಿಕ ಸಾಮರಸ್ಯಕ್ಕೆ ಭಂಗ ತರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವ ಮಾರ್ಗಸೂಚಿಗಳನ್ನು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ಸಿ) ಪಾಲಿಸಿಲ್ಲ. ಬದಲಿಗೆ ಅದನ್ನು ನಿರ್ಲಕ್ಷಿಸಿರುವುದು ಸ್ಪಷ್ಟವಾಗಿದೆ ಎಂದು ನ್ಯಾಯಮೂರ್ತಿ ಆದೇಶದಲ್ಲಿ ಹೇಳಿದ್ದಾರೆ.</p><p>ಅಶಾಂತಿ ಸೃಷ್ಟಿಸುವ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕದಡುವ, ಸಾಮಾಜಿಕ ಸಾಮರಸ್ಯ ಹಾಳುಮಾಡುವ ಪ್ರವೃತ್ತಿಯನ್ನು ಹೊಂದಿರುವ ವಿಷಯದ ಪ್ರಸರಣವು ಭಾರತ ಸಂವಿಧಾನದ 19(1)(ಎ) ವಿಧಿಯಡಿ ಪ್ರತಿಪಾದಿಸಲಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಮೂರ್ತಿ ತಿಳಿಸಿದ್ದಾರೆ. </p><p>‘ದಿ ಕೇರಳ ಸ್ಟೋರಿ–2’ ಚಿತ್ರವನ್ನು ಫೆ.26ರಿಂದ 13 ದಿನಗಳವರೆಗೆ ಬಿಡುಗಡೆ ಮಾಡುವಂತಿಲ್ಲ. ಚಿತ್ರಕ್ಕೆ ನೀಡಲಾದ ಪ್ರಮಾಣಪತ್ರದ ವಿರುದ್ಧ ಅರ್ಜಿದಾರರಾದ ಶ್ರೀದೇವ್ ನಂಬೂದರಿ ಅವರು ಸಲ್ಲಿಸಿರುವ ಪರಿಷ್ಕರಣಾ ಅರ್ಜಿಯನ್ನು ಎರಡು ವಾರಗಳ ಒಳಗೆ ಪರಿಗಣಿಸಿ ಆದೇಶ ಹೊರಡಿಸುವಂತೆ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ‘ದಿ ಕೇರಳ ಸ್ಟೋರಿ–2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ಗುರುವಾರ ಮಧ್ಯಂತರ ತಡೆ ನೀಡಿದೆ.</p><p>ಸೆನ್ಸಾರ್ ಮಂಡಳಿಯು ಚಲನಚಿತ್ರವನ್ನು ಪ್ರಮಾಣೀಕರಿಸುವಾಗ ಮಾರ್ಗಸೂಚಿಗಳನ್ನು ಮನದಲ್ಲಿ ಇಟ್ಟುಕೊಂಡಿಲ್ಲ ಎಂದು ಅದು ಬೇಸರ ವ್ಯಕ್ತಪಡಿಸಿದೆ.</p><p>ಸಿನಿಮಾ ಬಿಡುಗಡೆ ವಿರೋಧಿಸಿ ಸಲ್ಲಿಕೆಯಾದ ಎರಡು ಅರ್ಜಿಗಳ ಕುರಿತು ನ್ಯಾಯಮೂರ್ತಿ ಬೇಚು ಕುರಿಯನ್ ಥಾಮಸ್ ಅವರು ಆದೇಶ ಹೊರಡಿಸಿದ್ದಾರೆ.</p><p>ಇದೇ 27ರಂದು ಚಲನಚಿತ್ರ ಬಿಡುಗಡೆಗೆ ಚಿತ್ರ ತಂಡ ನಿರ್ಧರಿಸಿತ್ತು. </p><p>ಚಲನಚಿತ್ರವು ಸಾಮಾಜಿಕ ಸಾಮರಸ್ಯಕ್ಕೆ ಭಂಗ ತರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವ ಮಾರ್ಗಸೂಚಿಗಳನ್ನು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ಸಿ) ಪಾಲಿಸಿಲ್ಲ. ಬದಲಿಗೆ ಅದನ್ನು ನಿರ್ಲಕ್ಷಿಸಿರುವುದು ಸ್ಪಷ್ಟವಾಗಿದೆ ಎಂದು ನ್ಯಾಯಮೂರ್ತಿ ಆದೇಶದಲ್ಲಿ ಹೇಳಿದ್ದಾರೆ.</p><p>ಅಶಾಂತಿ ಸೃಷ್ಟಿಸುವ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕದಡುವ, ಸಾಮಾಜಿಕ ಸಾಮರಸ್ಯ ಹಾಳುಮಾಡುವ ಪ್ರವೃತ್ತಿಯನ್ನು ಹೊಂದಿರುವ ವಿಷಯದ ಪ್ರಸರಣವು ಭಾರತ ಸಂವಿಧಾನದ 19(1)(ಎ) ವಿಧಿಯಡಿ ಪ್ರತಿಪಾದಿಸಲಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಮೂರ್ತಿ ತಿಳಿಸಿದ್ದಾರೆ. </p><p>‘ದಿ ಕೇರಳ ಸ್ಟೋರಿ–2’ ಚಿತ್ರವನ್ನು ಫೆ.26ರಿಂದ 13 ದಿನಗಳವರೆಗೆ ಬಿಡುಗಡೆ ಮಾಡುವಂತಿಲ್ಲ. ಚಿತ್ರಕ್ಕೆ ನೀಡಲಾದ ಪ್ರಮಾಣಪತ್ರದ ವಿರುದ್ಧ ಅರ್ಜಿದಾರರಾದ ಶ್ರೀದೇವ್ ನಂಬೂದರಿ ಅವರು ಸಲ್ಲಿಸಿರುವ ಪರಿಷ್ಕರಣಾ ಅರ್ಜಿಯನ್ನು ಎರಡು ವಾರಗಳ ಒಳಗೆ ಪರಿಗಣಿಸಿ ಆದೇಶ ಹೊರಡಿಸುವಂತೆ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>