<p><strong>ಹೈದರಾಬಾದ್</strong>: ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಪುಷ್ಪ–2 ಚಿತ್ರದ ನಿರ್ಮಾಪಕರು ₹50 ಲಕ್ಷ ಪರಿಹಾರ ನೀಡಿದ್ದಾರೆ.</p><p>ಮೃತ ಮಹಿಳೆಯ 8 ವರ್ಷದ ಮಗ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ ನಿರ್ಮಾಪಕ ನವೀನ್ ಯೆರ್ನೇನಿ ₹50 ಲಕ್ಷದ ಚೆಕ್ ಅನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಅಲ್ಲದೆ, ಮೃತ ಮಹಿಳೆಗೆ ಸಂತಾಪ ಸೂಚಿಸಿದ್ದಾರೆ.</p><p>ಈ ಬಗ್ಗೆ ವರದಿಗಾರರ ಜೊತೆ ಮಾತನಾಡಿದ ಯೆರ್ನೇನಿ, ಸಹಾಯದ ನಿರೀಕ್ಷೆಯಲ್ಲಿದ್ದ ಮಹಿಳೆಯ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಲಾಗಿದೆ ಎಂದು ಹೇಳಿದರು.</p><p>ಡಿಸೆಂಬರ್ 4ರಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ಪುಷ್ಪ–2 ಪ್ರದರ್ಶನದ ವೇಳೆ ನಟ ಅಲ್ಲು ಅರ್ಜುನ್ ಆಗಮನದ ಬಳಿಕ ನೂಕುನುಗ್ಗಲು ಉಂಟಾಗಿ ಸಂಭವಿಸಿದ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು. ಅವರ 8 ವರ್ಷದ ಮಗು ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದೆ.</p><p>ಪ್ರಕರಣ ಸಂಬಂಧ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಬಳಿಕ, ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.</p><p>ಭಾನುವಾರ ಅಲ್ಲು ಅರ್ಜುನ್ ಅವರ ಮನೆಗೆ ನುಗ್ಗಿದ್ದ ಕೆಲ ಪ್ರತಿಭನಾಕಾರರು ಮೃತ ಮಹಿಳೆಯ ಕುಟುಂಬಕ್ಕೆ ₹1 ಕೋಟಿ ಪರಿಹಾರಕ್ಕೆ ಒತ್ತಾಯಿಸಿ, ಹೂಕುಂಡಗಳನ್ನು ಧ್ವಂಸ ಮಾಡಿ, ಕಲ್ಲು ಮತ್ತು ಮೊಟ್ಟೆಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು.</p>.ಪುಷ್ಪ–2: ಕಾಲ್ತುಳಿತ– ಗಾಯಗೊಂಡಿದ್ದ ಬಾಲಕನ ಭೇಟಿಯಾಗಿ ಸಾಂತ್ವನ ಹೇಳಿದ ಸುಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಪುಷ್ಪ–2 ಚಿತ್ರದ ನಿರ್ಮಾಪಕರು ₹50 ಲಕ್ಷ ಪರಿಹಾರ ನೀಡಿದ್ದಾರೆ.</p><p>ಮೃತ ಮಹಿಳೆಯ 8 ವರ್ಷದ ಮಗ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ ನಿರ್ಮಾಪಕ ನವೀನ್ ಯೆರ್ನೇನಿ ₹50 ಲಕ್ಷದ ಚೆಕ್ ಅನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಅಲ್ಲದೆ, ಮೃತ ಮಹಿಳೆಗೆ ಸಂತಾಪ ಸೂಚಿಸಿದ್ದಾರೆ.</p><p>ಈ ಬಗ್ಗೆ ವರದಿಗಾರರ ಜೊತೆ ಮಾತನಾಡಿದ ಯೆರ್ನೇನಿ, ಸಹಾಯದ ನಿರೀಕ್ಷೆಯಲ್ಲಿದ್ದ ಮಹಿಳೆಯ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಲಾಗಿದೆ ಎಂದು ಹೇಳಿದರು.</p><p>ಡಿಸೆಂಬರ್ 4ರಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ಪುಷ್ಪ–2 ಪ್ರದರ್ಶನದ ವೇಳೆ ನಟ ಅಲ್ಲು ಅರ್ಜುನ್ ಆಗಮನದ ಬಳಿಕ ನೂಕುನುಗ್ಗಲು ಉಂಟಾಗಿ ಸಂಭವಿಸಿದ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು. ಅವರ 8 ವರ್ಷದ ಮಗು ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದೆ.</p><p>ಪ್ರಕರಣ ಸಂಬಂಧ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಬಳಿಕ, ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.</p><p>ಭಾನುವಾರ ಅಲ್ಲು ಅರ್ಜುನ್ ಅವರ ಮನೆಗೆ ನುಗ್ಗಿದ್ದ ಕೆಲ ಪ್ರತಿಭನಾಕಾರರು ಮೃತ ಮಹಿಳೆಯ ಕುಟುಂಬಕ್ಕೆ ₹1 ಕೋಟಿ ಪರಿಹಾರಕ್ಕೆ ಒತ್ತಾಯಿಸಿ, ಹೂಕುಂಡಗಳನ್ನು ಧ್ವಂಸ ಮಾಡಿ, ಕಲ್ಲು ಮತ್ತು ಮೊಟ್ಟೆಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು.</p>.ಪುಷ್ಪ–2: ಕಾಲ್ತುಳಿತ– ಗಾಯಗೊಂಡಿದ್ದ ಬಾಲಕನ ಭೇಟಿಯಾಗಿ ಸಾಂತ್ವನ ಹೇಳಿದ ಸುಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>