<p><strong>ಬೆಂಗಳೂರು:</strong> ನಟ ದರ್ಶನ್ ಅಭಿಮಾನಿಗಳ ಮೆಸೇಜ್ಗೂ, ರೇಣುಕಸ್ವಾಮಿ ಮೆಸೇಜ್ಗೂ ಯಾವುದೇ ವ್ಯತ್ಯಾಸ ಇಲ್ಲ ಎಂದು ನಟಿ ರಮ್ಯಾ ಕಿಡಿಕಾರಿದ್ದಾರೆ.</p>.<p>ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರು ಆರೋಪಿಗಳಿಗೆ ಜಾಮೀನು ನೀಡಿರುವ ಕರ್ನಾಟಕ ಹೈಕೋರ್ಟ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿತ್ತು. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ್ದ ರಮ್ಯಾ, ದೇಶದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಭರವಸೆಯ ಬೆಳಕು. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ ಎಂದು ಪೋಸ್ಟ್ ಮಾಡಿದ್ದರು.</p>.ಸುಪ್ರೀಂ ಕೋರ್ಟ್ ಭರವಸೆಯ ಬೆಳಕು|ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯದ ಭರವಸೆ:ರಮ್ಯಾ.<p>ಅಂದಿನಿಂದ (ಜುಲೈ 24) ರಮ್ಯಾ ಹಾಗೂ ದರ್ಶನ್ ಫ್ಯಾನ್ಸ್ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಾರ್ ನಡೆಯುತ್ತಿದೆ. </p>.<p>ಶನಿವಾರ (ಜುಲೈ 26) ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದ ರಮ್ಯಾ, 'ದರ್ಶನ್ ಅಭಿಮಾನಿಗಳಿಗೆ ನನ್ನ ಇನ್ಸ್ಟಾಗ್ರಾಮ್ಗೆ ಸ್ವಾಗತ. ರೇಣುಕಸ್ವಾಮಿ ಅವರ ಕುಟುಂಬಕ್ಕೆ ನ್ಯಾಯ ಏಕೆ ಬೇಕು ಎಂಬುದಕ್ಕೆ ನಿಮ್ಮ ಕಮೆಂಟ್ಗಳೇ ಸಾಕ್ಷಿ' ಎಂದಿದ್ದರು.</p>.<p>ಇದಕ್ಕೆ ದರ್ಶನ್ ಅಭಿಮಾನಿಗಳು ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ.</p>.<p>ಈ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಸಂದೇಶ ಹಂಚಿಕೊಂಡಿರುವ ರಮ್ಯಾ, 'ರೇಣುಕಸ್ವಾಮಿ ಮಾಡಿದ್ದ ಸಂದೇಶಕ್ಕೂ ದರ್ಶನ್ ಅಭಿಮಾನಿಗಳು ಮಾಡುವ ಸಂದೇಶಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ಇಂತಹ ಸ್ತ್ರೀದ್ವೇಷದ ಮನಸ್ಥಿತಿಯ ಕಾರಣದಿಂದಲೇ ಸಮಾಜದಲ್ಲಿ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ' ಎಂದಿದ್ದಾರೆ.</p>.<p>ಅದರ ಜೊತೆಗೆ ದರ್ಶನ್ ಅಭಿಮಾನಿಗಳು ಅವರಿಗೆ ಮಾಡಿರುವ ಅಶ್ಲೀಲ ಸಂದೇಶಗಳನ್ನು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. </p>.ಧರ್ಮಸ್ಥಳ ಪ್ರಕರಣ: ನ್ಯಾಯಯುತ ತನಿಖೆಗೆ ನಟಿ ರಮ್ಯಾ, ನಟ ರಾಕೇಶ್ ಅಡಿಗ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಟ ದರ್ಶನ್ ಅಭಿಮಾನಿಗಳ ಮೆಸೇಜ್ಗೂ, ರೇಣುಕಸ್ವಾಮಿ ಮೆಸೇಜ್ಗೂ ಯಾವುದೇ ವ್ಯತ್ಯಾಸ ಇಲ್ಲ ಎಂದು ನಟಿ ರಮ್ಯಾ ಕಿಡಿಕಾರಿದ್ದಾರೆ.</p>.<p>ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರು ಆರೋಪಿಗಳಿಗೆ ಜಾಮೀನು ನೀಡಿರುವ ಕರ್ನಾಟಕ ಹೈಕೋರ್ಟ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿತ್ತು. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ್ದ ರಮ್ಯಾ, ದೇಶದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಭರವಸೆಯ ಬೆಳಕು. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ ಎಂದು ಪೋಸ್ಟ್ ಮಾಡಿದ್ದರು.</p>.ಸುಪ್ರೀಂ ಕೋರ್ಟ್ ಭರವಸೆಯ ಬೆಳಕು|ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯದ ಭರವಸೆ:ರಮ್ಯಾ.<p>ಅಂದಿನಿಂದ (ಜುಲೈ 24) ರಮ್ಯಾ ಹಾಗೂ ದರ್ಶನ್ ಫ್ಯಾನ್ಸ್ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಾರ್ ನಡೆಯುತ್ತಿದೆ. </p>.<p>ಶನಿವಾರ (ಜುಲೈ 26) ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದ ರಮ್ಯಾ, 'ದರ್ಶನ್ ಅಭಿಮಾನಿಗಳಿಗೆ ನನ್ನ ಇನ್ಸ್ಟಾಗ್ರಾಮ್ಗೆ ಸ್ವಾಗತ. ರೇಣುಕಸ್ವಾಮಿ ಅವರ ಕುಟುಂಬಕ್ಕೆ ನ್ಯಾಯ ಏಕೆ ಬೇಕು ಎಂಬುದಕ್ಕೆ ನಿಮ್ಮ ಕಮೆಂಟ್ಗಳೇ ಸಾಕ್ಷಿ' ಎಂದಿದ್ದರು.</p>.<p>ಇದಕ್ಕೆ ದರ್ಶನ್ ಅಭಿಮಾನಿಗಳು ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ.</p>.<p>ಈ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಸಂದೇಶ ಹಂಚಿಕೊಂಡಿರುವ ರಮ್ಯಾ, 'ರೇಣುಕಸ್ವಾಮಿ ಮಾಡಿದ್ದ ಸಂದೇಶಕ್ಕೂ ದರ್ಶನ್ ಅಭಿಮಾನಿಗಳು ಮಾಡುವ ಸಂದೇಶಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ಇಂತಹ ಸ್ತ್ರೀದ್ವೇಷದ ಮನಸ್ಥಿತಿಯ ಕಾರಣದಿಂದಲೇ ಸಮಾಜದಲ್ಲಿ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ' ಎಂದಿದ್ದಾರೆ.</p>.<p>ಅದರ ಜೊತೆಗೆ ದರ್ಶನ್ ಅಭಿಮಾನಿಗಳು ಅವರಿಗೆ ಮಾಡಿರುವ ಅಶ್ಲೀಲ ಸಂದೇಶಗಳನ್ನು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. </p>.ಧರ್ಮಸ್ಥಳ ಪ್ರಕರಣ: ನ್ಯಾಯಯುತ ತನಿಖೆಗೆ ನಟಿ ರಮ್ಯಾ, ನಟ ರಾಕೇಶ್ ಅಡಿಗ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>