<p><strong>ಹೈದರಾಬಾದ್</strong>: ತೆಲುಗು ನಟ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ– 2’ ಚಿತ್ರದ ದೃಶ್ಯವೊಂದರಲ್ಲಿ ಪೊಲೀಸರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ತೆಲಂಗಾಣ ಕಾಂಗ್ರೆಸ್ ನಾಯಕ ತಿನ್ಮಾರ್ ಮಲ್ಲಣ್ಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.</p><p>ಮೇಡಿಪಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ ಚಿತ್ರದ ನಾಯಕ ನಟ ಅಲ್ಲು ಅರ್ಜುನ್, ನಿರ್ದೇಶಕ ಸುಕುಮಾರ್ ಮತ್ತು ನಿರ್ಮಾಪಕರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.</p><p>ಚಿತ್ರದ ಒಂದು ದೃಶ್ಯದಲ್ಲಿ ಪೊಲೀಸ್ ಅಧಿಕಾರಿ ಬನ್ವರ್ ಸಿಂಗ್ ಶೇಖಾವತ್(ಫಹದ್ ಫಾಸಿಲ್) ಈಜುಕೊಳದಲ್ಲಿ ಇರುವಾಗ ಪುಷ್ಪರಾಜ್(ಅಲ್ಲು ಅರ್ಜುನ್) ಮೂತ್ರ ವಿಸರ್ಜನೆ ಮಾಡುತ್ತಾನೆ. </p><p>ಈ ದೃಶ್ಯವನ್ನು ಅವಹೇಳನಕಾರಿ ಎಂದು ಕರೆದಿರುವ ಮಲ್ಲಣ್ಣ, ಪೊಲೀಸರಿಗೆ ಮಾಡಿದ ಅವಮಾನ ಎಂದು ಹೇಳಿದ್ದಾರೆ. ಅಲ್ಲದೇ ಚಿತ್ರ ನಿರ್ಮಾಪಕರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.</p><p>ಸಂಧ್ಯಾ ಚಿತ್ರಮಂದಿರಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.</p><p>ಕಾಲ್ತುಳಿತ ಪ್ರಕರಣದಲ್ಲಿ ಮಹಿಳೆಯೊಬ್ಬಳು ಮೃತಪಟ್ಟು, ಆಕೆಯ ಮಗ ಗಾಯಗೊಂಡಿದ್ದನು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ತೆಲುಗು ನಟ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ– 2’ ಚಿತ್ರದ ದೃಶ್ಯವೊಂದರಲ್ಲಿ ಪೊಲೀಸರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ತೆಲಂಗಾಣ ಕಾಂಗ್ರೆಸ್ ನಾಯಕ ತಿನ್ಮಾರ್ ಮಲ್ಲಣ್ಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.</p><p>ಮೇಡಿಪಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ ಚಿತ್ರದ ನಾಯಕ ನಟ ಅಲ್ಲು ಅರ್ಜುನ್, ನಿರ್ದೇಶಕ ಸುಕುಮಾರ್ ಮತ್ತು ನಿರ್ಮಾಪಕರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.</p><p>ಚಿತ್ರದ ಒಂದು ದೃಶ್ಯದಲ್ಲಿ ಪೊಲೀಸ್ ಅಧಿಕಾರಿ ಬನ್ವರ್ ಸಿಂಗ್ ಶೇಖಾವತ್(ಫಹದ್ ಫಾಸಿಲ್) ಈಜುಕೊಳದಲ್ಲಿ ಇರುವಾಗ ಪುಷ್ಪರಾಜ್(ಅಲ್ಲು ಅರ್ಜುನ್) ಮೂತ್ರ ವಿಸರ್ಜನೆ ಮಾಡುತ್ತಾನೆ. </p><p>ಈ ದೃಶ್ಯವನ್ನು ಅವಹೇಳನಕಾರಿ ಎಂದು ಕರೆದಿರುವ ಮಲ್ಲಣ್ಣ, ಪೊಲೀಸರಿಗೆ ಮಾಡಿದ ಅವಮಾನ ಎಂದು ಹೇಳಿದ್ದಾರೆ. ಅಲ್ಲದೇ ಚಿತ್ರ ನಿರ್ಮಾಪಕರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.</p><p>ಸಂಧ್ಯಾ ಚಿತ್ರಮಂದಿರಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.</p><p>ಕಾಲ್ತುಳಿತ ಪ್ರಕರಣದಲ್ಲಿ ಮಹಿಳೆಯೊಬ್ಬಳು ಮೃತಪಟ್ಟು, ಆಕೆಯ ಮಗ ಗಾಯಗೊಂಡಿದ್ದನು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>