<p><strong>ಬೆಂಗಳೂರು:</strong> ಬಿಗ್ ಬಾಸ್ 11ನೇ ಆವೃತ್ತಿಯ ಕೊನೆಯ ಕಿಚ್ಚನ ಪಂಚಾಯ್ತಿಯನ್ನು ಸುದೀಪ್ ಶನಿವಾರ ನಡೆಸಿಕೊಟ್ಟಿದ್ದು, ಫಿನಾಲೆ ವಾರಕ್ಕೂ ಮುನ್ನವೇ ಗೌತಮಿ ಜಾಧವ್ ಎಲಿಮಿನೇಟ್ ಆಗಿದ್ದಾರೆ. </p><p>ವಾರದ ಮಧ್ಯೆ ಎಲಿಮಿನೇಷನ್ ಮಾಡಲಾಗುತ್ತದೆ ಎಂದು ಘೋಷಿಸಿದ್ದರೂ ಟಾಸ್ಕ್ ವಿಚಾರಗಳಲ್ಲಾದ ಗೊಂದಲಗಳಿಂದ ಟಾಸ್ಕ್ ಮತ್ತು ಮಿಡ್ ವೀಕ್ ಎಲಿಮಿನೇಷನ್ ರದ್ದು ಮಾಡಲಾಗಿತ್ತು.</p><p>ವಾರಾಂತ್ಯ ಗೌತಮಿ ಮನೆಯಿಂದ ಹೊರಹೋಗಿದ್ದು, ಭಾನುವಾರದ ಸಂಚಿಕೆಯಲ್ಲಿ ಧನರಾಜ್ ಆಚಾರ್ ಹೊರಹೋಗಿದ್ದಾರೆ ಎನ್ನಲಾಗಿದೆ. </p><p>ನಾಮಿನೇಷನ್ನಲ್ಲಿ ಭವ್ಯಾ, ಮಂಜು, ಧನರಾಜ್, ರಜತ್ ಇದ್ದಾರೆ. ಫಿನಾಲೆಗೆ ಹನುಮಂತು, ತ್ರಿವಿಕ್ರಮ್ ಮತ್ತು ಮೋಕ್ಷಿತಾ ಆಯ್ಕೆಯಾಗಿದ್ದಾರೆ. </p><p> ಶನಿವಾರ ಬಿಗ್ ಬಾಸ್ ಫಿನಾಲೆಯ ಟ್ರೋಫಿಯನ್ನು ಅನಾವರಣ ಮಾಡಲಾಗಿದೆ. </p><p>ಭಾನುವಾರದ ಸಂಚಿಕೆಯ ಪ್ರೊಮೊದಲ್ಲಿ ಭವ್ಯಾ ಮತ್ತು ತ್ರಿವಿಕ್ರಮ್ ಅವರ ಪ್ರೀತಿಯ ವಿಚಾರ ಪ್ರಸ್ತಾಪವಾಗಿದೆ. ಕಳೆದ ವಾರ ಮನೆಗೆ ಬಂದಿದ್ದ ಹಳೆಯ ಸ್ಪರ್ಧಿಗಳು ಎಲ್ಲರನ್ನೂ ರಂಜಿಸಿದ್ದರು. ಈ ನಡುವೆ ಗೋಲ್ಡ್ ಸುರೇಶ್ ಅವರು ಭವ್ಯಾ ಅವರ ಬಳಿ, ‘ತ್ರಿವಿಕ್ರಮ್ ಅವರ ಪ್ರೇಮ ನಿವೇದನೆಯನ್ನು ಒಪ್ಪಿಕೊಂಡಿರಾ’ ಎಂದು ಕೇಳಿದ್ದಾರೆ. ಇದೇ ವಿಚಾರವಾಗಿ ಸುದೀಪ್ ಮಾತನಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಗ್ ಬಾಸ್ 11ನೇ ಆವೃತ್ತಿಯ ಕೊನೆಯ ಕಿಚ್ಚನ ಪಂಚಾಯ್ತಿಯನ್ನು ಸುದೀಪ್ ಶನಿವಾರ ನಡೆಸಿಕೊಟ್ಟಿದ್ದು, ಫಿನಾಲೆ ವಾರಕ್ಕೂ ಮುನ್ನವೇ ಗೌತಮಿ ಜಾಧವ್ ಎಲಿಮಿನೇಟ್ ಆಗಿದ್ದಾರೆ. </p><p>ವಾರದ ಮಧ್ಯೆ ಎಲಿಮಿನೇಷನ್ ಮಾಡಲಾಗುತ್ತದೆ ಎಂದು ಘೋಷಿಸಿದ್ದರೂ ಟಾಸ್ಕ್ ವಿಚಾರಗಳಲ್ಲಾದ ಗೊಂದಲಗಳಿಂದ ಟಾಸ್ಕ್ ಮತ್ತು ಮಿಡ್ ವೀಕ್ ಎಲಿಮಿನೇಷನ್ ರದ್ದು ಮಾಡಲಾಗಿತ್ತು.</p><p>ವಾರಾಂತ್ಯ ಗೌತಮಿ ಮನೆಯಿಂದ ಹೊರಹೋಗಿದ್ದು, ಭಾನುವಾರದ ಸಂಚಿಕೆಯಲ್ಲಿ ಧನರಾಜ್ ಆಚಾರ್ ಹೊರಹೋಗಿದ್ದಾರೆ ಎನ್ನಲಾಗಿದೆ. </p><p>ನಾಮಿನೇಷನ್ನಲ್ಲಿ ಭವ್ಯಾ, ಮಂಜು, ಧನರಾಜ್, ರಜತ್ ಇದ್ದಾರೆ. ಫಿನಾಲೆಗೆ ಹನುಮಂತು, ತ್ರಿವಿಕ್ರಮ್ ಮತ್ತು ಮೋಕ್ಷಿತಾ ಆಯ್ಕೆಯಾಗಿದ್ದಾರೆ. </p><p> ಶನಿವಾರ ಬಿಗ್ ಬಾಸ್ ಫಿನಾಲೆಯ ಟ್ರೋಫಿಯನ್ನು ಅನಾವರಣ ಮಾಡಲಾಗಿದೆ. </p><p>ಭಾನುವಾರದ ಸಂಚಿಕೆಯ ಪ್ರೊಮೊದಲ್ಲಿ ಭವ್ಯಾ ಮತ್ತು ತ್ರಿವಿಕ್ರಮ್ ಅವರ ಪ್ರೀತಿಯ ವಿಚಾರ ಪ್ರಸ್ತಾಪವಾಗಿದೆ. ಕಳೆದ ವಾರ ಮನೆಗೆ ಬಂದಿದ್ದ ಹಳೆಯ ಸ್ಪರ್ಧಿಗಳು ಎಲ್ಲರನ್ನೂ ರಂಜಿಸಿದ್ದರು. ಈ ನಡುವೆ ಗೋಲ್ಡ್ ಸುರೇಶ್ ಅವರು ಭವ್ಯಾ ಅವರ ಬಳಿ, ‘ತ್ರಿವಿಕ್ರಮ್ ಅವರ ಪ್ರೇಮ ನಿವೇದನೆಯನ್ನು ಒಪ್ಪಿಕೊಂಡಿರಾ’ ಎಂದು ಕೇಳಿದ್ದಾರೆ. ಇದೇ ವಿಚಾರವಾಗಿ ಸುದೀಪ್ ಮಾತನಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>