ವಿಶ್ವವಿದ್ಯಾಲಯಗಳು, ಕಾಲೇಜುಗಳು ಸೇರಿದಂತೆ ಉನ್ನತ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ಭಾರಿ ಬದಲಾವಣೆ ತರಲು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮುಂದಾಗಿದೆ. ಅಧ್ಯಾಪಕರು, ಗ್ರಂಥಪಾಲಕರು ಮುಂತಾದ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡುವ ಹೊಸ ಕರಡು ನಿಯಮಾವಳಿಯನ್ನು ರೂಪಿಸಿದೆ. ಮುಖ್ಯವಾಗಿ, ವಿವಿ ಕುಲಪತಿ ಆಯ್ಕೆಯ ವಿಚಾರದಲ್ಲಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸಿ, ರಾಜ್ಯಪಾಲರಿಗೆ ಹೆಚ್ಚು ಅಧಿಕಾರ ನೀಡುವ ಬಗ್ಗೆ ಪ್ರಸ್ತಾವ ಮಾಡಲಾಗಿದೆ. ಯುಜಿಸಿಯ ಕರಡು ನಿಯಮಾವಳಿಗೆ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಮತ್ತು ಶೈಕ್ಷಣಿಕ ವಲಯದಲ್ಲೂ ವಿರೋಧ ವ್ಯಕ್ತವಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.