‘ಸಂಪಾಜೆ ಘಾಟಿ’ ಎಂದೇ ಹೆಸರಾದ ರಾಷ್ಟ್ರೀಯ ಹೆದ್ದಾರಿ 275 ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 60 ಕಿ.ಮೀ ಇದೆ. ಇಲ್ಲಿ ಪ್ರತಿ ಮಳೆಗಾಲದಲ್ಲೂ ಅಲ್ಲಲ್ಲಿ ರಸ್ತೆಗೆ ಮಣ್ಣು ಕುಸಿದು ಸಂಚಾರ ಸ್ಥಗಿತಗೊಳ್ಳುತ್ತಿರುತ್ತದೆ. ಆಗ ಬಳಸು ಮಾರ್ಗದಲ್ಲಿ ವಾಹನಗಳು ಸಂಚರಿಸಬೇಕಿದೆ.
ಮಡಿಕೇರಿ– ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿರುವ ಕೊಡಗು ಜಿಲ್ಲಾಧಿಕಾರಿ ಕಚೇರಿಯ ತಡೆಗೋಡೆ ಕಾಮಗಾರಿ ಇನ್ನೂ ಮುಕ್ತಾಯಗೊಂಡಿಲ್ಲ
ಆಂಧ್ರಪ್ರದೇಶದ ಕೃಷಿ ಇನ್ಫ್ರಾಟೆಕ್ ಕಂಪನಿ ಟೆಂಡರ್ ಪಡೆದುಕೊಂಡಿದ್ದು ಒಂದೂವರೆ ವರ್ಷ ಕಾಲಮಿತಿ ನಿಗದಿಪಡಿಸಲಾಗಿದೆ. ಕುಶಾಲನಗರದಿಂದ ಸಂಪಾಜೆಯವರೆಗೆ ತಡೆಗೋಡೆಗಳನ್ನು ಕಟ್ಟಲಾಗುತ್ತದೆ. ಪ್ರತಿ ವರ್ಷ ಕುಸಿಯುವ ಕತ್ರೋಜಿಯೂ ಇದರಲ್ಲಿ ಸೇರಿದೆ
ಜಿ.ಎಚ್.ಗಿರೀಶ್ ರಾಷ್ಟ್ರೀಯ ಹೆದ್ದಾರಿ ಮಡಿಕೇರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್