<p><strong>ಸುಕ್ಮಾ</strong>: ಛತ್ತೀಸಗಢದ ಬಿಜಾಪುರದಲ್ಲಿ ನಡೆದ ಸ್ಫೋಟದಲ್ಲಿ ಎಂಟು ಪೊಲೀಸ್ ಸಿಬ್ಬಂದಿ ಮತ್ತು ಚಾಲಕ ಸಾವಿಗೀಡಾದ ಒಂದು ದಿನದ ನಂತರ, ಭದ್ರತಾ ಪಡೆಗಳು ಇಂದು ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿಗಳು ಹುದುಗಿಸಿದ್ದ 10 ಕೆ.ಜಿ ಸುಧಾರಿತ ಸ್ಫೋಟಕ ಸಾಧನವನ್ನು(ಐಇಡಿ) ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಮತ್ತು ಜಿಲ್ಲಾ ಪೊಲೀಸರ ತಂಡವು ಕೊಂಟಾ-ಗೋಲಪಲ್ಲಿ ರಸ್ತೆಯ ಬೆಲ್ಪೊಚ್ಚ ಗ್ರಾಮದ ಬಳಿ ಸ್ಫೋಟಕ ಸಾಧನವನ್ನು ಪತ್ತೆ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ರಸ್ತೆಯಲ್ಲಿ ಐಇಡಿ ಹುದುಗಿಸಿರುವುದನ್ನು ಪತ್ತೆಮಾಡಿದ ಭದ್ರತಾ ಸಿಬ್ಬಂದಿ ದೊಡ್ಡ ಅಪಾಯವನ್ನು ತಡೆಗಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ಬಿಜಾಪುರ ಜಿಲ್ಲೆಯ ಕುಟ್ರು ಪೊಲೀಸ್ ಠಾಣೆ ವ್ಯಾಪ್ತಿಯ ಅಂಬೇಲಿ ಗ್ರಾಮದ ಬಳಿ ನಕ್ಸಲರು ಸೋಮವಾರ 60-70 ಕೆ.ಜಿ ತೂಕದ ಐಇಡಿ ಬಳಸಿ ಭದ್ರತಾ ಸಿಬ್ಬಂದಿಯ ವಾಹನವನ್ನು ಸ್ಫೋಟಿಸಿದ್ದರು. ಈ ವಿಧ್ವಂಸಕ ಕೃತ್ಯದಲ್ಲಿ ಎಂಟು ಮಂದಿ ಭದ್ರತಾ ಸಿಬ್ಬಂದಿ, ಎಸ್ಯುವಿಯಲ್ಲಿ ಪ್ರಯಾಣಿಸುತ್ತಿದ್ದ ರಾಜ್ಯ ಪೊಲೀಸ್ನ ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ) ಮತ್ತು ಬಸ್ತಾರ್ ಫೈಟರ್ಸ್ ಘಟಕಗಳ ತಲಾ ನಾಲ್ವರು ಮತ್ತು ವಾಹನದ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದರು.</p><p>ಸುಕ್ಮಾ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ನಕ್ಸಲರು ಆಗಾಗ್ಗೆ ಸ್ಫೋಟಕಗಳನ್ನು ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಕ್ಮಾ</strong>: ಛತ್ತೀಸಗಢದ ಬಿಜಾಪುರದಲ್ಲಿ ನಡೆದ ಸ್ಫೋಟದಲ್ಲಿ ಎಂಟು ಪೊಲೀಸ್ ಸಿಬ್ಬಂದಿ ಮತ್ತು ಚಾಲಕ ಸಾವಿಗೀಡಾದ ಒಂದು ದಿನದ ನಂತರ, ಭದ್ರತಾ ಪಡೆಗಳು ಇಂದು ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿಗಳು ಹುದುಗಿಸಿದ್ದ 10 ಕೆ.ಜಿ ಸುಧಾರಿತ ಸ್ಫೋಟಕ ಸಾಧನವನ್ನು(ಐಇಡಿ) ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಮತ್ತು ಜಿಲ್ಲಾ ಪೊಲೀಸರ ತಂಡವು ಕೊಂಟಾ-ಗೋಲಪಲ್ಲಿ ರಸ್ತೆಯ ಬೆಲ್ಪೊಚ್ಚ ಗ್ರಾಮದ ಬಳಿ ಸ್ಫೋಟಕ ಸಾಧನವನ್ನು ಪತ್ತೆ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ರಸ್ತೆಯಲ್ಲಿ ಐಇಡಿ ಹುದುಗಿಸಿರುವುದನ್ನು ಪತ್ತೆಮಾಡಿದ ಭದ್ರತಾ ಸಿಬ್ಬಂದಿ ದೊಡ್ಡ ಅಪಾಯವನ್ನು ತಡೆಗಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ಬಿಜಾಪುರ ಜಿಲ್ಲೆಯ ಕುಟ್ರು ಪೊಲೀಸ್ ಠಾಣೆ ವ್ಯಾಪ್ತಿಯ ಅಂಬೇಲಿ ಗ್ರಾಮದ ಬಳಿ ನಕ್ಸಲರು ಸೋಮವಾರ 60-70 ಕೆ.ಜಿ ತೂಕದ ಐಇಡಿ ಬಳಸಿ ಭದ್ರತಾ ಸಿಬ್ಬಂದಿಯ ವಾಹನವನ್ನು ಸ್ಫೋಟಿಸಿದ್ದರು. ಈ ವಿಧ್ವಂಸಕ ಕೃತ್ಯದಲ್ಲಿ ಎಂಟು ಮಂದಿ ಭದ್ರತಾ ಸಿಬ್ಬಂದಿ, ಎಸ್ಯುವಿಯಲ್ಲಿ ಪ್ರಯಾಣಿಸುತ್ತಿದ್ದ ರಾಜ್ಯ ಪೊಲೀಸ್ನ ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ) ಮತ್ತು ಬಸ್ತಾರ್ ಫೈಟರ್ಸ್ ಘಟಕಗಳ ತಲಾ ನಾಲ್ವರು ಮತ್ತು ವಾಹನದ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದರು.</p><p>ಸುಕ್ಮಾ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ನಕ್ಸಲರು ಆಗಾಗ್ಗೆ ಸ್ಫೋಟಕಗಳನ್ನು ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>