<p><strong>ನಾರಾಯಣಪುರ</strong>: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ದಂಪತಿ ಸೇರಿದಂತೆ 19 ನಕ್ಸಲರು ಇಂದು (ಸೋಮವಾರ) ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಇವರು ಮಾವೋವಾದಿಗಳ ಪಮೇದ್ ಪ್ರದೇಶ ಸಮಿತಿ ಮತ್ತು ಆಂಧ್ರ ಒಡಿಶಾ ಗಡಿ (ಎಒಬಿ) ವಿಭಾಗಕ್ಕೆ ಸೇರಿದ ಕಾರ್ಯಕರ್ತರು. ಪೊಲೀಸ್, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.</p><p>ಪೊಳ್ಳು ಮಾವೋವಾದಿ ಸಿದ್ಧಾಂತದಿಂದ ನಿರಾಶೆ ಅನುಭವಿಸಿ ಮತ್ತು ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ಬೇಸತ್ತು ಇವರು ಶರಣಾಗಿದ್ದಾರೆ ಎಂದು ಬಿಜಾಪುರದ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.</p>.ಮಣಿಪುರ ಗಲಭೆ: ಅಸ್ಸಾಂನ ಗುವಾಹಟಿಯಲ್ಲಿ ವಿಚಾರಣೆ ನಡೆಸಲು SC ನಿರ್ದೇಶನ.IPL 2025: ಆರ್ಸಿಬಿಯ ಮಾಜಿ ನಾಯಕ ಡುಪ್ಲೆಸಿ ಡೆಲ್ಲಿ ಕ್ಯಾಪಿಟಲ್ಸ್ಗೆ ಉಪನಾಯಕ.ಪ್ಯಾಂಕ್ರಿಯಾಸ್ ಕ್ಯಾನ್ಸರ್ಗೆ ಲಸಿಕೆ: ಭಾರತೀಯ ಡಾ.ವಿನೋದ್ ತಂಡದ ಯಶಸ್ವಿ ಪ್ರಯೋಗ. <p>ದೇವ ಪದಮ್ (30) ಮತ್ತು ಅವರ ಪತ್ನಿ ದುಲೆ ಕಲ್ಮು (28) ಮಾವೋವಾದಿಗಳ ಬೆಟಾಲಿಯನ್ ನಂ.1ರಲ್ಲಿ ಸದಸ್ಯರಾಗಿ ಸಕ್ರಿಯರಾಗಿದ್ದರು. ಇವರ ಸುಳಿವು ನೀಡಿದವರಿಗೆ ಸರ್ಕಾರ ಬಹುಮಾನವನ್ನು ಘೋಷಿಸಿತ್ತು.</p><p>ನಿಯ ನೆಲ್ಲನಾರ್' (ನಿಮ್ಮ ಒಳ್ಳೆಯ ಗ್ರಾಮ) ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಂದ ಪ್ರಭಾವಿತರಾಗಿದ್ದು, ಭವಿಷ್ಯದಲ್ಲಿ ಜನಸಾಮಾನ್ಯರಂತೆ ಜೀವನ ನಡೆಸಲು ಬಯಸುವುದಾಗಿ ಅವರು(ನಕ್ಸಲರು) ಹೇಳಿರುವುದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ.</p>.ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಲಿಂಗ ಸಮಾನತೆ ಕಾಪಾಡಿ: ಸಚಿವಾಲಯಕ್ಕೆ ದೆಹಲಿ HC.ಇಳಿಕೆಯಾಗದ ತೈಲ ಬೆಲೆ: ಮೋದಿ ಸರ್ಕಾರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ. <p>ಜಿಲ್ಲಾ ಮೀಸಲು ಪಡೆ (ಡಿಆರ್ಜಿ), ಬಸ್ತಾರ್ ಫೈಟರ್ಸ್, ವಿಶೇಷ ಕಾರ್ಯಪಡೆ (ಎಸ್ಟಿಎಫ್), ಸಿಆರ್ಪಿಎಫ್ ಮತ್ತು ಗಣ್ಯ ಘಟಕ ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಪಡೆಗಳ ಕಾರ್ಯಾಚರಣೆಯು ನಕ್ಸಲರ ಶರಣಾಗತಿಗೆ ಪ್ರಮುಖ ಪಾತ್ರ ವಹಿಸಿವೆ ಎಂದು ಯಾದವ್ ತಿಳಿಸಿದ್ದಾರೆ.</p><p>ಶರಣಾದ ಎಲ್ಲಾ ನಕ್ಸಲರಿಗೆ ತಲಾ ₹25,000 ನೆರವು ನೀಡಲಾಗಿದ್ದು, ಸರ್ಕಾರಿ ನಿಯಮಗಳ ಪ್ರಕಾರ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ.</p><p>ಈ ಕಾರ್ಯಾಚರಣೆಯೊಂದಿಗೆ ಈ ವರ್ಷ ಇದುವರೆಗೆ ಬಿಜಾಪುರ ಜಿಲ್ಲೆಯಲ್ಲಿ 84 ನಕ್ಸಲರು ಶರಣಾಗಿದ್ದಾರೆ.</p>.ಕೃಷ್ಣನ ಬೋಧನೆಗಳು ಶಕ್ತಿ ನೀಡುತ್ತವೆ ಎಂದ US ಗುಪ್ತಚರ ವಿಭಾಗದ ನಿರ್ದೇಶಕಿ ತುಳಸಿ.ಪ್ರಚೋದನಕಾರಿ ಹೇಳಿಕೆ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾರಾಯಣಪುರ</strong>: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ದಂಪತಿ ಸೇರಿದಂತೆ 19 ನಕ್ಸಲರು ಇಂದು (ಸೋಮವಾರ) ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಇವರು ಮಾವೋವಾದಿಗಳ ಪಮೇದ್ ಪ್ರದೇಶ ಸಮಿತಿ ಮತ್ತು ಆಂಧ್ರ ಒಡಿಶಾ ಗಡಿ (ಎಒಬಿ) ವಿಭಾಗಕ್ಕೆ ಸೇರಿದ ಕಾರ್ಯಕರ್ತರು. ಪೊಲೀಸ್, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.</p><p>ಪೊಳ್ಳು ಮಾವೋವಾದಿ ಸಿದ್ಧಾಂತದಿಂದ ನಿರಾಶೆ ಅನುಭವಿಸಿ ಮತ್ತು ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ಬೇಸತ್ತು ಇವರು ಶರಣಾಗಿದ್ದಾರೆ ಎಂದು ಬಿಜಾಪುರದ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.</p>.ಮಣಿಪುರ ಗಲಭೆ: ಅಸ್ಸಾಂನ ಗುವಾಹಟಿಯಲ್ಲಿ ವಿಚಾರಣೆ ನಡೆಸಲು SC ನಿರ್ದೇಶನ.IPL 2025: ಆರ್ಸಿಬಿಯ ಮಾಜಿ ನಾಯಕ ಡುಪ್ಲೆಸಿ ಡೆಲ್ಲಿ ಕ್ಯಾಪಿಟಲ್ಸ್ಗೆ ಉಪನಾಯಕ.ಪ್ಯಾಂಕ್ರಿಯಾಸ್ ಕ್ಯಾನ್ಸರ್ಗೆ ಲಸಿಕೆ: ಭಾರತೀಯ ಡಾ.ವಿನೋದ್ ತಂಡದ ಯಶಸ್ವಿ ಪ್ರಯೋಗ. <p>ದೇವ ಪದಮ್ (30) ಮತ್ತು ಅವರ ಪತ್ನಿ ದುಲೆ ಕಲ್ಮು (28) ಮಾವೋವಾದಿಗಳ ಬೆಟಾಲಿಯನ್ ನಂ.1ರಲ್ಲಿ ಸದಸ್ಯರಾಗಿ ಸಕ್ರಿಯರಾಗಿದ್ದರು. ಇವರ ಸುಳಿವು ನೀಡಿದವರಿಗೆ ಸರ್ಕಾರ ಬಹುಮಾನವನ್ನು ಘೋಷಿಸಿತ್ತು.</p><p>ನಿಯ ನೆಲ್ಲನಾರ್' (ನಿಮ್ಮ ಒಳ್ಳೆಯ ಗ್ರಾಮ) ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಂದ ಪ್ರಭಾವಿತರಾಗಿದ್ದು, ಭವಿಷ್ಯದಲ್ಲಿ ಜನಸಾಮಾನ್ಯರಂತೆ ಜೀವನ ನಡೆಸಲು ಬಯಸುವುದಾಗಿ ಅವರು(ನಕ್ಸಲರು) ಹೇಳಿರುವುದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ.</p>.ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಲಿಂಗ ಸಮಾನತೆ ಕಾಪಾಡಿ: ಸಚಿವಾಲಯಕ್ಕೆ ದೆಹಲಿ HC.ಇಳಿಕೆಯಾಗದ ತೈಲ ಬೆಲೆ: ಮೋದಿ ಸರ್ಕಾರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ. <p>ಜಿಲ್ಲಾ ಮೀಸಲು ಪಡೆ (ಡಿಆರ್ಜಿ), ಬಸ್ತಾರ್ ಫೈಟರ್ಸ್, ವಿಶೇಷ ಕಾರ್ಯಪಡೆ (ಎಸ್ಟಿಎಫ್), ಸಿಆರ್ಪಿಎಫ್ ಮತ್ತು ಗಣ್ಯ ಘಟಕ ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಪಡೆಗಳ ಕಾರ್ಯಾಚರಣೆಯು ನಕ್ಸಲರ ಶರಣಾಗತಿಗೆ ಪ್ರಮುಖ ಪಾತ್ರ ವಹಿಸಿವೆ ಎಂದು ಯಾದವ್ ತಿಳಿಸಿದ್ದಾರೆ.</p><p>ಶರಣಾದ ಎಲ್ಲಾ ನಕ್ಸಲರಿಗೆ ತಲಾ ₹25,000 ನೆರವು ನೀಡಲಾಗಿದ್ದು, ಸರ್ಕಾರಿ ನಿಯಮಗಳ ಪ್ರಕಾರ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ.</p><p>ಈ ಕಾರ್ಯಾಚರಣೆಯೊಂದಿಗೆ ಈ ವರ್ಷ ಇದುವರೆಗೆ ಬಿಜಾಪುರ ಜಿಲ್ಲೆಯಲ್ಲಿ 84 ನಕ್ಸಲರು ಶರಣಾಗಿದ್ದಾರೆ.</p>.ಕೃಷ್ಣನ ಬೋಧನೆಗಳು ಶಕ್ತಿ ನೀಡುತ್ತವೆ ಎಂದ US ಗುಪ್ತಚರ ವಿಭಾಗದ ನಿರ್ದೇಶಕಿ ತುಳಸಿ.ಪ್ರಚೋದನಕಾರಿ ಹೇಳಿಕೆ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>