<p class="bodytext">ಜೈಪುರ (ಪಿಟಿಐ): 2008ರಲ್ಲಿ ಜೈಪುರದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದ ನಾಲ್ಕು ಮಂದಿ ಅಪರಾಧಿಗಳಿಗೆ ಇಲ್ಲಿನ ವಿಶೇಷ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ.</p>.<p class="bodytext">ಸರ್ವಾರ್ ಅಜ್ಮಿ, ಶಾಬಾಜ್, ಸೈಫುರ್ ರೆಹಮಾನ್ ಮತ್ತು ಮೊಹಮ್ಮದ್ ಸೈಫ್ ಶಿಕ್ಷೆಗೆ ಗುರಿಯಾದವರು. ಇವರನ್ನು ಐಪಿಸಿಯ ವಿವಿಧ ಸೆಕ್ಷನ್ನುಗಳು ಮತ್ತು ಯುಎಪಿಎ ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆಯ ಅಡಿಯಲ್ಲಿ ಅಪರಾಧಿಗಳು ಎಂದು ಘೋಷಿಸಲಾಗಿತ್ತು.</p>.<p class="bodytext">2008ರ ಮೇ 13ರಂದು ಜೈಪುರದಲ್ಲಿ ಎಂಟು ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದ್ದವು, ಇನ್ನೊಂದು ಬಾಂಬ್ಅನ್ನು ನಿಷ್ಕ್ರಿಯಗೊಳಿಸಲಾಗಿತ್ತು. ಬಾಂಬ್ ಸ್ಫೋಟಕ್ಕೆ ಸಿಲುಕಿ 71 ಮಂದಿ ಪ್ರಾಣ ಕಳೆದುಕೊಂಡಿದ್ದರು, 180 ಜನರಿಗೆ ಗಾಯಗಳಾಗಿದ್ದವು.</p>.<p class="bodytext">ಸ್ಫೋಟಕ್ಕೆ ಸಂಭವಿಸಿದ ಪ್ರತ್ಯೇಕ ಪ್ರಕರಣಗಳಲ್ಲಿ 2019ರ ಡಿಸೆಂಬರ್ನಲ್ಲಿ ನ್ಯಾಯಾಲಯವೊಂದು ಅಜ್ಮಿ, ಸೈಫ್, ರೆಹಮಾನ್ ಮತ್ತು ಮೊಹಮದ್ ಸಲ್ಮಾನ್ಗೆ ಮರಣ ದಂಡನೆ ವಿಧಿಸಿತ್ತು. ಈ ಪ್ರಕರಣದಲ್ಲಿ ಶಾಬಾಜ್ನನ್ನು ದೋಷಮುಕ್ತಗೊಳಿಸಲಾಗಿತ್ತು.</p>.<p class="bodytext">ಮರಣ ದಂಡನೆಗೆ ಗುರಿಯಾದವರು ಈ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಅವರನ್ನು ಆ ಪ್ರಕರಣದಲ್ಲಿ ಹೈಕೋರ್ಟ್ ಖುಲಾಸೆಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext">ಜೈಪುರ (ಪಿಟಿಐ): 2008ರಲ್ಲಿ ಜೈಪುರದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದ ನಾಲ್ಕು ಮಂದಿ ಅಪರಾಧಿಗಳಿಗೆ ಇಲ್ಲಿನ ವಿಶೇಷ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ.</p>.<p class="bodytext">ಸರ್ವಾರ್ ಅಜ್ಮಿ, ಶಾಬಾಜ್, ಸೈಫುರ್ ರೆಹಮಾನ್ ಮತ್ತು ಮೊಹಮ್ಮದ್ ಸೈಫ್ ಶಿಕ್ಷೆಗೆ ಗುರಿಯಾದವರು. ಇವರನ್ನು ಐಪಿಸಿಯ ವಿವಿಧ ಸೆಕ್ಷನ್ನುಗಳು ಮತ್ತು ಯುಎಪಿಎ ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆಯ ಅಡಿಯಲ್ಲಿ ಅಪರಾಧಿಗಳು ಎಂದು ಘೋಷಿಸಲಾಗಿತ್ತು.</p>.<p class="bodytext">2008ರ ಮೇ 13ರಂದು ಜೈಪುರದಲ್ಲಿ ಎಂಟು ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದ್ದವು, ಇನ್ನೊಂದು ಬಾಂಬ್ಅನ್ನು ನಿಷ್ಕ್ರಿಯಗೊಳಿಸಲಾಗಿತ್ತು. ಬಾಂಬ್ ಸ್ಫೋಟಕ್ಕೆ ಸಿಲುಕಿ 71 ಮಂದಿ ಪ್ರಾಣ ಕಳೆದುಕೊಂಡಿದ್ದರು, 180 ಜನರಿಗೆ ಗಾಯಗಳಾಗಿದ್ದವು.</p>.<p class="bodytext">ಸ್ಫೋಟಕ್ಕೆ ಸಂಭವಿಸಿದ ಪ್ರತ್ಯೇಕ ಪ್ರಕರಣಗಳಲ್ಲಿ 2019ರ ಡಿಸೆಂಬರ್ನಲ್ಲಿ ನ್ಯಾಯಾಲಯವೊಂದು ಅಜ್ಮಿ, ಸೈಫ್, ರೆಹಮಾನ್ ಮತ್ತು ಮೊಹಮದ್ ಸಲ್ಮಾನ್ಗೆ ಮರಣ ದಂಡನೆ ವಿಧಿಸಿತ್ತು. ಈ ಪ್ರಕರಣದಲ್ಲಿ ಶಾಬಾಜ್ನನ್ನು ದೋಷಮುಕ್ತಗೊಳಿಸಲಾಗಿತ್ತು.</p>.<p class="bodytext">ಮರಣ ದಂಡನೆಗೆ ಗುರಿಯಾದವರು ಈ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಅವರನ್ನು ಆ ಪ್ರಕರಣದಲ್ಲಿ ಹೈಕೋರ್ಟ್ ಖುಲಾಸೆಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>