<p><strong>ಚೆನ್ನೈ:</strong> ಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ವಿಭಿನ್ನವಾಗಿರಲಿದ್ದು ಈ ಸಲ ಡಿಎಂಕೆ ಮತ್ತು ಟಿವಿಕೆ ಪಕ್ಷಗಳ ಮಧ್ಯೆ ಮಾತ್ರ ಸ್ಪರ್ಧೆ ಇರಲಿದೆ ಎಂದು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ಹಾಗೂ ನಟ ವಿಜಯ್ ಹೇಳಿದ್ದಾರೆ.</p><p>ಇಲ್ಲಿನ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಡಿಎಂಕೆ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದರು.</p><p>ಡಿಎಂಕೆ ವಂಶಪಾರಂಪರ್ಯ ಆಡಳಿತ ನಡೆಸುತ್ತಿದೆ ಎಂದು ಟೀಕಿಸಿದ ಅವರು ರಾಜ್ಯದಲ್ಲಿ ಮಹಿಳೆಯರು, ಮಕ್ಕಳಿಗೆ ರಕ್ಷಣೆ ಇಲ್ಲ ಎಂದು ಕಿಡಿಕಾರಿದರು.</p><p>ಇದೇ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದ ಅವರು ಕೇಂದ್ರ ಸರ್ಕಾರ ತ್ರಿಭಾಷ ನೀತಿ ಮತ್ತು ಕ್ಷೇತ್ರ ಮರುವಿಂಗಡಣೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.</p><p>ನಮ್ಮಿಂದ ಜಿಎಸ್ಟಿ ಸಂಗ್ರಹ ಮಾಡಿಕೊಂಡು ಶಿಕ್ಷಣ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ನೀವು ಯಾವುದೇ ಅನುದಾನ ನೀಡುತ್ತಿಲ್ಲ, ಪ್ರಧಾನಿ ಮೋದಿ ಅವರೇ, ಇನ್ನು ಮುಂದೆ ರಾಜಕಾರಣಕ್ಕಾಗಿ ತಮಿಳುನಾಡನ್ನು ಮರೆತುಬಿಡಿ ಎಂದು ವಿಜಯ್ ಹೇಳಿದರು. </p><p>2026ರ ಚುನಾವಣೆಯಲ್ಲಿ ಟಿವಿಕೆ ಮತ್ತು ಡಿಎಂಕೆ ಪಕ್ಷಗಳ ಸ್ಪರ್ಧೆ ಮಾತ್ರ ಕಾಣುತ್ತದೆ. ಬಿಜೆಪಿ ಮತ್ತು ಎಐಎಡಿಎಂ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲದ ಪಕ್ಷಗಳು ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ವಿಭಿನ್ನವಾಗಿರಲಿದ್ದು ಈ ಸಲ ಡಿಎಂಕೆ ಮತ್ತು ಟಿವಿಕೆ ಪಕ್ಷಗಳ ಮಧ್ಯೆ ಮಾತ್ರ ಸ್ಪರ್ಧೆ ಇರಲಿದೆ ಎಂದು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ಹಾಗೂ ನಟ ವಿಜಯ್ ಹೇಳಿದ್ದಾರೆ.</p><p>ಇಲ್ಲಿನ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಡಿಎಂಕೆ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದರು.</p><p>ಡಿಎಂಕೆ ವಂಶಪಾರಂಪರ್ಯ ಆಡಳಿತ ನಡೆಸುತ್ತಿದೆ ಎಂದು ಟೀಕಿಸಿದ ಅವರು ರಾಜ್ಯದಲ್ಲಿ ಮಹಿಳೆಯರು, ಮಕ್ಕಳಿಗೆ ರಕ್ಷಣೆ ಇಲ್ಲ ಎಂದು ಕಿಡಿಕಾರಿದರು.</p><p>ಇದೇ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದ ಅವರು ಕೇಂದ್ರ ಸರ್ಕಾರ ತ್ರಿಭಾಷ ನೀತಿ ಮತ್ತು ಕ್ಷೇತ್ರ ಮರುವಿಂಗಡಣೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.</p><p>ನಮ್ಮಿಂದ ಜಿಎಸ್ಟಿ ಸಂಗ್ರಹ ಮಾಡಿಕೊಂಡು ಶಿಕ್ಷಣ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ನೀವು ಯಾವುದೇ ಅನುದಾನ ನೀಡುತ್ತಿಲ್ಲ, ಪ್ರಧಾನಿ ಮೋದಿ ಅವರೇ, ಇನ್ನು ಮುಂದೆ ರಾಜಕಾರಣಕ್ಕಾಗಿ ತಮಿಳುನಾಡನ್ನು ಮರೆತುಬಿಡಿ ಎಂದು ವಿಜಯ್ ಹೇಳಿದರು. </p><p>2026ರ ಚುನಾವಣೆಯಲ್ಲಿ ಟಿವಿಕೆ ಮತ್ತು ಡಿಎಂಕೆ ಪಕ್ಷಗಳ ಸ್ಪರ್ಧೆ ಮಾತ್ರ ಕಾಣುತ್ತದೆ. ಬಿಜೆಪಿ ಮತ್ತು ಎಐಎಡಿಎಂ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲದ ಪಕ್ಷಗಳು ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>