<p><strong>ಕೋಲ್ಕತ್ತ:</strong> ಭೀಕರ ಭೂಕುಸಿತಕ್ಕೆ ತುತ್ತಾಗಿರುವ ಕೇರಳದ ವಯನಾಡ್ ಜಿಲ್ಲೆಯಲ್ಲಿ ರಾಜ್ಯದ 242 ವಲಸೆ ಕಾರ್ಮಿಕರು ಸಿಲುಕಿದ್ದಾರೆ ಎಂದು ಪಶ್ಚಿಮ ಬಂಗಾಳ ಕಾರ್ಮಿಕ ಸಚಿವ ಮೊಲೊಯ್ ಘಾಟಕ್ ವಿಧಾನಸಭೆಯಲ್ಲಿ ಶುಕ್ರವಾರ ಮಾಹಿತಿ ನೀಡಿದರು. </p>.<p>‘242 ವಲಸೆ ಕಾರ್ಮಿಕರಲ್ಲಿ, ಸುಮಾರು 155 ಜನರೊಂದಿಗೆ ಸಂಪರ್ಕವನ್ನು ಸಾಧಿಸಿದ್ದು, ಇತರರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದು ಮೊಲೊಯ್ ಘಾಟಕ್ ಹೇಳಿದರು.</p>.<p>ಭೂಕುಸಿತದಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು ಪಶ್ಚಿಮ ಬಂಗಾಳದ ಜಲಪಾಯಿಗುರಿ, ಅಲಿಪುರ್ದೂರ್, ಡಾರ್ಜಿಲಿಂಗ್, ಪಶ್ಚಿಮ ಮೇದಿನಿಪುರ್, ಮುರ್ಷಿದಾಬಾದ್ ಮತ್ತು ಬಿರ್ಭುಮ್ ಜಿಲ್ಲೆಯವರು ಎಂದರು. </p>.<p>ಕಾರ್ಮಿಕರು ರಾಜ್ಯಕ್ಕೆ ಹಿಂದಿರುಗಲು ಬಯಸಿದರೆ, ಸರ್ಕಾರವು ಅವರ ಸುರಕ್ಷಿತ ವಾಪಸಾತಿಗೆ ಕ್ರಮ ಕೈಗೊಳ್ಳುವುದು ಎಂದು ಸಚಿವರು ಹೇಳಿದರು.</p>.<p>ಪಶ್ಚಿಮ ಬಂಗಾಳದಿಂದ ಒಟ್ಟು 21,59,737 ವಲಸೆ ಕಾರ್ಮಿಕರು ದೇಶದ ವಿವಿಧ ರಾಜ್ಯಗಳಿಗೆ ಹೋಗಿದ್ದು, ಅವರಲ್ಲಿ 3,65,123 ಜನರು ಕೇರಳದ ವಿವಿಧ ಪ್ರದೇಶಗಳಲ್ಲಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಭೀಕರ ಭೂಕುಸಿತಕ್ಕೆ ತುತ್ತಾಗಿರುವ ಕೇರಳದ ವಯನಾಡ್ ಜಿಲ್ಲೆಯಲ್ಲಿ ರಾಜ್ಯದ 242 ವಲಸೆ ಕಾರ್ಮಿಕರು ಸಿಲುಕಿದ್ದಾರೆ ಎಂದು ಪಶ್ಚಿಮ ಬಂಗಾಳ ಕಾರ್ಮಿಕ ಸಚಿವ ಮೊಲೊಯ್ ಘಾಟಕ್ ವಿಧಾನಸಭೆಯಲ್ಲಿ ಶುಕ್ರವಾರ ಮಾಹಿತಿ ನೀಡಿದರು. </p>.<p>‘242 ವಲಸೆ ಕಾರ್ಮಿಕರಲ್ಲಿ, ಸುಮಾರು 155 ಜನರೊಂದಿಗೆ ಸಂಪರ್ಕವನ್ನು ಸಾಧಿಸಿದ್ದು, ಇತರರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದು ಮೊಲೊಯ್ ಘಾಟಕ್ ಹೇಳಿದರು.</p>.<p>ಭೂಕುಸಿತದಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು ಪಶ್ಚಿಮ ಬಂಗಾಳದ ಜಲಪಾಯಿಗುರಿ, ಅಲಿಪುರ್ದೂರ್, ಡಾರ್ಜಿಲಿಂಗ್, ಪಶ್ಚಿಮ ಮೇದಿನಿಪುರ್, ಮುರ್ಷಿದಾಬಾದ್ ಮತ್ತು ಬಿರ್ಭುಮ್ ಜಿಲ್ಲೆಯವರು ಎಂದರು. </p>.<p>ಕಾರ್ಮಿಕರು ರಾಜ್ಯಕ್ಕೆ ಹಿಂದಿರುಗಲು ಬಯಸಿದರೆ, ಸರ್ಕಾರವು ಅವರ ಸುರಕ್ಷಿತ ವಾಪಸಾತಿಗೆ ಕ್ರಮ ಕೈಗೊಳ್ಳುವುದು ಎಂದು ಸಚಿವರು ಹೇಳಿದರು.</p>.<p>ಪಶ್ಚಿಮ ಬಂಗಾಳದಿಂದ ಒಟ್ಟು 21,59,737 ವಲಸೆ ಕಾರ್ಮಿಕರು ದೇಶದ ವಿವಿಧ ರಾಜ್ಯಗಳಿಗೆ ಹೋಗಿದ್ದು, ಅವರಲ್ಲಿ 3,65,123 ಜನರು ಕೇರಳದ ವಿವಿಧ ಪ್ರದೇಶಗಳಲ್ಲಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>