<p><strong>ನಾರಾಯಣಪುರ:</strong> ಏಳು ಮಹಿಳೆಯರು ಸೇರಿದಂತೆ ಒಟ್ಟು 29 ಮಂದಿ ನಕ್ಸಲರು ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಬುಧವಾರ ಶರಣಾಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಇವರು ಮಾವೋವಾದಿ ಕುತುಲ್ ಪ್ರದೇಶ ಸಮಿತಿಗೆ ಸೇರಿದ ಕಾರ್ಯಕರ್ತರು. ಪೋಲೀಸ್, ಗಡಿ ಭದ್ರತಾ ಪಡೆ (ಬಿಎಸ್ಎಫ್) ಮತ್ತು ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. </p>.ಛತ್ತೀಸಗಢ: ಗ್ರಾಮಸ್ಥನನ್ನು ಕೊಂದ ನಕ್ಸಲರು.<p>ಪೊಳ್ಳು ಮಾವೋವಾದಿ ಸಿದ್ಧಾಂತದಿಂದ ನಿರಾಶೆ ಅನುಭವಿಸಿ ಮತ್ತು ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ಬೇಸತ್ತು ಇವರು ಶರಣಾಗಿದ್ದಾರೆ ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.</p><p>ನಾರಾಯಣಪುರದ ಮಾಡ್ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಂದ ಪ್ರಭಾವಿತರಾಗಿದ್ದು, ಭವಿಷ್ಯದಲ್ಲಿ ಜನಸಾಮಾನ್ಯರಂತೆ ಜೀವನ ನಡೆಸಲು ಬಯಸುವುದಾಗಿ ಅವರು ಹೇಳಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.</p>.ಛತ್ತೀಸಗಢ | ನಕ್ಸಲರು ಹುದುಗಿಸಿಟ್ಟ ಕಚ್ಚಾ ಬಾಂಬ್ ಸ್ಫೋಟ: ಇಬ್ಬರು ಯೋಧರಿಗೆ ಗಾಯ.<p>ಶರಣಾದ ಕಾರ್ಯಕರ್ತರು ಜನತಾನ ಸರ್ಕಾರ್, ಮಿಲಿಷಿಯಾ, ಚೇತನ ನಾಟ್ಯ ಮಂಡಳಿ (ಸಿಎನ್ಎಂ - ಮಾವೋವಾದಿಗಳ ಸಾಂಸ್ಕೃತಿಕ ವಿಭಾಗ) ಮತ್ತು ಮಾವೋವಾದಿಗಳ ಕೆಳ ಹಂತದ ಸದಸ್ಯರಾಗಿ ಸಕ್ರಿಯರಾಗಿದ್ದರು. ಇವರ ಶರಣಾಗತಿ ಭದ್ರತಾ ಪಡೆಗಳಿಗೆ ಪ್ರಮುಖ ಯಶಸ್ಸು ಎಂದು ಎಸ್ಪಿ ಹೇಳಿದ್ದಾರೆ. </p><p>ಇದರೊಂದಿಗೆ 2022r ಜನವರಿಯಿಂದ ಜಿಲ್ಲೆಯಲ್ಲಿ ಒಟ್ಟು 71 ನಕ್ಸಲರು ಶರಣಾದಂತಾಗಿದೆ.</p> .ಛತ್ತೀಸಗಢ: ಸುಕ್ಮಾದಲ್ಲಿ ನಕ್ಸಲರು ಅಡಗಿಸಿಟ್ಟಿದ್ದ 10 ಕೆ.ಜಿ ಐಇಡಿ ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾರಾಯಣಪುರ:</strong> ಏಳು ಮಹಿಳೆಯರು ಸೇರಿದಂತೆ ಒಟ್ಟು 29 ಮಂದಿ ನಕ್ಸಲರು ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಬುಧವಾರ ಶರಣಾಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಇವರು ಮಾವೋವಾದಿ ಕುತುಲ್ ಪ್ರದೇಶ ಸಮಿತಿಗೆ ಸೇರಿದ ಕಾರ್ಯಕರ್ತರು. ಪೋಲೀಸ್, ಗಡಿ ಭದ್ರತಾ ಪಡೆ (ಬಿಎಸ್ಎಫ್) ಮತ್ತು ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. </p>.ಛತ್ತೀಸಗಢ: ಗ್ರಾಮಸ್ಥನನ್ನು ಕೊಂದ ನಕ್ಸಲರು.<p>ಪೊಳ್ಳು ಮಾವೋವಾದಿ ಸಿದ್ಧಾಂತದಿಂದ ನಿರಾಶೆ ಅನುಭವಿಸಿ ಮತ್ತು ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ಬೇಸತ್ತು ಇವರು ಶರಣಾಗಿದ್ದಾರೆ ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.</p><p>ನಾರಾಯಣಪುರದ ಮಾಡ್ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಂದ ಪ್ರಭಾವಿತರಾಗಿದ್ದು, ಭವಿಷ್ಯದಲ್ಲಿ ಜನಸಾಮಾನ್ಯರಂತೆ ಜೀವನ ನಡೆಸಲು ಬಯಸುವುದಾಗಿ ಅವರು ಹೇಳಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.</p>.ಛತ್ತೀಸಗಢ | ನಕ್ಸಲರು ಹುದುಗಿಸಿಟ್ಟ ಕಚ್ಚಾ ಬಾಂಬ್ ಸ್ಫೋಟ: ಇಬ್ಬರು ಯೋಧರಿಗೆ ಗಾಯ.<p>ಶರಣಾದ ಕಾರ್ಯಕರ್ತರು ಜನತಾನ ಸರ್ಕಾರ್, ಮಿಲಿಷಿಯಾ, ಚೇತನ ನಾಟ್ಯ ಮಂಡಳಿ (ಸಿಎನ್ಎಂ - ಮಾವೋವಾದಿಗಳ ಸಾಂಸ್ಕೃತಿಕ ವಿಭಾಗ) ಮತ್ತು ಮಾವೋವಾದಿಗಳ ಕೆಳ ಹಂತದ ಸದಸ್ಯರಾಗಿ ಸಕ್ರಿಯರಾಗಿದ್ದರು. ಇವರ ಶರಣಾಗತಿ ಭದ್ರತಾ ಪಡೆಗಳಿಗೆ ಪ್ರಮುಖ ಯಶಸ್ಸು ಎಂದು ಎಸ್ಪಿ ಹೇಳಿದ್ದಾರೆ. </p><p>ಇದರೊಂದಿಗೆ 2022r ಜನವರಿಯಿಂದ ಜಿಲ್ಲೆಯಲ್ಲಿ ಒಟ್ಟು 71 ನಕ್ಸಲರು ಶರಣಾದಂತಾಗಿದೆ.</p> .ಛತ್ತೀಸಗಢ: ಸುಕ್ಮಾದಲ್ಲಿ ನಕ್ಸಲರು ಅಡಗಿಸಿಟ್ಟಿದ್ದ 10 ಕೆ.ಜಿ ಐಇಡಿ ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>