<p><strong>ಚಂಡೀಗಢ</strong>: ಪಾಕಿಸ್ತಾನದ ಐಎಸ್ಐ ನಿಯಂತ್ರಣದಲ್ಲಿರುವ ಭಯೋತ್ಪಾದಕ ಸಂಘಟನೆಯ ಜೊತೆ ನಂಟು ಹೊಂದಿರುವ ಆರೋಪದಲ್ಲಿ ಮೂವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.</p>.<p>ಬಟಿಂಡಾದ ದಿಖ್ ಗ್ರಾಮದ ರಾಜ್ಭೂಪಿಂದರ್ ಸಿಂಗ್ ಅಲಿಯಾಸ್ ಭಿಂದಾ, ಫಾಜಿಲ್ಕಾದ ರಮಣ್ ಕುಮಾರ್ ಮತ್ತು ಕೋಟ್ಕಾಪುರದ ಜಗಜೀತ್ ಸಿಂಗ್ ಬಂಧಿತರು.</p>.<p>ಇವರಿಂದ ಎಂಟು ಪಿಸ್ತೂಲ್, ಮ್ಯಾಗಜಿನ್ ಮತ್ತು 30 ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಂಜಾಬ್ ಡಿಜಿಪಿ ಗೌರವ್ ಯಾದವ್ ಬುಧವಾರ ತಿಳಿಸಿದ್ದಾರೆ.</p>.<p>ಬಂಧಿತರು ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಮತ್ತು ಕೆಲವರ ಹತ್ಯೆಗೆ ಸಂಚು ರೂಪಿಸಿದ್ದರು ಎಂದೂ ಆರೋಪಿಸಿದ್ದಾರೆ.</p>.<p>ಗುಪ್ತಚರ ಇಲಾಖೆಯ ಮಾಹಿತಿಯ ಅನ್ವಯ ಪೊಲೀಸರು ಬಟಿಂಡಾದ ಗೋವಿಂದಪುರ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ ಈ ಮೂವರನ್ನು ಬಂಧಿಸಿದ್ದಾರೆ ಎಂದು ವಿವರಿಸಿದ್ದಾರೆ.</p>.<p>ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ಅಡಿ ಶಿಕ್ಷೆಗೊಳಗಾಗಿ ಸಂಗ್ರೂರ್ ಕಾರಾಗೃಹದಲ್ಲಿರುವ ಕೆಲವರ ಜೊತೆ ಬಂಧಿತರಿಗೆ ಸಂಪರ್ಕವಿದೆ. ಇವರು ಮಧ್ಯಪ್ರದೇಶದಿಂದ ಶಸ್ತ್ರಾಸ್ತ್ರಗಳನ್ನು ತಂದಿದ್ದರು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ಪಾಕಿಸ್ತಾನದ ಐಎಸ್ಐ ನಿಯಂತ್ರಣದಲ್ಲಿರುವ ಭಯೋತ್ಪಾದಕ ಸಂಘಟನೆಯ ಜೊತೆ ನಂಟು ಹೊಂದಿರುವ ಆರೋಪದಲ್ಲಿ ಮೂವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.</p>.<p>ಬಟಿಂಡಾದ ದಿಖ್ ಗ್ರಾಮದ ರಾಜ್ಭೂಪಿಂದರ್ ಸಿಂಗ್ ಅಲಿಯಾಸ್ ಭಿಂದಾ, ಫಾಜಿಲ್ಕಾದ ರಮಣ್ ಕುಮಾರ್ ಮತ್ತು ಕೋಟ್ಕಾಪುರದ ಜಗಜೀತ್ ಸಿಂಗ್ ಬಂಧಿತರು.</p>.<p>ಇವರಿಂದ ಎಂಟು ಪಿಸ್ತೂಲ್, ಮ್ಯಾಗಜಿನ್ ಮತ್ತು 30 ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಂಜಾಬ್ ಡಿಜಿಪಿ ಗೌರವ್ ಯಾದವ್ ಬುಧವಾರ ತಿಳಿಸಿದ್ದಾರೆ.</p>.<p>ಬಂಧಿತರು ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಮತ್ತು ಕೆಲವರ ಹತ್ಯೆಗೆ ಸಂಚು ರೂಪಿಸಿದ್ದರು ಎಂದೂ ಆರೋಪಿಸಿದ್ದಾರೆ.</p>.<p>ಗುಪ್ತಚರ ಇಲಾಖೆಯ ಮಾಹಿತಿಯ ಅನ್ವಯ ಪೊಲೀಸರು ಬಟಿಂಡಾದ ಗೋವಿಂದಪುರ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ ಈ ಮೂವರನ್ನು ಬಂಧಿಸಿದ್ದಾರೆ ಎಂದು ವಿವರಿಸಿದ್ದಾರೆ.</p>.<p>ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ಅಡಿ ಶಿಕ್ಷೆಗೊಳಗಾಗಿ ಸಂಗ್ರೂರ್ ಕಾರಾಗೃಹದಲ್ಲಿರುವ ಕೆಲವರ ಜೊತೆ ಬಂಧಿತರಿಗೆ ಸಂಪರ್ಕವಿದೆ. ಇವರು ಮಧ್ಯಪ್ರದೇಶದಿಂದ ಶಸ್ತ್ರಾಸ್ತ್ರಗಳನ್ನು ತಂದಿದ್ದರು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>