<p><strong>ನಾಸಿಕ್:</strong> ‘ನಗದು ಸಾಗಿಸುತ್ತಿದ್ದ ಟ್ರಕ್ ತಡೆದು ₹400 ಕೋಟಿ ದೋಚಿ ಪರಾರಿಯಾಗಿದ್ದಾರೆ ಎಂದು ಚಾಲಕನೊಬ್ಬ ಸಲ್ಲಿಸಿದ್ದ ದೂರು ಸುಳ್ಳು, ಅಂತಹ ಯಾವುದೇ ಪ್ರಕರಣ ನಡೆದಿಲ್ಲ’ ಎಂದು ಮಹಾರಾಷ್ಟ್ರದ ನಾಸಿಕ್ ಗ್ರಾಮೀಣ ಪೊಲೀಸರು ಸೋಮವಾರ ತಿಳಿಸಿದ್ದಾರೆ.</p><p>ಚಲಿಸುತ್ತಿದ್ದ ಟ್ರಕ್ ಅನ್ನು ಅಡ್ಡಹಾಕಿದ 7 ಮಂದಿ ಅನಾಮಿಕರು, ನನ್ನ ಮೇಲೆ ಹಲ್ಲೆ ಮಾಡಿ ಟ್ರಕ್ನಲ್ಲಿದ್ದ ₹400 ಕೋಟಿ ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಟ್ರಕ್ ಚಾಲಕ ಸಂದೀಪ್ ಪಾಟೀಲ್ ದೂರು ದಾಖಲಿಸಿದ್ದರು.</p><p>ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಎಲ್ಲಾ 7 ಆರೋಪಿಗಳನ್ನು ಇಗತ್ಪುರಿ ನ್ಯಾಯಾಲಯ ಬಿಡುಗಡೆ ಮಾಡಿದೆ ಮತ್ತು ನಕಲಿ ದೂರು ನೀಡಿದ್ದಕ್ಕಾಗಿ ಟ್ರಕ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>2025ರ ಅಕ್ಟೋಬರ್ 22ರಂದು 7 ಜನರು ತಮ್ಮನ್ನು ದಾರಿ ತಪ್ಪಿಸಿ, ಅಪಹರಿಸಿ, ಹಲ್ಲೆ ನಡೆಸಿದ್ದಾರೆ. ಬಳಿಕ ಟ್ರಕ್ನಲ್ಲಿದ್ದ ₹400 ಕೋಟಿ ಮೌಲ್ಯದ ರದ್ದಾದ ₹2000 ಮುಖಬೆಲೆಯ ನೋಟುಗಳನ್ನು ಲೂಟಿ ಮಾಡಿದ್ದಾರೆ ಎಂದು ಚಾಲಕ ಸಂದೀಪ್ ಪಾಟೀಲ್ ಘೋಟಿ ಪೊಲೀಸರಿಗೆ ದೂರು ನೀಡಿದ್ದರು.</p>.₹400 ಕೋಟಿ ಲೂಟಿ ಪ್ರಕರಣ, ಸಾಕ್ಷ್ಯ ಸಿಕ್ಕಿಲ್ಲ: ನ್ಯಾಯಾಲಯಕ್ಕೆ ಎಸ್ಐಟಿ ವರದಿ.₹400 ಕೋಟಿ ದರೋಡೆ: ದೂರು ನೀಡಿದರೆ ತನಿಖೆ: ಎಸ್ಪಿ ರಾಮರಾಜನ್. <p>ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಹಂಚಿಕೊಂಡಿದ್ದ ಪಾಟೀಲ್, ‘ಟ್ರಕ್ನಲ್ಲಿ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹವಾಲಾ ಹಣ ಸಾಗಿಸಲಾಗುತ್ತಿತ್ತು’ ಎಂದು ಹೇಳಿಕೊಂಡಿದ್ದರು.</p><p>‘ಪಾಟೀಲ್ ಅವರು ಆರೋಪಿಸಿದ್ದ 7 ಜನರನ್ನು ನಾವು ಬಂಧಿಸಿದ್ದೇವೆ. ಆದರೆ, ತನಿಖೆಯಲ್ಲಿ ಪಾಟೀಲ್ ಅವರು ಹೇಳಿದಂತೆ ಆರೋಪಿಗಳ ಸಂಚಾರದ ಮಾರ್ಗ, ಕರೆ ದಾಖಲೆಗಳು, ಸಮಯ ಇತ್ಯಾದಿಗಳು ಹೋಲಿಕೆಯಾಗಿಲ್ಲ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.₹₹</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಸಿಕ್:</strong> ‘ನಗದು ಸಾಗಿಸುತ್ತಿದ್ದ ಟ್ರಕ್ ತಡೆದು ₹400 ಕೋಟಿ ದೋಚಿ ಪರಾರಿಯಾಗಿದ್ದಾರೆ ಎಂದು ಚಾಲಕನೊಬ್ಬ ಸಲ್ಲಿಸಿದ್ದ ದೂರು ಸುಳ್ಳು, ಅಂತಹ ಯಾವುದೇ ಪ್ರಕರಣ ನಡೆದಿಲ್ಲ’ ಎಂದು ಮಹಾರಾಷ್ಟ್ರದ ನಾಸಿಕ್ ಗ್ರಾಮೀಣ ಪೊಲೀಸರು ಸೋಮವಾರ ತಿಳಿಸಿದ್ದಾರೆ.</p><p>ಚಲಿಸುತ್ತಿದ್ದ ಟ್ರಕ್ ಅನ್ನು ಅಡ್ಡಹಾಕಿದ 7 ಮಂದಿ ಅನಾಮಿಕರು, ನನ್ನ ಮೇಲೆ ಹಲ್ಲೆ ಮಾಡಿ ಟ್ರಕ್ನಲ್ಲಿದ್ದ ₹400 ಕೋಟಿ ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಟ್ರಕ್ ಚಾಲಕ ಸಂದೀಪ್ ಪಾಟೀಲ್ ದೂರು ದಾಖಲಿಸಿದ್ದರು.</p><p>ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಎಲ್ಲಾ 7 ಆರೋಪಿಗಳನ್ನು ಇಗತ್ಪುರಿ ನ್ಯಾಯಾಲಯ ಬಿಡುಗಡೆ ಮಾಡಿದೆ ಮತ್ತು ನಕಲಿ ದೂರು ನೀಡಿದ್ದಕ್ಕಾಗಿ ಟ್ರಕ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>2025ರ ಅಕ್ಟೋಬರ್ 22ರಂದು 7 ಜನರು ತಮ್ಮನ್ನು ದಾರಿ ತಪ್ಪಿಸಿ, ಅಪಹರಿಸಿ, ಹಲ್ಲೆ ನಡೆಸಿದ್ದಾರೆ. ಬಳಿಕ ಟ್ರಕ್ನಲ್ಲಿದ್ದ ₹400 ಕೋಟಿ ಮೌಲ್ಯದ ರದ್ದಾದ ₹2000 ಮುಖಬೆಲೆಯ ನೋಟುಗಳನ್ನು ಲೂಟಿ ಮಾಡಿದ್ದಾರೆ ಎಂದು ಚಾಲಕ ಸಂದೀಪ್ ಪಾಟೀಲ್ ಘೋಟಿ ಪೊಲೀಸರಿಗೆ ದೂರು ನೀಡಿದ್ದರು.</p>.₹400 ಕೋಟಿ ಲೂಟಿ ಪ್ರಕರಣ, ಸಾಕ್ಷ್ಯ ಸಿಕ್ಕಿಲ್ಲ: ನ್ಯಾಯಾಲಯಕ್ಕೆ ಎಸ್ಐಟಿ ವರದಿ.₹400 ಕೋಟಿ ದರೋಡೆ: ದೂರು ನೀಡಿದರೆ ತನಿಖೆ: ಎಸ್ಪಿ ರಾಮರಾಜನ್. <p>ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಹಂಚಿಕೊಂಡಿದ್ದ ಪಾಟೀಲ್, ‘ಟ್ರಕ್ನಲ್ಲಿ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹವಾಲಾ ಹಣ ಸಾಗಿಸಲಾಗುತ್ತಿತ್ತು’ ಎಂದು ಹೇಳಿಕೊಂಡಿದ್ದರು.</p><p>‘ಪಾಟೀಲ್ ಅವರು ಆರೋಪಿಸಿದ್ದ 7 ಜನರನ್ನು ನಾವು ಬಂಧಿಸಿದ್ದೇವೆ. ಆದರೆ, ತನಿಖೆಯಲ್ಲಿ ಪಾಟೀಲ್ ಅವರು ಹೇಳಿದಂತೆ ಆರೋಪಿಗಳ ಸಂಚಾರದ ಮಾರ್ಗ, ಕರೆ ದಾಖಲೆಗಳು, ಸಮಯ ಇತ್ಯಾದಿಗಳು ಹೋಲಿಕೆಯಾಗಿಲ್ಲ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.₹₹</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>