<p><strong>ಠಾಣೆ:</strong> ಅಕ್ರಮವಾಗಿ ವಾಸವಾಗಿದ್ದ ಓರ್ವ ಮಹಿಳೆ ಸೇರಿ ಬಾಂಗ್ಲಾದೇಶದ 8 ಪ್ರಜೆಗಳನ್ನು ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.</p><p>ಸುಳಿವು ಮತ್ತು ದೂರಿನ ಆಧಾರದ ಮೇಲೆ ಪೊಲೀಸರು ಶನಿವಾರ ಮತ್ತು ಭಾನುವಾರ ಭಿವಂಡಿ ಪಟ್ಟಣದ ಕಲ್ಹೇರ್ ಮತ್ತು ಕೊಂಗಾವ್ನಲ್ಲಿ ದಾಳಿ ನಡೆಸಿದ್ದರು.</p>.ಕೊಲೆಯಾದ ವ್ಯಕ್ತಿ ಹಿಂದೂ ಅರ್ಚಕ ಅಲ್ಲ: ಬಾಂಗ್ಲಾ ಸರ್ಕಾರ.<p>ಇವರೆಲ್ಲರೂ 22 ರಿಂದ 42 ವರ್ಷ ವಯಸ್ಸಿನವರಾಗಿದ್ದು, ಭಾರತದಲ್ಲಿ ಉಳಿಯಲು ದಾಖಲೆಗಳನ್ನು ಒದಗಿಸಲು ವಿಫಲರಾಗಿದ್ದರು.</p><p>ಇವರಲ್ಲಿ ಮೂವರು ಚಿಂದಿ ಮಾರಾಟಗಾರರು, ಇಬ್ಬರು ಕೂಲಿ ಕಾರ್ಮಿಕರು, ಒಬ್ಬರು ಮೇಸ್ತ್ರಿ ಮತ್ತು ಇನ್ನೊಬ್ಬರು ಪ್ಲಂಬರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಅವರನ್ನು ವಿದೇಶಿ ಪ್ರಜೆಗಳ ಕಾಯ್ದೆ ಮತ್ತು ಭಾರತೀಯ ಪಾಸ್ಪೋರ್ಟ್ ಕಾಯ್ದೆಯಡಿಯಲ್ಲಿ ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p> .ಬಾಂಗ್ಲಾ ಅಲ್ಪಸಂಖ್ಯಾತರ ಪರ ನಿಲ್ಲಿ: ಕೈಚೀಲದಲ್ಲಿ ಕಾಂಗ್ರೆಸ್ ಸದಸ್ಯರ ಸಂದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಣೆ:</strong> ಅಕ್ರಮವಾಗಿ ವಾಸವಾಗಿದ್ದ ಓರ್ವ ಮಹಿಳೆ ಸೇರಿ ಬಾಂಗ್ಲಾದೇಶದ 8 ಪ್ರಜೆಗಳನ್ನು ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.</p><p>ಸುಳಿವು ಮತ್ತು ದೂರಿನ ಆಧಾರದ ಮೇಲೆ ಪೊಲೀಸರು ಶನಿವಾರ ಮತ್ತು ಭಾನುವಾರ ಭಿವಂಡಿ ಪಟ್ಟಣದ ಕಲ್ಹೇರ್ ಮತ್ತು ಕೊಂಗಾವ್ನಲ್ಲಿ ದಾಳಿ ನಡೆಸಿದ್ದರು.</p>.ಕೊಲೆಯಾದ ವ್ಯಕ್ತಿ ಹಿಂದೂ ಅರ್ಚಕ ಅಲ್ಲ: ಬಾಂಗ್ಲಾ ಸರ್ಕಾರ.<p>ಇವರೆಲ್ಲರೂ 22 ರಿಂದ 42 ವರ್ಷ ವಯಸ್ಸಿನವರಾಗಿದ್ದು, ಭಾರತದಲ್ಲಿ ಉಳಿಯಲು ದಾಖಲೆಗಳನ್ನು ಒದಗಿಸಲು ವಿಫಲರಾಗಿದ್ದರು.</p><p>ಇವರಲ್ಲಿ ಮೂವರು ಚಿಂದಿ ಮಾರಾಟಗಾರರು, ಇಬ್ಬರು ಕೂಲಿ ಕಾರ್ಮಿಕರು, ಒಬ್ಬರು ಮೇಸ್ತ್ರಿ ಮತ್ತು ಇನ್ನೊಬ್ಬರು ಪ್ಲಂಬರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಅವರನ್ನು ವಿದೇಶಿ ಪ್ರಜೆಗಳ ಕಾಯ್ದೆ ಮತ್ತು ಭಾರತೀಯ ಪಾಸ್ಪೋರ್ಟ್ ಕಾಯ್ದೆಯಡಿಯಲ್ಲಿ ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p> .ಬಾಂಗ್ಲಾ ಅಲ್ಪಸಂಖ್ಯಾತರ ಪರ ನಿಲ್ಲಿ: ಕೈಚೀಲದಲ್ಲಿ ಕಾಂಗ್ರೆಸ್ ಸದಸ್ಯರ ಸಂದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>