<p><strong>ಜಮ್ಶೆಡ್ಪುರ:</strong> ಬುಧವಾರ ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ಜಾರ್ಖಂಡ್ನ ಜಮ್ಶೆಡ್ಪುರ ನಗರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಅಲೋಕ್ ಕುಮಾರ್ ಭಗತ್ ಅಲಿಯಾಸ್ ಮುನ್ನಾ (28) ಮೃತಪಟ್ಟ ಕಾರ್ಯಕರ್ತ. ಕದ್ಮಾ ಪೊಲೀಸ್ ಠಾಣೆ ವ್ಯಾಪ್ತಿಯ ಶಾಸ್ತ್ರಿನಗರ ಪ್ರದೇಶದ ತನ್ನ ಮನೆಯ ಬಳಿ ನಿಂತಿದ್ದಾಗ, ಮೋಟಾರ್ ಸೈಕಲ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಗೋವು ಕಳ್ಳಸಾಗಣೆ ಮಾಡುವವನೆಂದು ಭಾವಿಸಿ ಗುಂಡಿಕ್ಕಿ 12ನೇ ತರಗತಿ ವಿದ್ಯಾರ್ಥಿ ಕೊಲೆ.<p>ಗುಂಡೇಟಿನ ಗಾಯಕ್ಕೆ ಭಗತ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಅವರನ್ನು ಟಾಟಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಅಧಿಕಾರಿ ಹೇಳಿದರು.</p><p>ಆರೋಪಿಗಳನ್ನು ಗುರುತಿಸಲಾಗಿದ್ದು, ಆದರೆ ಇದುವರೆಗೆ ಅವರನ್ನು ಬಂಧಿಸಲಾಗಿಲ್ಲ. ಆರೋಪಿಗಳಲ್ಲಿ ಒಬ್ಬ ಹಾಗೂ ಮೃತಪಟ್ಟ ಭಗತ್ ನೆರೆಹೊರೆಯವರಾಗಿದ್ದು, ಹಳೆಯ ವೈಷಮ್ಯ ಇತ್ತು. ಇಬ್ಬರಿಗೂ ಕ್ರಿಮಿನಲ್ ಹಿನ್ನಲೆಗಳಿವೆ ಎಂದು ಅವರು ತಿಳಿಸಿದ್ದಾರೆ.</p>.ಲಾಹೋರ್: ಇಮ್ರಾನ್ ಖಾನ್ ಪಕ್ಷದ ನಾಯಕನ ಗುಂಡಿಕ್ಕಿ ಕೊಲೆ.<p>ಇತ್ತೀಚೆಗೆ ವಿವಾಹವಾಗಿದ್ದ ಭಗತ್ ಮೇಲೆ ಜಾರ್ಖಂಡ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶಾಸ್ತ್ರಿನಗರದಲ್ಲಿ ಪ್ರತಿಸ್ಪರ್ಧಿ ಪಕ್ಷದ ಕಾರ್ಯಕರ್ತನನ್ನು ಥಳಿಸಿದ ಆರೋಪ ಇದೆ. ಎಫ್ಐಆರ್ ಕೂಡ ದಾಖಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಬನ್ನಾ ಗುಪ್ತಾ ಅವರು ಭಗತ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.</p> .ಬಿಹಾರ: ಸೊಸೆ, ಆಕೆಯ ತಂದೆ ಹಾಗೂ ಸಹೋದರನನ್ನು ಗುಂಡಿಕ್ಕಿ ಕೊಲೆ ಮಾಡಿದ ವ್ಯಕ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಶೆಡ್ಪುರ:</strong> ಬುಧವಾರ ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ಜಾರ್ಖಂಡ್ನ ಜಮ್ಶೆಡ್ಪುರ ನಗರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಅಲೋಕ್ ಕುಮಾರ್ ಭಗತ್ ಅಲಿಯಾಸ್ ಮುನ್ನಾ (28) ಮೃತಪಟ್ಟ ಕಾರ್ಯಕರ್ತ. ಕದ್ಮಾ ಪೊಲೀಸ್ ಠಾಣೆ ವ್ಯಾಪ್ತಿಯ ಶಾಸ್ತ್ರಿನಗರ ಪ್ರದೇಶದ ತನ್ನ ಮನೆಯ ಬಳಿ ನಿಂತಿದ್ದಾಗ, ಮೋಟಾರ್ ಸೈಕಲ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಗೋವು ಕಳ್ಳಸಾಗಣೆ ಮಾಡುವವನೆಂದು ಭಾವಿಸಿ ಗುಂಡಿಕ್ಕಿ 12ನೇ ತರಗತಿ ವಿದ್ಯಾರ್ಥಿ ಕೊಲೆ.<p>ಗುಂಡೇಟಿನ ಗಾಯಕ್ಕೆ ಭಗತ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಅವರನ್ನು ಟಾಟಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಅಧಿಕಾರಿ ಹೇಳಿದರು.</p><p>ಆರೋಪಿಗಳನ್ನು ಗುರುತಿಸಲಾಗಿದ್ದು, ಆದರೆ ಇದುವರೆಗೆ ಅವರನ್ನು ಬಂಧಿಸಲಾಗಿಲ್ಲ. ಆರೋಪಿಗಳಲ್ಲಿ ಒಬ್ಬ ಹಾಗೂ ಮೃತಪಟ್ಟ ಭಗತ್ ನೆರೆಹೊರೆಯವರಾಗಿದ್ದು, ಹಳೆಯ ವೈಷಮ್ಯ ಇತ್ತು. ಇಬ್ಬರಿಗೂ ಕ್ರಿಮಿನಲ್ ಹಿನ್ನಲೆಗಳಿವೆ ಎಂದು ಅವರು ತಿಳಿಸಿದ್ದಾರೆ.</p>.ಲಾಹೋರ್: ಇಮ್ರಾನ್ ಖಾನ್ ಪಕ್ಷದ ನಾಯಕನ ಗುಂಡಿಕ್ಕಿ ಕೊಲೆ.<p>ಇತ್ತೀಚೆಗೆ ವಿವಾಹವಾಗಿದ್ದ ಭಗತ್ ಮೇಲೆ ಜಾರ್ಖಂಡ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶಾಸ್ತ್ರಿನಗರದಲ್ಲಿ ಪ್ರತಿಸ್ಪರ್ಧಿ ಪಕ್ಷದ ಕಾರ್ಯಕರ್ತನನ್ನು ಥಳಿಸಿದ ಆರೋಪ ಇದೆ. ಎಫ್ಐಆರ್ ಕೂಡ ದಾಖಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಬನ್ನಾ ಗುಪ್ತಾ ಅವರು ಭಗತ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.</p> .ಬಿಹಾರ: ಸೊಸೆ, ಆಕೆಯ ತಂದೆ ಹಾಗೂ ಸಹೋದರನನ್ನು ಗುಂಡಿಕ್ಕಿ ಕೊಲೆ ಮಾಡಿದ ವ್ಯಕ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>