<p><strong>ಬಿಜಾಪುರ:</strong> ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಹುದುಗಿಸಿಟ್ಟ ನಾಡ ಬಾಂಬ್ ಸ್ಫೋಟಿಸಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಯೋಧರೊಬ್ಬರು ಶನಿವಾರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸಿಆರ್ಪಿಎಫ್ 196ನೇ ಬೆಟಾಲಿಯನ್ ಮಹಾದೇವ ಘಾಟ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಸಿಬ್ಬಂದಿ ಹದುಗಿಸಿದ್ದ ಬಾಂಬ್ ಮೇಲೆ ಕಾಲಿಟ್ಟಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಛತ್ತೀಸಗಢ: ಸುಕ್ಮಾದಲ್ಲಿ ನಕ್ಸಲರು ಅಡಗಿಸಿಟ್ಟಿದ್ದ 10 ಕೆ.ಜಿ ಐಇಡಿ ಪತ್ತೆ.<p>ಗಾಯಗೊಂಡ ಸಿಬ್ಬಂದಿಯನ್ನು ಬಿಜಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಶುಕ್ರವಾರ ಪಕ್ಕದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ಹುದುಗಿಸಿಟ್ಟ ಕಚ್ಚಾ ಬಾಂಬ್ ಸ್ಫೋಟಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದರು. ಮೂವರು ಗಾಯಗೊಂಡಿದ್ದರು. </p><p>ಜನವರಿ 6ರಂದು ಬಿಜಾಪುರ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಬಳಸಿ ಬಸ್ ಒಂದನ್ನು ಸ್ಫೋಟಿಸಿದ್ದರು. ಪರಿಣಾಮ 8 ಮಂದಿ ಪೊಲೀಸ್ ಸಿಬ್ಬಂದಿ ಹಾಗೂ ನಾಗರಿಕ ಮೃತಪಟ್ಟಿದ್ದರು. </p> .ಮಹಾರಾಷ್ಟ್ರ: ತಾರಕ್ಕ ಸೇರಿ 11 ಮಂದಿ ನಕ್ಸಲರು ಶರಣು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಜಾಪುರ:</strong> ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಹುದುಗಿಸಿಟ್ಟ ನಾಡ ಬಾಂಬ್ ಸ್ಫೋಟಿಸಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಯೋಧರೊಬ್ಬರು ಶನಿವಾರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸಿಆರ್ಪಿಎಫ್ 196ನೇ ಬೆಟಾಲಿಯನ್ ಮಹಾದೇವ ಘಾಟ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಸಿಬ್ಬಂದಿ ಹದುಗಿಸಿದ್ದ ಬಾಂಬ್ ಮೇಲೆ ಕಾಲಿಟ್ಟಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಛತ್ತೀಸಗಢ: ಸುಕ್ಮಾದಲ್ಲಿ ನಕ್ಸಲರು ಅಡಗಿಸಿಟ್ಟಿದ್ದ 10 ಕೆ.ಜಿ ಐಇಡಿ ಪತ್ತೆ.<p>ಗಾಯಗೊಂಡ ಸಿಬ್ಬಂದಿಯನ್ನು ಬಿಜಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಶುಕ್ರವಾರ ಪಕ್ಕದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ಹುದುಗಿಸಿಟ್ಟ ಕಚ್ಚಾ ಬಾಂಬ್ ಸ್ಫೋಟಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದರು. ಮೂವರು ಗಾಯಗೊಂಡಿದ್ದರು. </p><p>ಜನವರಿ 6ರಂದು ಬಿಜಾಪುರ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಬಳಸಿ ಬಸ್ ಒಂದನ್ನು ಸ್ಫೋಟಿಸಿದ್ದರು. ಪರಿಣಾಮ 8 ಮಂದಿ ಪೊಲೀಸ್ ಸಿಬ್ಬಂದಿ ಹಾಗೂ ನಾಗರಿಕ ಮೃತಪಟ್ಟಿದ್ದರು. </p> .ಮಹಾರಾಷ್ಟ್ರ: ತಾರಕ್ಕ ಸೇರಿ 11 ಮಂದಿ ನಕ್ಸಲರು ಶರಣು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>