‘ದೇಶದಾದ್ಯಂತ ಇರುವ ಬಿಜೆಪಿ ಕಚೇರಿ ಮುಂದೆ ಪ್ರತಿಭಟಿಸಬೇಕು ಎಂದು ನಾನು ದೇಶದ ಜನರಿಗೆ ಕರೆ ನೀಡುತ್ತಿದ್ದೇನೆ. ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಾವು ಎಎಪಿ ಕಚೇರಿಯಲ್ಲಿ ಸಮಾವೇಶಗೊಳ್ಳಲಿದ್ದೇವೆ. ಬಳಿಕ ಬಿಜೆಪಿ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ರೈ ಹೇಳಿದ್ದಾರೆ.
‘ಕೇಜ್ರಿವಾಲ್ ಅವರನ್ನು ಬಂಧಿಸುವುದಾದರೆ, ಯಾರನ್ನೂ ಬೇಕಾದರೂ ಬಂಧಿಸಬಹುದು. ಯಾರ ಧ್ವನಿಯನ್ನೂ ಬೇಕಾದರೂ ಅಡಗಿಸಬಹುದು. ಅರವಿಂದ ಕೇಜ್ರಿವಾಲ್ ಒಬ್ಬ ವ್ಯಕ್ತಿಯಲ್ಲ. ಅದೊಂದು ಸಿದ್ಧಾಂತ’ ಎಂದು ಅವರು ನುಡಿದಿದ್ದಾರೆ.