<p><strong>ಕೋಲ್ಕತ್ತ:</strong> ತೃಣಮೂಲ ಕಾಂಗ್ರೆಸ್ ಪಕ್ಷವು (ಟಿಎಂಸಿ) ತನ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ಸಂಸದೀಯ ಪಕ್ಷದ ನಾಯಕನನ್ನಾಗಿ ನೇಮಕ ಮಾಡಿದೆ. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಯಕ ಸುದೀಪ್ ಬಂದೋಪಾಧ್ಯಾಯ ಅವರ ಸ್ಥಾನಕ್ಕೆ ಈ ನೇಮಕ ನಡೆದಿದೆ.</p><p>ಪಕ್ಷದ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಸೋಮವಾರ ನಡೆದ ಸಂಸತ್ತಿನ ಉಭಯ ಸದನಗಳ ಟಿಎಂಸಿ ಸಂಸದರ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಮತಾ ಅವರು ಕೋಲ್ಕತ್ತದಿಂದ ವರ್ಚುವಲ್ ಆಗಿ ಸಭೆಯಲ್ಲಿ ಪಾಲ್ಗೊಂಡರು.</p><p>‘ಸುದೀಪ್ ಬಂದೋಪಾಧ್ಯಾಯ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಅಭಿಷೇಕ್ ಬ್ಯಾನರ್ಜಿ ಲೋಕಸಭೆಯಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ’ ಎಂದು ಮಮತಾ ಅವರು ಸಭೆಯಲ್ಲಿ ಪಕ್ಷದ ಸಂಸದರಿಗೆ ತಿಳಿಸಿದರು ಎಂದು ಮೂಲಗಳು ಹೇಳಿವೆ. ಕೋಲ್ಕತ್ತಾ ಉತ್ತರ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿರುವ ಬಂದೋಪಾಧ್ಯಾಯ ಅವರು 2011ರಿಂದಲೂ ಈ ಹುದ್ದೆಯಲ್ಲಿದ್ದರು.</p><p>ಮುಖ್ಯ ಸಚೇತಕ ಹುದ್ದೆ ತೊರೆದ ಕಲ್ಯಾಣ್ ಬ್ಯಾನರ್ಜಿ: ಟಿಎಂಸಿ ಹಿರಿಯ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕ ಹುದ್ದೆಗೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಹಾಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಪಕ್ಷದ ಸಂಸದರ ಜತೆ ಸಮನ್ವಯ ಸಾಧಿಸಲು ವಿಫಲರಾಗಿದ್ದಕ್ಕೆ ಅವರು ಟೀಕೆಗೆ ಗುರಿಯಾಗಿದ್ದರು.</p><p>‘ಪಕ್ಷದ ಸಂಸದರ ನಡುವೆ ಸಮನ್ವಯದ ಕೊರತೆಯಿದೆ ಎಂದು ದೀದಿ (ಮಮತಾ ಬ್ಯಾನರ್ಜಿ) ಅವರು ವರ್ಚುವಲ್ ಸಭೆಯಲ್ಲಿ ಹೇಳಿದ್ದಾರೆ. ನನ್ನ ಮೇಲೆ ಆಪಾದನೆ ಬಂದಿರುವುದರಿಂದ ಮುಖ್ಯ ಸಚೇತಕ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ’ ಎಂದು ಕಲ್ಯಾಣ್ ಬ್ಯಾನರ್ಜಿ ಅವರು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.</p><p>‘ಪಕ್ಷದ ಕೆಲವು ಸಂಸದರು ಸಂಸತ್ ಕಲಾಪಕ್ಕೆ ಬರುವುದೇ ಇಲ್ಲ. ನಾನು ಏನು ಮಾಡಲು ಸಾಧ್ಯ? ಇದರಲ್ಲಿ ನನ್ನ ತಪ್ಪೇನು? ಎಲ್ಲದಕ್ಕೂ ನನ್ನನ್ನೇ ದೂಷಿಸಲಾಗುತ್ತಿದೆ’ ಎಂದು ಅಸಮಾಧಾನ ಹೊರಹಾಕಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ತೃಣಮೂಲ ಕಾಂಗ್ರೆಸ್ ಪಕ್ಷವು (ಟಿಎಂಸಿ) ತನ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ಸಂಸದೀಯ ಪಕ್ಷದ ನಾಯಕನನ್ನಾಗಿ ನೇಮಕ ಮಾಡಿದೆ. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಯಕ ಸುದೀಪ್ ಬಂದೋಪಾಧ್ಯಾಯ ಅವರ ಸ್ಥಾನಕ್ಕೆ ಈ ನೇಮಕ ನಡೆದಿದೆ.</p><p>ಪಕ್ಷದ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಸೋಮವಾರ ನಡೆದ ಸಂಸತ್ತಿನ ಉಭಯ ಸದನಗಳ ಟಿಎಂಸಿ ಸಂಸದರ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಮತಾ ಅವರು ಕೋಲ್ಕತ್ತದಿಂದ ವರ್ಚುವಲ್ ಆಗಿ ಸಭೆಯಲ್ಲಿ ಪಾಲ್ಗೊಂಡರು.</p><p>‘ಸುದೀಪ್ ಬಂದೋಪಾಧ್ಯಾಯ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಅಭಿಷೇಕ್ ಬ್ಯಾನರ್ಜಿ ಲೋಕಸಭೆಯಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ’ ಎಂದು ಮಮತಾ ಅವರು ಸಭೆಯಲ್ಲಿ ಪಕ್ಷದ ಸಂಸದರಿಗೆ ತಿಳಿಸಿದರು ಎಂದು ಮೂಲಗಳು ಹೇಳಿವೆ. ಕೋಲ್ಕತ್ತಾ ಉತ್ತರ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿರುವ ಬಂದೋಪಾಧ್ಯಾಯ ಅವರು 2011ರಿಂದಲೂ ಈ ಹುದ್ದೆಯಲ್ಲಿದ್ದರು.</p><p>ಮುಖ್ಯ ಸಚೇತಕ ಹುದ್ದೆ ತೊರೆದ ಕಲ್ಯಾಣ್ ಬ್ಯಾನರ್ಜಿ: ಟಿಎಂಸಿ ಹಿರಿಯ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕ ಹುದ್ದೆಗೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಹಾಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಪಕ್ಷದ ಸಂಸದರ ಜತೆ ಸಮನ್ವಯ ಸಾಧಿಸಲು ವಿಫಲರಾಗಿದ್ದಕ್ಕೆ ಅವರು ಟೀಕೆಗೆ ಗುರಿಯಾಗಿದ್ದರು.</p><p>‘ಪಕ್ಷದ ಸಂಸದರ ನಡುವೆ ಸಮನ್ವಯದ ಕೊರತೆಯಿದೆ ಎಂದು ದೀದಿ (ಮಮತಾ ಬ್ಯಾನರ್ಜಿ) ಅವರು ವರ್ಚುವಲ್ ಸಭೆಯಲ್ಲಿ ಹೇಳಿದ್ದಾರೆ. ನನ್ನ ಮೇಲೆ ಆಪಾದನೆ ಬಂದಿರುವುದರಿಂದ ಮುಖ್ಯ ಸಚೇತಕ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ’ ಎಂದು ಕಲ್ಯಾಣ್ ಬ್ಯಾನರ್ಜಿ ಅವರು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.</p><p>‘ಪಕ್ಷದ ಕೆಲವು ಸಂಸದರು ಸಂಸತ್ ಕಲಾಪಕ್ಕೆ ಬರುವುದೇ ಇಲ್ಲ. ನಾನು ಏನು ಮಾಡಲು ಸಾಧ್ಯ? ಇದರಲ್ಲಿ ನನ್ನ ತಪ್ಪೇನು? ಎಲ್ಲದಕ್ಕೂ ನನ್ನನ್ನೇ ದೂಷಿಸಲಾಗುತ್ತಿದೆ’ ಎಂದು ಅಸಮಾಧಾನ ಹೊರಹಾಕಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>