ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

Ahmedabad Plane Crash: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು

Published : 12 ಜೂನ್ 2025, 10:21 IST
Last Updated : 13 ಜೂನ್ 2025, 7:32 IST
ಫಾಲೋ ಮಾಡಿ
10:2112 Jun 2025
10:2512 Jun 2025

ಗುರುವಾರ (ಜೂನ್‌ 12ರಂದು) ಮಧ್ಯಾಹ್ನ 1.39ಕ್ಕೆ ಟೇಕ್‌ ಆಫ್‌ ಆಗಿದ್ದ ವಿಮಾನ

10:2612 Jun 2025

ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಮೇಘಾನಿನಗರ್‌ ಪ್ರದೇಶದಲ್ಲಿ ಪತನಗೊಂಡ ವಿಮಾನ. ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

10:2712 Jun 2025

ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಅವರೂ ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನದಲ್ಲಿದ್ದರು ಎನ್ನಲಾಗುತ್ತಿದೆ. ಆದಾಗ್ಯೂ, ಎಷ್ಟು ಪ್ರಯಾಣಿಕರಿದ್ದರು, ದುರಂತದಲ್ಲಿ ಸಂಭವಿಸಿರುವ ಸಾವು–ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

10:2812 Jun 2025

ಬೋಯಿಂಗ್ ಕಂಪನಿಗೆ ಸೇರಿದ 787 ಡ್ರೀಮ್‌ಲೈನರ್‌ ವಿಮಾನ ಇದಾಗಿದೆ. ಒಟ್ಟು 300 ಪ್ರಯಾಣಿಕರನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಈ ವಿಮಾನ ಹೊಂದಿತ್ತು.

10:2812 Jun 2025

ದುರಂತದ ಮಾಹಿತಿ ಲಭ್ಯವಾಗುತ್ತಿದ್ದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ತನಿಖೆಗೆ ಆದೇಶಿಸಿದೆ. ಬೋಯಿಂಗ್‌ ಕಂಪನಿಯ ತಾಂತ್ರಿಕ ಅಧಿಕಾರಿಗಳೂ ಸ್ಥಳಕ್ಕೆ ಧಾವಿಸುವ ಸಾಧ್ಯತೆಗಳಿವೆ.

10:3112 Jun 2025

ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಮಾಹಿತಿ ಪ್ರಕಾರ, ಈ ವಿಮಾನವು ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಮತ್ತು ಸಹ ಪೈಲಟ್‌ ಕ್ಲೈವ್ ಕುಂದರ್ ಅವರ ನೇತೃತ್ವದಲ್ಲಿತ್ತು.

10:3412 Jun 2025

ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಆಘಾತ

ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಕ್ಷಣವಾಗಿದೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ.
– ಸಿದ್ದರಾಮಯ್ಯ, ಕರ್ನಾಟಕ ಮುಖ್ಯಮಂತ್ರಿ
ವರದಿಯಿಂದ ತೀವ್ರ ಆತಂಕಕ್ಕೊಳಗಾಗಿದ್ಧೇನೆ. ಪ್ರಯಾಣಿಕರು ಹಾಗೂ ವಿಮಾನ ಸಿಬ್ಬಂದಿ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುತ್ತೇನೆ.
– ಹಿಮಂತ್ ಬಿಸ್ವಾ ಶರ್ಮಾ, ಅಸ್ಸಾಂ ಮುಖ್ಯಮಂತ್ರಿ
10:3412 Jun 2025

ಮೋದಿ ರಾಜೀನಾಮೆ ನೀಡಲಿ: ಸ್ವಾಮಿ

1950ರಲ್ಲಿ ರೈಲು ಹಳಿತಪ್ಪಿ ದುರಂತ ಸಂಭವಿಸಿತ್ತು. ಅಂದು ಲಾಲ್‌ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಅದೇ ನೈತಿಕತೆಯ ಆಧಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ನಾಗರಿಕ ವಿಮಾನಯಾನ ಸಚಿವ ನಾಯ್ಡು ರಾಜೀನಾಮೆ ಸಲ್ಲಿಸಬೇಕು.
– ಸುಬ್ರಮಣಿಯನ್ ಸ್ವಾಮಿ, ಬಿಜೆಪಿ ಮುಖಂಡ
11:0712 Jun 2025

ಹೃದಯವಿದ್ರಾವಕ ದುರಂತ: ಮೋದಿ

ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕ ಘಟನೆಯಾಗಿದೆ. ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವ ಬಗ್ಗೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ.
– ನರೇಂದ್ರ ಮೋದಿ, ಪ್ರಧಾನಿ
ADVERTISEMENT
ADVERTISEMENT