<p><strong>ಬರೇಲಿ(ಉತ್ತರ ಪ್ರದೇಶ):</strong> ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಿಸಿರುವುದನ್ನು ಸ್ವಾಗತಿಸಿರುವ ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಶಹಾಬುದ್ದೀನ್ ರಜ್ವಿ ಬರೆಲ್ವಿ, ಆರ್ಥಿಕವಾಗಿ ಹಿಂದುಳಿದ ಮುಸ್ಲಿಮರಿಗೆ ಇದರಿಂದ ಒಳಿತಾಗಲಿದೆ ಎಂದು ಹೇಳಿದ್ದಾರೆ.</p><p>‘ಮಸೂದೆ ಪರವಾಗಿ ಮತ ಹಾಕಿರುವ ಎಲ್ಲ ಸಂಸದರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಇಂತಹ ದಿಟ್ಟ ಕ್ರಮವನ್ನು ತೆಗೆದುಕೊಂಡಿರುವ ಕೇಂದ್ರ ಸರ್ಕಾರಕ್ಕೂ ನನ್ನ ನಮನಗಳು’ ಎಂದು ತಮ್ಮ ಹೇಳಿಕೆಯಲ್ಲಿ ಬರೆಲ್ವಿ ತಿಳಿಸಿದ್ದಾರೆ.</p><p>‘ಬಡವರು, ದುರ್ಬಲರು ಮತ್ತು ಅನಾಥರನ್ನು ಪೋಷಿಸುವುದು ವಕ್ಫ್ನ ಮೂಲ ಉದ್ದೇಶವಾಗಿತ್ತು. ಆದರೆ, ಅದರ ಉದ್ದೇಶವನ್ನು ಮರೆತು ಕೆಲವರಷ್ಟೇ ಅದರಿಂದ ಬರುವ ಆದಾಯವನ್ನು ಜೇಬಿಗಿಳಿಸಿಕೊಳ್ಳುತ್ತಿದ್ದರು. ಇದೀಗ ಮಸೂದೆಯು ಆರ್ಥಿಕವಾಗಿ ಹಿಂದುಳಿದಿರುವ ಮುಸ್ಲಿಮರ ಉನ್ನತಿಗೆ ಸಹಕಾರಿಯಾಗಲಿದೆ’ ಎಂದು ಹೇಳಿದ್ದಾರೆ.</p><p>ರಾಜ್ಯಸಭೆಯಲ್ಲಿಯೂ ಮಸೂದೆ ಅಂಗೀಕಾರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ‘ಭ್ರಷ್ಟಾಚಾರವನ್ನು ತಡೆಗಟ್ಟುವಲ್ಲಿ ಮತ್ತು ವಕ್ಫ್ ಸಂಪನ್ಮೂಲ ಉದ್ದೇಶಿತ ಕೆಲಸಗಳಿಗೆ ಬಳಕೆಯಾಗುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಇದು ನಿರ್ಣಾಯಕ ಹೆಜ್ಜೆಯಾಗಲಿದೆ’ ಎಂದು ತಿಳಿಸಿದರು.</p><p>ಬುಧವಾರ ಮಧ್ಯಾಹ್ನ ಲೋಕಸಭೆಯಲ್ಲಿ ಮಂಡನೆಯಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಗೆ ಸತತ 12 ಗಂಟೆಗಳ ಚರ್ಚೆಯ ನಂತರ ಅಂಗೀಕಾರ ದೊರೆತಿದೆ. ಮಸೂದೆ ಪರ 288 ಮತ್ತು ಮಸೂದೆ ವಿರುದ್ಧ 232 ಮತಗಳು ಚಲಾವಣೆಯಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರೇಲಿ(ಉತ್ತರ ಪ್ರದೇಶ):</strong> ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಿಸಿರುವುದನ್ನು ಸ್ವಾಗತಿಸಿರುವ ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಶಹಾಬುದ್ದೀನ್ ರಜ್ವಿ ಬರೆಲ್ವಿ, ಆರ್ಥಿಕವಾಗಿ ಹಿಂದುಳಿದ ಮುಸ್ಲಿಮರಿಗೆ ಇದರಿಂದ ಒಳಿತಾಗಲಿದೆ ಎಂದು ಹೇಳಿದ್ದಾರೆ.</p><p>‘ಮಸೂದೆ ಪರವಾಗಿ ಮತ ಹಾಕಿರುವ ಎಲ್ಲ ಸಂಸದರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಇಂತಹ ದಿಟ್ಟ ಕ್ರಮವನ್ನು ತೆಗೆದುಕೊಂಡಿರುವ ಕೇಂದ್ರ ಸರ್ಕಾರಕ್ಕೂ ನನ್ನ ನಮನಗಳು’ ಎಂದು ತಮ್ಮ ಹೇಳಿಕೆಯಲ್ಲಿ ಬರೆಲ್ವಿ ತಿಳಿಸಿದ್ದಾರೆ.</p><p>‘ಬಡವರು, ದುರ್ಬಲರು ಮತ್ತು ಅನಾಥರನ್ನು ಪೋಷಿಸುವುದು ವಕ್ಫ್ನ ಮೂಲ ಉದ್ದೇಶವಾಗಿತ್ತು. ಆದರೆ, ಅದರ ಉದ್ದೇಶವನ್ನು ಮರೆತು ಕೆಲವರಷ್ಟೇ ಅದರಿಂದ ಬರುವ ಆದಾಯವನ್ನು ಜೇಬಿಗಿಳಿಸಿಕೊಳ್ಳುತ್ತಿದ್ದರು. ಇದೀಗ ಮಸೂದೆಯು ಆರ್ಥಿಕವಾಗಿ ಹಿಂದುಳಿದಿರುವ ಮುಸ್ಲಿಮರ ಉನ್ನತಿಗೆ ಸಹಕಾರಿಯಾಗಲಿದೆ’ ಎಂದು ಹೇಳಿದ್ದಾರೆ.</p><p>ರಾಜ್ಯಸಭೆಯಲ್ಲಿಯೂ ಮಸೂದೆ ಅಂಗೀಕಾರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ‘ಭ್ರಷ್ಟಾಚಾರವನ್ನು ತಡೆಗಟ್ಟುವಲ್ಲಿ ಮತ್ತು ವಕ್ಫ್ ಸಂಪನ್ಮೂಲ ಉದ್ದೇಶಿತ ಕೆಲಸಗಳಿಗೆ ಬಳಕೆಯಾಗುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಇದು ನಿರ್ಣಾಯಕ ಹೆಜ್ಜೆಯಾಗಲಿದೆ’ ಎಂದು ತಿಳಿಸಿದರು.</p><p>ಬುಧವಾರ ಮಧ್ಯಾಹ್ನ ಲೋಕಸಭೆಯಲ್ಲಿ ಮಂಡನೆಯಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಗೆ ಸತತ 12 ಗಂಟೆಗಳ ಚರ್ಚೆಯ ನಂತರ ಅಂಗೀಕಾರ ದೊರೆತಿದೆ. ಮಸೂದೆ ಪರ 288 ಮತ್ತು ಮಸೂದೆ ವಿರುದ್ಧ 232 ಮತಗಳು ಚಲಾವಣೆಯಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>