<p><strong>ಮುಂಬೈ</strong>: ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿಯ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯಿ ಅವರು ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆಯ ಪ್ರಮುಖ ಸೂತ್ರಧಾರ ಎಂದು ಮುಂಬೈ ಪೊಲೀಸರು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದಾರೆ.</p>.<p>ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯ (ಎಂಸಿಒಸಿಎ) ನಿಬಂಧನೆಗಳನ್ನು ಉಲ್ಲೇಖಿಸಿ, ಪ್ರಕರಣದ ಎಂಟು ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಪೊಲೀಸರು ಮಂಗಳವಾರ ಕೋರ್ಟ್ಗೆ ಮನವಿ ಸಲ್ಲಿಸಿದರು.</p>.<p>ಇತ್ತೀಚೆಗಷ್ಟೇ ಅಮೆರಿಕದಲ್ಲಿ ಬಂಧಿಸಲ್ಪಟ್ಟು ಅಲ್ಲಿನ ಜೈಲಿನಲ್ಲಿರುವ ಅನ್ಮೋಲ್ ಬಿಷ್ಣೋಯಿಯನ್ನು ಈ ಪ್ರಕರಣದಲ್ಲಿ ಬೇಕಾಗಿರುವ ಆರೋಪಿ ಎಂದು ಮುಂಬೈ ಪೊಲೀಸರು ಪರಿಗಣಿಸಿದ್ದಾರೆ. ಅಲ್ಲದೆ, ಮತ್ತೊಬ್ಬ ಆರೋಪಿ ಶುಭಂ ಲೋಂಕರ್ ಕೂಡ ಬೇಕಾಗಿರುವ ಪಟ್ಟಿಯಲ್ಲಿದ್ದಾನೆ.</p>.<p>ಆರೋಪಿಗಳಿಗೆ ಅನ್ಮೋಲ್ ಹಣಕಾಸಿನ ನೆರವು ನೀಡುತ್ತಿದ್ದ. ಹಣದ ಮೂಲ ಮತ್ತು ಬಳಕೆ ಖಚಿತಪಡಿಸಿಕೊಳ್ಳಲು ಇನ್ನಷ್ಟು ತನಿಖೆಯ ಅಗತ್ಯವಿದೆ. ಅಲ್ಲದೆ, ಅನ್ಮೋಲ್ ಸಹ ಆರೋಪಿಗಳನ್ನು ಸಂವಹನ ಅಪ್ಲಿಕೇಶನ್ ಮೂಲಕ ಸಂಪರ್ಕಿಸಿದ್ದಾನೆ. ಈ ಅಂಶದ ಬಗ್ಗೆಯೂ ಮಾಹಿತಿ ಸಂಗ್ರಹಿಸಬೇಕಾಗಿದೆ. ಹಾಗಾಗಿ, ಬಂಧಿತ ಆರೋಪಿಗಳನ್ನು ಕಸ್ಟಡಿಗೆ ಪಡೆಯುವ ಅಗತ್ಯವಿದೆ ಎಂದು ಪೊಲೀಸರು ಕೋರ್ಟ್ಗೆ ಅರುಹಿದರು.</p>.<p>ವಿಶೇಷ ಮೋಕಾ ನ್ಯಾಯಾಲಯದ ನ್ಯಾಯಾಧೀಶ ಎ.ಎಂ. ಪಾಟೀಲ್ ಅವರು ಪ್ರಮುಖ ಶೂಟರ್ ಶಿವಕುಮಾರ್ ಗೌತಮ್ ಸೇರಿದಂತೆ ಎಂಟು ಆರೋಪಿಗಳನ್ನು ಡಿಸೆಂಬರ್ 6ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು. ಉಳಿದ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದರು. </p>.<p>ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ (66) ಅವರನ್ನು ಅಕ್ಟೋಬರ್ 12 ರಂದು ಬಾಂದ್ರಾದಲ್ಲಿ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಶಿವಕುಮಾರ್ ಗೌತಮ್ ಸೇರಿ 26 ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ನವೆಂಬರ್ 30ರಂದು, ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕಾಯ್ದೆ ಮೋಕಾ ಹೇರಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳನ್ನು ಮಂಗಳವಾರ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.</p>.<p><strong>ಪತ್ರಕರ್ತರನ್ನು ಹೊರ ಕಳುಹಿಸಿದ ನ್ಯಾಯಾಧೀಶರು</strong></p>.<p>ನ್ಯಾಯಾಲಯದ ಕಲಾಪ ಪ್ರಾರಂಭವಾಗುವ ಮೊದಲು, ಪ್ರಾಸಿಕ್ಯೂಷನ್ ಆಕ್ಷೇಪಣೆ ಸಲ್ಲಿಸಿದ ನಂತರ ನ್ಯಾಯಾಧೀಶರು ನ್ಯಾಯಾಲಯದಲ್ಲಿ ಹಾಜರಿದ್ದ ಪತ್ರಕರ್ತರನ್ನು ಹೊರಹೋಗುವಂತೆ ಹೇಳಿದರು. ರಿಮಾಂಡ್ ಅರ್ಜಿಯು ಸೂಕ್ಷ್ಮ ಮಾಹಿತಿಯನ್ನು ಹೊಂದಿದೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿಯ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯಿ ಅವರು ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆಯ ಪ್ರಮುಖ ಸೂತ್ರಧಾರ ಎಂದು ಮುಂಬೈ ಪೊಲೀಸರು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದಾರೆ.</p>.<p>ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯ (ಎಂಸಿಒಸಿಎ) ನಿಬಂಧನೆಗಳನ್ನು ಉಲ್ಲೇಖಿಸಿ, ಪ್ರಕರಣದ ಎಂಟು ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಪೊಲೀಸರು ಮಂಗಳವಾರ ಕೋರ್ಟ್ಗೆ ಮನವಿ ಸಲ್ಲಿಸಿದರು.</p>.<p>ಇತ್ತೀಚೆಗಷ್ಟೇ ಅಮೆರಿಕದಲ್ಲಿ ಬಂಧಿಸಲ್ಪಟ್ಟು ಅಲ್ಲಿನ ಜೈಲಿನಲ್ಲಿರುವ ಅನ್ಮೋಲ್ ಬಿಷ್ಣೋಯಿಯನ್ನು ಈ ಪ್ರಕರಣದಲ್ಲಿ ಬೇಕಾಗಿರುವ ಆರೋಪಿ ಎಂದು ಮುಂಬೈ ಪೊಲೀಸರು ಪರಿಗಣಿಸಿದ್ದಾರೆ. ಅಲ್ಲದೆ, ಮತ್ತೊಬ್ಬ ಆರೋಪಿ ಶುಭಂ ಲೋಂಕರ್ ಕೂಡ ಬೇಕಾಗಿರುವ ಪಟ್ಟಿಯಲ್ಲಿದ್ದಾನೆ.</p>.<p>ಆರೋಪಿಗಳಿಗೆ ಅನ್ಮೋಲ್ ಹಣಕಾಸಿನ ನೆರವು ನೀಡುತ್ತಿದ್ದ. ಹಣದ ಮೂಲ ಮತ್ತು ಬಳಕೆ ಖಚಿತಪಡಿಸಿಕೊಳ್ಳಲು ಇನ್ನಷ್ಟು ತನಿಖೆಯ ಅಗತ್ಯವಿದೆ. ಅಲ್ಲದೆ, ಅನ್ಮೋಲ್ ಸಹ ಆರೋಪಿಗಳನ್ನು ಸಂವಹನ ಅಪ್ಲಿಕೇಶನ್ ಮೂಲಕ ಸಂಪರ್ಕಿಸಿದ್ದಾನೆ. ಈ ಅಂಶದ ಬಗ್ಗೆಯೂ ಮಾಹಿತಿ ಸಂಗ್ರಹಿಸಬೇಕಾಗಿದೆ. ಹಾಗಾಗಿ, ಬಂಧಿತ ಆರೋಪಿಗಳನ್ನು ಕಸ್ಟಡಿಗೆ ಪಡೆಯುವ ಅಗತ್ಯವಿದೆ ಎಂದು ಪೊಲೀಸರು ಕೋರ್ಟ್ಗೆ ಅರುಹಿದರು.</p>.<p>ವಿಶೇಷ ಮೋಕಾ ನ್ಯಾಯಾಲಯದ ನ್ಯಾಯಾಧೀಶ ಎ.ಎಂ. ಪಾಟೀಲ್ ಅವರು ಪ್ರಮುಖ ಶೂಟರ್ ಶಿವಕುಮಾರ್ ಗೌತಮ್ ಸೇರಿದಂತೆ ಎಂಟು ಆರೋಪಿಗಳನ್ನು ಡಿಸೆಂಬರ್ 6ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು. ಉಳಿದ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದರು. </p>.<p>ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ (66) ಅವರನ್ನು ಅಕ್ಟೋಬರ್ 12 ರಂದು ಬಾಂದ್ರಾದಲ್ಲಿ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಶಿವಕುಮಾರ್ ಗೌತಮ್ ಸೇರಿ 26 ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ನವೆಂಬರ್ 30ರಂದು, ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕಾಯ್ದೆ ಮೋಕಾ ಹೇರಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳನ್ನು ಮಂಗಳವಾರ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.</p>.<p><strong>ಪತ್ರಕರ್ತರನ್ನು ಹೊರ ಕಳುಹಿಸಿದ ನ್ಯಾಯಾಧೀಶರು</strong></p>.<p>ನ್ಯಾಯಾಲಯದ ಕಲಾಪ ಪ್ರಾರಂಭವಾಗುವ ಮೊದಲು, ಪ್ರಾಸಿಕ್ಯೂಷನ್ ಆಕ್ಷೇಪಣೆ ಸಲ್ಲಿಸಿದ ನಂತರ ನ್ಯಾಯಾಧೀಶರು ನ್ಯಾಯಾಲಯದಲ್ಲಿ ಹಾಜರಿದ್ದ ಪತ್ರಕರ್ತರನ್ನು ಹೊರಹೋಗುವಂತೆ ಹೇಳಿದರು. ರಿಮಾಂಡ್ ಅರ್ಜಿಯು ಸೂಕ್ಷ್ಮ ಮಾಹಿತಿಯನ್ನು ಹೊಂದಿದೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>