ದೆಹಲಿ ಅಬಕಾರಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ರಾತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ.ಈ ಮೂಲಕ ಕೇಜ್ರಿವಾಲ್ ಅವರು, ಸ್ವಾತಂತ್ರ್ಯ ನಂತರದಲ್ಲಿ ಬಂಧನಕ್ಕೆ ಒಳಗಾದ ಮೊದಲ ಹಾಲಿ ಮುಖ್ಯಮಂತ್ರಿ ಎನಿಸಿದ್ದಾರೆ.
ಲೋಕಸಭಾ ಚುನಾವಣೆಗೂ ಮುನ್ನವೇ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು ಬಹುದೊಡ್ಡ ಸಂಚಿನ ಭಾಗ ಎಂದು ಎಎಪಿ ಆರೋಪಿಸಿದೆ. ಅಲ್ಲದೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಜಾರಿ ನಿರ್ದೇಶನಾಲಯವು ರಾಜಕೀಯ ಅಸ್ತ್ರವಾಗಿದೆ ಎಂದು ಕಿಡಿ ಕಾರಿದೆ.