ವಿಧಾನಸಭೆ ಚುನಾವಣೆಯಲ್ಲಿ ಮಿತ್ರಪಕ್ಷಗಳ ಜೊತೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಲು ಕಾಂಗ್ರೆಸ್ ಹಿಂದೇಟು ಹಾಕಿತ್ತು. ಇದು ಎಸ್ಪಿ ಸೇರಿ, ಜೆಡಿಯು ಸೇರಿ ಹಲವು ಪಕ್ಷಗಳ ಅಸಮಾಧಾನಕ್ಕೆ ಕಾರಣವಾಗಿತ್ತು. ಮೈತ್ರಿಕೂಟವು ಲೋಕಸಭೆ ಚುನಾವಣೆಯಲ್ಲಿ ಮಾತ್ರ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂದು ಕಾಂಗ್ರೆಸ್ ನಾಯಕರು ವಾದಿಸಿದ್ದರು.