<p><strong>ನವದೆಹಲಿ:</strong> ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ದೆಹಲಿ ಹೈಕೋರ್ಟ್ನಿಂದ ಅಲಹಾಬಾದ್ ಹೈಕೋರ್ಟ್ಗೆ ವರ್ಗಾವಣೆ ಮಾಡುವ ಕೊಲಿಜಿಯಂ ಶಿಫಾರಸನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಹಲವು ಬಾರ್ ಸಂಘಟನೆಗಳು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಅವರಿಗೆ ಮನವಿ ಮಾಡಿವೆ.</p><p>ಅಲಹಾಬಾದ್, ಗುಜರಾತ್, ಕೇರಳ, ಜಬಲಪುರ, ಕರ್ನಾಟಕ ಹಾಗೂ ಲಖನೌ ಹೈಕೋರ್ಟ್ನ ಬಾರ್ ಸಂಘಗಳು ಸಿಜೆಐ ಕಚೇರಿಗೆ ಮನವಿ ಸಲ್ಲಿಸಿವೆ.</p>.ಯಶವಂತ್ ವರ್ಮಾ ವಿರುದ್ಧ FIR ದಾಖಲಿಸಲು ಕೋರಿ ಅರ್ಜಿ: ತುರ್ತು ವಿಚಾರಣೆಗೆ SC ನಕಾರ.<p>ತಮ್ಮ ಅಧಿಕೃತ ಮನೆಯಲ್ಲಿ ಬೆಂಕಿ ಅವಘಡದ ವೇಳೆ ಸುಟ್ಟ ಸ್ಥಿತಿಯಲ್ಲಿ ಹಣ ಲಭಿಸಿದ ಪ್ರಕರಣದಲ್ಲಿ ನ್ಯಾಯಮೂರ್ತಿ ವರ್ಮಾ ಅವರು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ ಎನ್ನುವುದನ್ನೂ ಮನವಿಯಲ್ಲಿ ಉಲ್ಲೇಖಿಸಿಲಾಗಿದೆ.</p><p>ಅಲ್ಲದೆ ಘಟನೆ ಸಂಬಂಧ ಎಫ್ಐಆರ್ ದಾಖಲು ಮಾಡದಿರುವುದನ್ನೂ ಬಾರ್ ಸಂಘಗಳು ಪ್ರಶ್ನಿಸಿವೆ.</p><p>ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವರ್ಗಾವಣೆ ಪ್ರಸ್ತಾವನೆಯನ್ನು ವಿರೋಧಿಸಿ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್ ಮಾರ್ಚ್ 25 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದೆ.</p>.Podcast ಸಂಪಾದಕೀಯ | ನ್ಯಾಯಮೂರ್ತಿ ವರ್ಮಾ ಪ್ರಕರಣ; ಶಂಕೆ ನಿವಾರಿಸುವ ಕೆಲಸ ಆಗಲಿ.<h2>ಪ್ರಕರಣದ ಹಿನ್ನಲೆ</h2><p>ಮಾರ್ಚ್ 14 ರಂದು ರಾತ್ರಿ 11.35 ರ ಸುಮಾರಿಗೆ ನ್ಯಾಯಮೂರ್ತಿ ವರ್ಮಾ ಅವರ ಲುಟಿಯೆನ್ಸ್ ದೆಹಲಿ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಅಧಿಕಾರಿಗಳಿಗೆ ನಗದು ಇರುವುದು ಪತ್ತೆಯಾಗಿತ್ತು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು.</p><p>ವಿವಾದದ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್ಗೆ ವರ್ಗಾವಣೆ ಮಾಡಲು ಶಿಫಾರಸು ಮಾಡಿತ್ತು. </p>.ನ್ಯಾಯಮೂರ್ತಿ ಯಶವಂತ್ ವರ್ಮಾ ವರ್ಗಾವಣೆ ನಿರ್ಣಯ ದೃಢೀಕರಿಸಿದ ಕೊಲಿಜಿಯಂ.<p>ಮಾರ್ಚ್ 22 ರಂದು, ಆರೋಪಗಳ ಬಗ್ಗೆ ಆಂತರಿಕ ತನಿಖೆ ನಡೆಸಲು ಸಿಜೆಐ ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದರು. ದೆಹಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ಕೆ ಉಪಾಧ್ಯಾಯ ಅವರು ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದರು. ಆ ವಿಚಾರಣಾ ವರದಿಯನ್ನು ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿತ್ತು.</p><p>ನ್ಯಾಯಮೂರ್ತಿ ವರ್ಮಾ ಆರೋಪಗಳನ್ನು ನಿರಾಕರಿಸಿದ್ದು, ತಾವು ಅಥವಾ ಅವರ ಕುಟುಂಬ ಸದಸ್ಯರು ಯಾವುದೇ ಹಣವನ್ನು ಇಟ್ಟುಕೊಂಡಿಲ್ಲ ಎಂದು ಹೇಳಿದ್ದಾರೆ.</p> .ನ್ಯಾ. ವರ್ಮಾ ವರ್ಗಾವಣೆ | ಅಲಹಾಬಾದ್ ಹೈಕೋರ್ಟ್ ಕಸದ ಬುಟ್ಟಿಯೇ: ಬಾರ್ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ದೆಹಲಿ ಹೈಕೋರ್ಟ್ನಿಂದ ಅಲಹಾಬಾದ್ ಹೈಕೋರ್ಟ್ಗೆ ವರ್ಗಾವಣೆ ಮಾಡುವ ಕೊಲಿಜಿಯಂ ಶಿಫಾರಸನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಹಲವು ಬಾರ್ ಸಂಘಟನೆಗಳು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಅವರಿಗೆ ಮನವಿ ಮಾಡಿವೆ.</p><p>ಅಲಹಾಬಾದ್, ಗುಜರಾತ್, ಕೇರಳ, ಜಬಲಪುರ, ಕರ್ನಾಟಕ ಹಾಗೂ ಲಖನೌ ಹೈಕೋರ್ಟ್ನ ಬಾರ್ ಸಂಘಗಳು ಸಿಜೆಐ ಕಚೇರಿಗೆ ಮನವಿ ಸಲ್ಲಿಸಿವೆ.</p>.ಯಶವಂತ್ ವರ್ಮಾ ವಿರುದ್ಧ FIR ದಾಖಲಿಸಲು ಕೋರಿ ಅರ್ಜಿ: ತುರ್ತು ವಿಚಾರಣೆಗೆ SC ನಕಾರ.<p>ತಮ್ಮ ಅಧಿಕೃತ ಮನೆಯಲ್ಲಿ ಬೆಂಕಿ ಅವಘಡದ ವೇಳೆ ಸುಟ್ಟ ಸ್ಥಿತಿಯಲ್ಲಿ ಹಣ ಲಭಿಸಿದ ಪ್ರಕರಣದಲ್ಲಿ ನ್ಯಾಯಮೂರ್ತಿ ವರ್ಮಾ ಅವರು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ ಎನ್ನುವುದನ್ನೂ ಮನವಿಯಲ್ಲಿ ಉಲ್ಲೇಖಿಸಿಲಾಗಿದೆ.</p><p>ಅಲ್ಲದೆ ಘಟನೆ ಸಂಬಂಧ ಎಫ್ಐಆರ್ ದಾಖಲು ಮಾಡದಿರುವುದನ್ನೂ ಬಾರ್ ಸಂಘಗಳು ಪ್ರಶ್ನಿಸಿವೆ.</p><p>ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವರ್ಗಾವಣೆ ಪ್ರಸ್ತಾವನೆಯನ್ನು ವಿರೋಧಿಸಿ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್ ಮಾರ್ಚ್ 25 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದೆ.</p>.Podcast ಸಂಪಾದಕೀಯ | ನ್ಯಾಯಮೂರ್ತಿ ವರ್ಮಾ ಪ್ರಕರಣ; ಶಂಕೆ ನಿವಾರಿಸುವ ಕೆಲಸ ಆಗಲಿ.<h2>ಪ್ರಕರಣದ ಹಿನ್ನಲೆ</h2><p>ಮಾರ್ಚ್ 14 ರಂದು ರಾತ್ರಿ 11.35 ರ ಸುಮಾರಿಗೆ ನ್ಯಾಯಮೂರ್ತಿ ವರ್ಮಾ ಅವರ ಲುಟಿಯೆನ್ಸ್ ದೆಹಲಿ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಅಧಿಕಾರಿಗಳಿಗೆ ನಗದು ಇರುವುದು ಪತ್ತೆಯಾಗಿತ್ತು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು.</p><p>ವಿವಾದದ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್ಗೆ ವರ್ಗಾವಣೆ ಮಾಡಲು ಶಿಫಾರಸು ಮಾಡಿತ್ತು. </p>.ನ್ಯಾಯಮೂರ್ತಿ ಯಶವಂತ್ ವರ್ಮಾ ವರ್ಗಾವಣೆ ನಿರ್ಣಯ ದೃಢೀಕರಿಸಿದ ಕೊಲಿಜಿಯಂ.<p>ಮಾರ್ಚ್ 22 ರಂದು, ಆರೋಪಗಳ ಬಗ್ಗೆ ಆಂತರಿಕ ತನಿಖೆ ನಡೆಸಲು ಸಿಜೆಐ ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದರು. ದೆಹಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ಕೆ ಉಪಾಧ್ಯಾಯ ಅವರು ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದರು. ಆ ವಿಚಾರಣಾ ವರದಿಯನ್ನು ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿತ್ತು.</p><p>ನ್ಯಾಯಮೂರ್ತಿ ವರ್ಮಾ ಆರೋಪಗಳನ್ನು ನಿರಾಕರಿಸಿದ್ದು, ತಾವು ಅಥವಾ ಅವರ ಕುಟುಂಬ ಸದಸ್ಯರು ಯಾವುದೇ ಹಣವನ್ನು ಇಟ್ಟುಕೊಂಡಿಲ್ಲ ಎಂದು ಹೇಳಿದ್ದಾರೆ.</p> .ನ್ಯಾ. ವರ್ಮಾ ವರ್ಗಾವಣೆ | ಅಲಹಾಬಾದ್ ಹೈಕೋರ್ಟ್ ಕಸದ ಬುಟ್ಟಿಯೇ: ಬಾರ್ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>