<p><strong>ಗುವಾಹಟಿ:</strong> ಅಸ್ಸಾಂ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಅವರು ಪಕ್ಷಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.</p><p>ಹೈಕಮಾಂಡ್ ಮಧ್ಯ ಪ್ರವೇಶದಿಂದಾಗಿ ಅವರು ರಾಜೀನಾಮೆ ಹಿಂದಕ್ಕೆ ಪಡೆದಿದ್ದಾರೆ ಎಂದು ಎಐಸಿಸಿ ರಾಜ್ಯ ಉಸ್ತುವಾರಿ ಜಿತೇಂದ್ರ ಸಿಂಗ್ ಸೋಮವಾರ ತಿಳಿಸಿದ್ದಾರೆ. </p><p>ಬೋರಾ ಅವರು ರಾಜೀನಾಮೆ ಪತ್ರವನ್ನು ಹೈಕಮಾಂಡ್ಗೆ ಸಲ್ಲಿಸಿದ ಕೆಲ ಹೊತ್ತಿನಲ್ಲೇ ಅವರ ನಿವಾಸಕ್ಕೆ ತೆರಳಿದ ಅಸ್ಸಾಂ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೌರವ್ ಗೊಗೊಯಿ ಮಾತುಕತೆ ನಡೆಸಿ, ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.</p><p>ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬೋರಾ ಅವರು, ‘ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸಲು ಸಮಯಾವಕಾಶ ಕೋಡಿ ಎಂದು ಹೈಕಮಾಂಡ್ ಬಳಿ ಕೇಳಿದ್ದೇನೆ’ ಎಂದು ಹೇಳಿದರು.</p><p>‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬೋರಾ ಜತೆ ಮಾತನಾಡಿದ್ದಾರೆ. ಅವರ ರಾಜೀನಾಮೆಯನ್ನು ಹೈಕಮಾಂಡ್ ಅಂಗೀಕರಿಸುವುದಿಲ್ಲ’ ಎಂದು ಗೊಗೊಯಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. </p><p>‘ಪಕ್ಷದಲ್ಲಿನ ಕೆಲ ವಿಷಯಗಳಿಂದ ಬೋರಾ ಅವರಿಗೆ ನೋವಾಗಿದ್ದರೆ, ಕ್ಷಮೆಯಾಚಿಸುತ್ತೇವೆ’ ಎಂದು ಗೊಗೊಯಿ ತಿಳಿಸಿದರು. </p>
<p><strong>ಗುವಾಹಟಿ:</strong> ಅಸ್ಸಾಂ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಅವರು ಪಕ್ಷಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.</p><p>ಹೈಕಮಾಂಡ್ ಮಧ್ಯ ಪ್ರವೇಶದಿಂದಾಗಿ ಅವರು ರಾಜೀನಾಮೆ ಹಿಂದಕ್ಕೆ ಪಡೆದಿದ್ದಾರೆ ಎಂದು ಎಐಸಿಸಿ ರಾಜ್ಯ ಉಸ್ತುವಾರಿ ಜಿತೇಂದ್ರ ಸಿಂಗ್ ಸೋಮವಾರ ತಿಳಿಸಿದ್ದಾರೆ. </p><p>ಬೋರಾ ಅವರು ರಾಜೀನಾಮೆ ಪತ್ರವನ್ನು ಹೈಕಮಾಂಡ್ಗೆ ಸಲ್ಲಿಸಿದ ಕೆಲ ಹೊತ್ತಿನಲ್ಲೇ ಅವರ ನಿವಾಸಕ್ಕೆ ತೆರಳಿದ ಅಸ್ಸಾಂ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೌರವ್ ಗೊಗೊಯಿ ಮಾತುಕತೆ ನಡೆಸಿ, ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.</p><p>ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬೋರಾ ಅವರು, ‘ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸಲು ಸಮಯಾವಕಾಶ ಕೋಡಿ ಎಂದು ಹೈಕಮಾಂಡ್ ಬಳಿ ಕೇಳಿದ್ದೇನೆ’ ಎಂದು ಹೇಳಿದರು.</p><p>‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬೋರಾ ಜತೆ ಮಾತನಾಡಿದ್ದಾರೆ. ಅವರ ರಾಜೀನಾಮೆಯನ್ನು ಹೈಕಮಾಂಡ್ ಅಂಗೀಕರಿಸುವುದಿಲ್ಲ’ ಎಂದು ಗೊಗೊಯಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. </p><p>‘ಪಕ್ಷದಲ್ಲಿನ ಕೆಲ ವಿಷಯಗಳಿಂದ ಬೋರಾ ಅವರಿಗೆ ನೋವಾಗಿದ್ದರೆ, ಕ್ಷಮೆಯಾಚಿಸುತ್ತೇವೆ’ ಎಂದು ಗೊಗೊಯಿ ತಿಳಿಸಿದರು. </p>