<p><strong>ಪಟ್ನಾ:</strong> 'ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು 'ಮಹಾಘಟಬಂಧನ' ಮೈತ್ರಿಯು ಸರ್ಕಾರ ರಚಿಸುವುದು ಖಚಿತ. ಅದಾದ ನಾಲ್ಕು ದಿನಗಳ ಬಳಿಕ ಪ್ರಮಾಣವಚನ ಸ್ವೀಕರಿಸಲಾಗುವುದು' ಎಂದು 'ಇಂಡಿಯಾ' ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಇಂದು (ಭಾನುವಾರ) ಹೇಳಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿದ ಆರ್ಜೆಡಿ ನಾಯಕ ತೇಜಸ್ವಿ, 'ನವೆಂಬರ್ 14ರಂದು ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲಿದೆ. ನವೆಂಬರ್ 18ರಂದು ಪ್ರತಿಜ್ಞಾವಿಧಿ ನಡೆಯಲಿದೆ' ಎಂದು ಹೇಳಿದ್ದಾರೆ. </p><p>ಜನಸುರಾಜ್ ಪಕ್ಷದ ಬೆಂಬಲಿಗ ದುಲಾರ್ ಚಂದ್ ಯಾದವ್ ಹತ್ಯೆ ಪ್ರಕರಣದಲ್ಲಿ ಮಾಜಿ ಶಾಸಕ ಅನಂತ್ ಸಿಂಗ್ ಬಂಧನಕ್ಕೆ ಪ್ರತಿಕ್ರಿಯಿಸಿದ ತೇಜಸ್ವಿ, 'ಅದು ನಡೆಯಲೇಬೇಕಿತ್ತು. ಇದೊಂದು ಗಂಭೀರವಾರ ಪ್ರಕರಣ' ಎಂದಿದ್ದಾರೆ. </p><p>'ಇಂದು ಪ್ರಧಾನಿ ನರೇಂದ್ರ ಮೋದಿ ಬಿಹಾರಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯದ ಪರಿಸ್ಥಿತಿಯನ್ನು ಅವರು ಗಮನಿಸಬೇಕು. ರಾಜ್ಯದಲ್ಲಿ ಅಪರಾಧ ನಡೆಯದ ಒಂದೇ ಒಂದು ದಿನವಿಲ್ಲ. ಮಹಾಘಟಬಂಧನ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲವೂ ಬದಲಾಗುತ್ತದೆ' ಎಂದು ಹೇಳಿದ್ದಾರೆ. </p><p>243 ಸದಸ್ಯ ಬಲದ ಬಿಹಾರದಲ್ಲಿ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. </p>.ಟ್ರಂಪ್ ಬಗ್ಗೆ ಮೋದಿಗೆ ಭಯ; ದೊಡ್ಡ ಉದ್ಯಮಿಗಳ 'ರಿಮೋಟ್ ಕಂಟ್ರೋಲ್': ರಾಹುಲ್.Bihar Polls: ಲಾಲು ಮಗ ಸಿಎಂ ಆಗಲು,ರಾಹುಲ್ ಪಿಎಂ ಆಗಲು 2 ಹುದ್ದೆ ಖಾಲಿ ಇಲ್ಲ: ಶಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> 'ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು 'ಮಹಾಘಟಬಂಧನ' ಮೈತ್ರಿಯು ಸರ್ಕಾರ ರಚಿಸುವುದು ಖಚಿತ. ಅದಾದ ನಾಲ್ಕು ದಿನಗಳ ಬಳಿಕ ಪ್ರಮಾಣವಚನ ಸ್ವೀಕರಿಸಲಾಗುವುದು' ಎಂದು 'ಇಂಡಿಯಾ' ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಇಂದು (ಭಾನುವಾರ) ಹೇಳಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿದ ಆರ್ಜೆಡಿ ನಾಯಕ ತೇಜಸ್ವಿ, 'ನವೆಂಬರ್ 14ರಂದು ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲಿದೆ. ನವೆಂಬರ್ 18ರಂದು ಪ್ರತಿಜ್ಞಾವಿಧಿ ನಡೆಯಲಿದೆ' ಎಂದು ಹೇಳಿದ್ದಾರೆ. </p><p>ಜನಸುರಾಜ್ ಪಕ್ಷದ ಬೆಂಬಲಿಗ ದುಲಾರ್ ಚಂದ್ ಯಾದವ್ ಹತ್ಯೆ ಪ್ರಕರಣದಲ್ಲಿ ಮಾಜಿ ಶಾಸಕ ಅನಂತ್ ಸಿಂಗ್ ಬಂಧನಕ್ಕೆ ಪ್ರತಿಕ್ರಿಯಿಸಿದ ತೇಜಸ್ವಿ, 'ಅದು ನಡೆಯಲೇಬೇಕಿತ್ತು. ಇದೊಂದು ಗಂಭೀರವಾರ ಪ್ರಕರಣ' ಎಂದಿದ್ದಾರೆ. </p><p>'ಇಂದು ಪ್ರಧಾನಿ ನರೇಂದ್ರ ಮೋದಿ ಬಿಹಾರಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯದ ಪರಿಸ್ಥಿತಿಯನ್ನು ಅವರು ಗಮನಿಸಬೇಕು. ರಾಜ್ಯದಲ್ಲಿ ಅಪರಾಧ ನಡೆಯದ ಒಂದೇ ಒಂದು ದಿನವಿಲ್ಲ. ಮಹಾಘಟಬಂಧನ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲವೂ ಬದಲಾಗುತ್ತದೆ' ಎಂದು ಹೇಳಿದ್ದಾರೆ. </p><p>243 ಸದಸ್ಯ ಬಲದ ಬಿಹಾರದಲ್ಲಿ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. </p>.ಟ್ರಂಪ್ ಬಗ್ಗೆ ಮೋದಿಗೆ ಭಯ; ದೊಡ್ಡ ಉದ್ಯಮಿಗಳ 'ರಿಮೋಟ್ ಕಂಟ್ರೋಲ್': ರಾಹುಲ್.Bihar Polls: ಲಾಲು ಮಗ ಸಿಎಂ ಆಗಲು,ರಾಹುಲ್ ಪಿಎಂ ಆಗಲು 2 ಹುದ್ದೆ ಖಾಲಿ ಇಲ್ಲ: ಶಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>