<p><strong>ಬಲ್ಲಿಯಾ:</strong> ತಮ್ಮ ಮಗನ ರಾಜಕೀಯ ಪ್ರವೇಶದ ಬಗೆಗಿನ ನಿರ್ಧಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕೈಯಲಿದ್ದು, ಅವರೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಬಿಹಾರದ ಗ್ರಾಮೀಣಾಭಿವೃದ್ಧಿ ಸಚಿವ ಶ್ರವಣ್ ಕುಮಾರ್ ಸೋಮವಾರ ಹೇಳಿದ್ದಾರೆ.</p>.ಬಿಹಾರದಲ್ಲಿ BJP ಬಹುಮತ ಸಾಧಿಸಿದರೂ ಸಿಎಂ ಆಗಿ ಮುಂದುವರಿಯಲಿದ್ದಾರೆ ನಿತೀಶ್!.<p>ನಿತೀಶ್ ಅವರ ಪುತ್ರ ರಾಜಕೀಯಕ್ಕೆ ಪ್ರವೇಶ ಮಾಡುತ್ತಾರೋ ಇಲ್ಲವೊ ಎನ್ನುವುದನ್ನು ಅವರೇ ತೀರ್ಮಾನಿಸಬೇಕು. ಅವರ ಒಪ್ಪಿಗೆ ಇಲ್ಲದೆ ಇದು ಸಾಧ್ಯವಿಲ್ಲ. ಈ ಬಗ್ಗೆ ನಿತೀಶ್ ಕುಮಾರ್ ಅವರಿಗೆ ಜ್ಞಾನವಿದ್ದು, ಬಿಹಾರದ ರಾಜಕೀಯ ವಾತಾವರಣವನ್ನು ಅವರು ಚೆನ್ನಾಗಿ ಬಲ್ಲರು ಎಂದು ಹೇಳಿದ್ದಾರೆ.</p><p>ಬಲ್ಲಿಯಾದಲ್ಲಿ ನಡೆದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಮಾಧ್ಯಮಗಳ ಪ್ರಶ್ನೆಗೆ ಹೀಗೆ ಉತ್ತರಿಸಿದ್ದಾರೆ.</p>.Bihar Politics | ರಾಜ್ಯಪಾಲ ಆರಿಫ್ ನಿವಾಸದ ಔತಣಕೂಟಕ್ಕೆ ಗೈರಾದ ನಿತೀಶ್ ಕುಮಾರ್.<p>ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಿತೀಶ್ ಕುಮಾರ್ ಗೈರಾಗಿದ್ದೇಕೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ‘ನಳಂದಾದಲ್ಲಿ ಪೂರ್ವನಿಗದಿತ ಕಾರ್ಯಕ್ರಮ ಇದ್ದುದ್ದರಿಂದ ದೆಹಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಲಿಲ್ಲ’ ಎಂದಿದ್ದಾರೆ.</p><p>ರೇಖಾ ಗುಪ್ತಾ ಅವರ ಪ್ರಮಾಣ ಸ್ವೀಕಾರ ಕಾರ್ಯಕ್ರಮದಲ್ಲಿ ಜೆಡಿಯುನ ಕಾರ್ಯಾಧ್ಯಕ್ಷ ಸಂಜಯ್ ಝಾ ಹಾಗೂ ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಭಾಗಿಯಾಗಿದ್ದರು.</p>.ಸಿಎಂ ನಿತೀಶ್ ಕುಮಾರ್ ಮಾನಸಿಕ ಅಸ್ವಸ್ಥರಾಗಿದ್ದಾರೆ: ತೇಜಸ್ವಿ ಯಾದವ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಲ್ಲಿಯಾ:</strong> ತಮ್ಮ ಮಗನ ರಾಜಕೀಯ ಪ್ರವೇಶದ ಬಗೆಗಿನ ನಿರ್ಧಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕೈಯಲಿದ್ದು, ಅವರೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಬಿಹಾರದ ಗ್ರಾಮೀಣಾಭಿವೃದ್ಧಿ ಸಚಿವ ಶ್ರವಣ್ ಕುಮಾರ್ ಸೋಮವಾರ ಹೇಳಿದ್ದಾರೆ.</p>.ಬಿಹಾರದಲ್ಲಿ BJP ಬಹುಮತ ಸಾಧಿಸಿದರೂ ಸಿಎಂ ಆಗಿ ಮುಂದುವರಿಯಲಿದ್ದಾರೆ ನಿತೀಶ್!.<p>ನಿತೀಶ್ ಅವರ ಪುತ್ರ ರಾಜಕೀಯಕ್ಕೆ ಪ್ರವೇಶ ಮಾಡುತ್ತಾರೋ ಇಲ್ಲವೊ ಎನ್ನುವುದನ್ನು ಅವರೇ ತೀರ್ಮಾನಿಸಬೇಕು. ಅವರ ಒಪ್ಪಿಗೆ ಇಲ್ಲದೆ ಇದು ಸಾಧ್ಯವಿಲ್ಲ. ಈ ಬಗ್ಗೆ ನಿತೀಶ್ ಕುಮಾರ್ ಅವರಿಗೆ ಜ್ಞಾನವಿದ್ದು, ಬಿಹಾರದ ರಾಜಕೀಯ ವಾತಾವರಣವನ್ನು ಅವರು ಚೆನ್ನಾಗಿ ಬಲ್ಲರು ಎಂದು ಹೇಳಿದ್ದಾರೆ.</p><p>ಬಲ್ಲಿಯಾದಲ್ಲಿ ನಡೆದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಮಾಧ್ಯಮಗಳ ಪ್ರಶ್ನೆಗೆ ಹೀಗೆ ಉತ್ತರಿಸಿದ್ದಾರೆ.</p>.Bihar Politics | ರಾಜ್ಯಪಾಲ ಆರಿಫ್ ನಿವಾಸದ ಔತಣಕೂಟಕ್ಕೆ ಗೈರಾದ ನಿತೀಶ್ ಕುಮಾರ್.<p>ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಿತೀಶ್ ಕುಮಾರ್ ಗೈರಾಗಿದ್ದೇಕೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ‘ನಳಂದಾದಲ್ಲಿ ಪೂರ್ವನಿಗದಿತ ಕಾರ್ಯಕ್ರಮ ಇದ್ದುದ್ದರಿಂದ ದೆಹಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಲಿಲ್ಲ’ ಎಂದಿದ್ದಾರೆ.</p><p>ರೇಖಾ ಗುಪ್ತಾ ಅವರ ಪ್ರಮಾಣ ಸ್ವೀಕಾರ ಕಾರ್ಯಕ್ರಮದಲ್ಲಿ ಜೆಡಿಯುನ ಕಾರ್ಯಾಧ್ಯಕ್ಷ ಸಂಜಯ್ ಝಾ ಹಾಗೂ ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಭಾಗಿಯಾಗಿದ್ದರು.</p>.ಸಿಎಂ ನಿತೀಶ್ ಕುಮಾರ್ ಮಾನಸಿಕ ಅಸ್ವಸ್ಥರಾಗಿದ್ದಾರೆ: ತೇಜಸ್ವಿ ಯಾದವ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>