<p><strong>ಮುಜಾಫರ್ಪುರ:</strong> ಗಣರಾಜ್ಯೋತ್ಸವದ ವೇಳೆ ಕುಡಿದ ಮತ್ತಿನಲ್ಲೇ ರಾಷ್ಟ್ರಧ್ವಜಾರೋಹಣ ಮಾಡಲು ಪ್ರಯತ್ನಿಸಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.</p><p>ಶಿಕ್ಷಕನ ವರ್ತನೆಯಿಂದ ಆಕ್ರೋಶಗೊಂಡ ಸ್ಥಳೀಯರು ಮೀನಾಪುರ ಶಾಸಕ ಮುನ್ನಾ ಯಾದವ್ ಅವರಿಗೆ ವಿಚಾರ ತಿಳಿಸಿದ್ದರು. ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು.</p><p>'ಪೂರ್ವ ಧರಮ್ಪುರದಲ್ಲಿರುವ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಸಂಜಯ್ ಕುಮಾರ್ ಸಿಂಗ್ ಅವರು ಕುಡಿದ ಮತ್ತಿನಲ್ಲಿ ಧ್ವಜಾರೋಹಣ ನೆರವೇರಿಸಲು ಪ್ರಯತ್ನಿಸಿದ ಆರೋಪದಲ್ಲಿ ದೂರು ದಾಖಲಾಗಿದೆ. ತಪಾಸಣೆ ನಡೆಸಿದಾಗ ಸಂಜಯ್ ಮದ್ಯ ಸೇವಿಸಿರುವುದು ಖಚಿತವಾಗಿದೆ' ಎಂದು ರಾಂಪುರ್ಹರಿ ಠಾಣೆಯ ಅಧಿಕಾರಿ ಸುಜಿತ್ ಕುಮಾರ್ ತಿಳಿಸಿದ್ದಾರೆ.</p><p>ಸಂಜಯ್ ಬಂಧನಕ್ಕೂ ಮುನ್ನ, ತಮಗೆ ಕಳೆದ ಐದು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಹೇಳಿದ್ದಾರೆ.</p><p>ಬಿಹಾರ ಸರ್ಕಾರ 2016ರ ಏಪ್ರಿಲ್ 5ರಂದು ಮದ್ಯಪಾನ ನಿಷೇಧ ಜಾರಿಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಜಾಫರ್ಪುರ:</strong> ಗಣರಾಜ್ಯೋತ್ಸವದ ವೇಳೆ ಕುಡಿದ ಮತ್ತಿನಲ್ಲೇ ರಾಷ್ಟ್ರಧ್ವಜಾರೋಹಣ ಮಾಡಲು ಪ್ರಯತ್ನಿಸಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.</p><p>ಶಿಕ್ಷಕನ ವರ್ತನೆಯಿಂದ ಆಕ್ರೋಶಗೊಂಡ ಸ್ಥಳೀಯರು ಮೀನಾಪುರ ಶಾಸಕ ಮುನ್ನಾ ಯಾದವ್ ಅವರಿಗೆ ವಿಚಾರ ತಿಳಿಸಿದ್ದರು. ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು.</p><p>'ಪೂರ್ವ ಧರಮ್ಪುರದಲ್ಲಿರುವ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಸಂಜಯ್ ಕುಮಾರ್ ಸಿಂಗ್ ಅವರು ಕುಡಿದ ಮತ್ತಿನಲ್ಲಿ ಧ್ವಜಾರೋಹಣ ನೆರವೇರಿಸಲು ಪ್ರಯತ್ನಿಸಿದ ಆರೋಪದಲ್ಲಿ ದೂರು ದಾಖಲಾಗಿದೆ. ತಪಾಸಣೆ ನಡೆಸಿದಾಗ ಸಂಜಯ್ ಮದ್ಯ ಸೇವಿಸಿರುವುದು ಖಚಿತವಾಗಿದೆ' ಎಂದು ರಾಂಪುರ್ಹರಿ ಠಾಣೆಯ ಅಧಿಕಾರಿ ಸುಜಿತ್ ಕುಮಾರ್ ತಿಳಿಸಿದ್ದಾರೆ.</p><p>ಸಂಜಯ್ ಬಂಧನಕ್ಕೂ ಮುನ್ನ, ತಮಗೆ ಕಳೆದ ಐದು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಹೇಳಿದ್ದಾರೆ.</p><p>ಬಿಹಾರ ಸರ್ಕಾರ 2016ರ ಏಪ್ರಿಲ್ 5ರಂದು ಮದ್ಯಪಾನ ನಿಷೇಧ ಜಾರಿಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>