<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ದೆಹಲಿಯ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಕಮಲ ಪಕ್ಷದ ಸಂಕಲ್ಪ ಪತ್ರವು 'ದೇಶಕ್ಕೆ ಅಪಾಯಕಾರಿ' ಎಂದು ಹೇಳಿದ್ದಾರೆ. </p><p>'ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣವನ್ನು ಸ್ಥಗಿತಗೊಳಿಸಲಿದೆ. ಮೊಹಲ್ಲಾ ಕ್ಲಿನಿಕ್ ಸೇರಿದಂತೆ ಉಚಿತ ಆರೋಗ್ಯ ಯೋಜನೆಗಳನ್ನು ಕಿತ್ತು ಹಾಕಲು ಯೋಜಿಸುತ್ತಿದೆ' ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. </p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, 'ಬಿಜೆಪಿ ತನ್ನ ನಿಜವಾದ ಉದ್ದೇಶಗಳನ್ನು ಪ್ರಣಾಳಿಕೆಯಲ್ಲಿ ಬಹಿರಂಗಪಡಿಸಿದೆ' ಎಂದು ಕಮಲ ಪಕ್ಷವನ್ನು ಬೆಂಬಲಿಸುವ ಮತದಾರರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. </p><p>'ಬಿಜೆಪಿ ಗೆದ್ದರೆ ದೆಹಲಿಯಲ್ಲಿ ಬಡವರಿಗೆ ಬದುಕಲು ಕಷ್ಟವಾಗಲಿದೆ. ಬಿಜೆಪಿ ಪ್ರಣಾಳಿಕೆಯು ಜನಸಾಮಾನ್ಯರ ಕಲ್ಯಾಣದ ಕಾರ್ಯಕ್ರಮಗಳ ಮೇಲಿನ ನೇರ ದಾಳಿಯಾಗಿದೆ' ಎಂದು ಅವರು ಆರೋಪಿಸಿದ್ದಾರೆ. </p><p>ಕೇಜ್ರಿವಾಲ್ ಆರೋಪದ ಕುರಿತು ಬಿಜೆಪಿ ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ. </p><p>70 ಸದಸ್ಯ ಬಲದ ದೆಹಲಿಯಲ್ಲಿ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆ.8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. </p>.ಮಾಜಿ ಸಿಎಂ ಕೊಲೆ ಯತ್ನ; ಇಂತಹ ಪ್ರಚಾರವನ್ನು ದೆಹಲಿ ಜನ ಕಂಡಿರಲಿಲ್ಲ: ಕೇಜ್ರಿವಾಲ್.ದೆಹಲಿ | ಬಾಡಿಗೆದಾರರಿಗೂ ಉಚಿತ ವಿದ್ಯುತ್, ನೀರಿನ ಯೋಜನೆ: ಕೇಜ್ರಿವಾಲ್ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ದೆಹಲಿಯ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಕಮಲ ಪಕ್ಷದ ಸಂಕಲ್ಪ ಪತ್ರವು 'ದೇಶಕ್ಕೆ ಅಪಾಯಕಾರಿ' ಎಂದು ಹೇಳಿದ್ದಾರೆ. </p><p>'ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣವನ್ನು ಸ್ಥಗಿತಗೊಳಿಸಲಿದೆ. ಮೊಹಲ್ಲಾ ಕ್ಲಿನಿಕ್ ಸೇರಿದಂತೆ ಉಚಿತ ಆರೋಗ್ಯ ಯೋಜನೆಗಳನ್ನು ಕಿತ್ತು ಹಾಕಲು ಯೋಜಿಸುತ್ತಿದೆ' ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. </p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, 'ಬಿಜೆಪಿ ತನ್ನ ನಿಜವಾದ ಉದ್ದೇಶಗಳನ್ನು ಪ್ರಣಾಳಿಕೆಯಲ್ಲಿ ಬಹಿರಂಗಪಡಿಸಿದೆ' ಎಂದು ಕಮಲ ಪಕ್ಷವನ್ನು ಬೆಂಬಲಿಸುವ ಮತದಾರರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. </p><p>'ಬಿಜೆಪಿ ಗೆದ್ದರೆ ದೆಹಲಿಯಲ್ಲಿ ಬಡವರಿಗೆ ಬದುಕಲು ಕಷ್ಟವಾಗಲಿದೆ. ಬಿಜೆಪಿ ಪ್ರಣಾಳಿಕೆಯು ಜನಸಾಮಾನ್ಯರ ಕಲ್ಯಾಣದ ಕಾರ್ಯಕ್ರಮಗಳ ಮೇಲಿನ ನೇರ ದಾಳಿಯಾಗಿದೆ' ಎಂದು ಅವರು ಆರೋಪಿಸಿದ್ದಾರೆ. </p><p>ಕೇಜ್ರಿವಾಲ್ ಆರೋಪದ ಕುರಿತು ಬಿಜೆಪಿ ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ. </p><p>70 ಸದಸ್ಯ ಬಲದ ದೆಹಲಿಯಲ್ಲಿ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆ.8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. </p>.ಮಾಜಿ ಸಿಎಂ ಕೊಲೆ ಯತ್ನ; ಇಂತಹ ಪ್ರಚಾರವನ್ನು ದೆಹಲಿ ಜನ ಕಂಡಿರಲಿಲ್ಲ: ಕೇಜ್ರಿವಾಲ್.ದೆಹಲಿ | ಬಾಡಿಗೆದಾರರಿಗೂ ಉಚಿತ ವಿದ್ಯುತ್, ನೀರಿನ ಯೋಜನೆ: ಕೇಜ್ರಿವಾಲ್ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>