<p><strong>ನವದೆಹಲಿ</strong>: ಸಂಭಲ್ ಹಿಂಸಾಚಾರ ಸಂತ್ರಸ್ತರನ್ನು ಭೇಟಿಯಾಗಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಅವಕಾಶ ನಿರಾಕರಿಸಿರುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ.</p><p>‘ಬಿಜೆಪಿ ಮತ್ತು ಆರ್ಎಸ್ಎಸ್ ತನ್ನ ವಿಭಜಕ ಕಾರ್ಯಸೂಚಿ ಮೂಲಕ ಸಂವಿಧಾನವನ್ನು ಹರಿದು ಚೂರು ಮಾಡುವಲ್ಲಿ ನಿರತವಾಗಿವೆ. ಸಂಭಾಲ್ನಲ್ಲಿ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ತಡೆ ನೀಡಿರುವುದು ಇದಕ್ಕೊಂದು ನಿದರ್ಶವಾಗಿದೆ’ ಎಂದು ಹೇಳಿದರು.</p><p>‘ಎರಡು ಸಮುದಾಯಗಳ ನಡುವೆ ದ್ವೇಷ ಹಡುವುದೇ ಬಿಜೆಪಿ ಮತ್ತು ಆರ್ಎಸ್ಎಸ್ನ ಮುಖ್ಯ ಕಾರ್ಯಸೂಚಿಯಾಗಿದೆ. ಅವರು ಸಂವಿಧಾನ ಅಂಗೀಕರಿಸಿರುವ ಪ್ರಾರ್ಥನಾ ಕಾಯ್ದೆಯನ್ನು ಹರಿದು ಹಾಕಿದ್ದಲ್ಲದೇ, ತಮ್ಮ ದ್ವೇಷದ ಮಾರುಕಟ್ಟೆಯ ಶಾಖೆಗಳನ್ನು ದೇಶದ ಎಲ್ಲೆಡೆ ತೆರೆಯಲು ಬಯಸುತ್ತಿದ್ದಾರೆ’ ಎಂದು ಹೇಳಿದರು.</p>.<p>ಆದರೆ, ಕಾಂಗ್ರೆಸ್ ಪ್ರೀತಿಯ ಅಂಗಡಿಯನ್ನು ತೆರೆಯುವುದನ್ನು ಮುಂದುವರಿಸಲಿದ್ದು, ವಿವಿಧತೆಯಲ್ಲಿ ಏಕತೆ ತತ್ವದ ಮೂಲಕ ಸಮಾಜವನ್ನು ಒಗ್ಗೂಡಿಸುತ್ತದೆ ಎಂದರು.</p><p>ಬುಧವಾರ ಸಂಭಲ್ಗೆ ತೆರಳುತ್ತಿದ್ದ ವೇಳೆ ಗಾಜಿಪುರ ಗಡಿಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ತಡೆದಿದ್ದರು. ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪ್ರವೇಶ ನಿರಾಕರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.Sambhal: ಗಾಜಿಪುರ ಗಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ತಡೆ ಹಿಡಿದ ಪೊಲೀಸರು.VIDEO | ಗಾಜಿಪುರ ಗಡಿಯಲ್ಲಿ ತಡೆ: ವಿಪಕ್ಷ ನಾಯಕನ ಹಕ್ಕು ಮೊಟಕು ಎಂದ ರಾಹುಲ್.ಸಂಭಲ್ ಹಿಂಸಾಚಾರ ಪೂರ್ವಯೋಜಿತ ಕೃತ್ಯ: ಲೋಕಸಭೆಯಲ್ಲಿ ಅಖಿಲೇಶ್ ಯಾದವ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂಭಲ್ ಹಿಂಸಾಚಾರ ಸಂತ್ರಸ್ತರನ್ನು ಭೇಟಿಯಾಗಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಅವಕಾಶ ನಿರಾಕರಿಸಿರುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ.</p><p>‘ಬಿಜೆಪಿ ಮತ್ತು ಆರ್ಎಸ್ಎಸ್ ತನ್ನ ವಿಭಜಕ ಕಾರ್ಯಸೂಚಿ ಮೂಲಕ ಸಂವಿಧಾನವನ್ನು ಹರಿದು ಚೂರು ಮಾಡುವಲ್ಲಿ ನಿರತವಾಗಿವೆ. ಸಂಭಾಲ್ನಲ್ಲಿ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ತಡೆ ನೀಡಿರುವುದು ಇದಕ್ಕೊಂದು ನಿದರ್ಶವಾಗಿದೆ’ ಎಂದು ಹೇಳಿದರು.</p><p>‘ಎರಡು ಸಮುದಾಯಗಳ ನಡುವೆ ದ್ವೇಷ ಹಡುವುದೇ ಬಿಜೆಪಿ ಮತ್ತು ಆರ್ಎಸ್ಎಸ್ನ ಮುಖ್ಯ ಕಾರ್ಯಸೂಚಿಯಾಗಿದೆ. ಅವರು ಸಂವಿಧಾನ ಅಂಗೀಕರಿಸಿರುವ ಪ್ರಾರ್ಥನಾ ಕಾಯ್ದೆಯನ್ನು ಹರಿದು ಹಾಕಿದ್ದಲ್ಲದೇ, ತಮ್ಮ ದ್ವೇಷದ ಮಾರುಕಟ್ಟೆಯ ಶಾಖೆಗಳನ್ನು ದೇಶದ ಎಲ್ಲೆಡೆ ತೆರೆಯಲು ಬಯಸುತ್ತಿದ್ದಾರೆ’ ಎಂದು ಹೇಳಿದರು.</p>.<p>ಆದರೆ, ಕಾಂಗ್ರೆಸ್ ಪ್ರೀತಿಯ ಅಂಗಡಿಯನ್ನು ತೆರೆಯುವುದನ್ನು ಮುಂದುವರಿಸಲಿದ್ದು, ವಿವಿಧತೆಯಲ್ಲಿ ಏಕತೆ ತತ್ವದ ಮೂಲಕ ಸಮಾಜವನ್ನು ಒಗ್ಗೂಡಿಸುತ್ತದೆ ಎಂದರು.</p><p>ಬುಧವಾರ ಸಂಭಲ್ಗೆ ತೆರಳುತ್ತಿದ್ದ ವೇಳೆ ಗಾಜಿಪುರ ಗಡಿಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ತಡೆದಿದ್ದರು. ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪ್ರವೇಶ ನಿರಾಕರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.Sambhal: ಗಾಜಿಪುರ ಗಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ತಡೆ ಹಿಡಿದ ಪೊಲೀಸರು.VIDEO | ಗಾಜಿಪುರ ಗಡಿಯಲ್ಲಿ ತಡೆ: ವಿಪಕ್ಷ ನಾಯಕನ ಹಕ್ಕು ಮೊಟಕು ಎಂದ ರಾಹುಲ್.ಸಂಭಲ್ ಹಿಂಸಾಚಾರ ಪೂರ್ವಯೋಜಿತ ಕೃತ್ಯ: ಲೋಕಸಭೆಯಲ್ಲಿ ಅಖಿಲೇಶ್ ಯಾದವ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>