ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು, ಬಿಆರ್ಎಸ್ ಮುಖಂಡ ಕೆ. ಚಂದ್ರಶೇಖರ ರಾವ್ ಕುರಿತು ಈ ಹಿಂದೆ ನೀಡಿದ್ದ ‘ಬಿಹಾರಿ ವಂಶವಾಹಿ’ ಹೇಳಿಕೆಯನ್ನು ಬಿಜೆಪಿ ಗುರುವಾರ ವಿರೋಧಿಸಿದೆ. ಕಾಂಗ್ರೆಸ್ ಮತ್ತು ‘ಇಂಡಿಯಾ’ ಮೈತ್ರಿಕೂಟದ ಸದಸ್ಯಪಕ್ಷಗಳು ಈ ಹೇಳಿಕೆಯನ್ನು ಖಂಡಿಸಬೇಕು ಮತ್ತು ಕ್ಷಮೆ ಕೇಳಲು ರೇವಂತ್ ಅವರಿಗೆ ಸೂಚಿಸಬೇಕು ಎಂದು ಆಗ್ರಹಿಸಿದೆ.