<p><strong>ಮುಂಬೈ:</strong> ದೆಹಲಿ ಮತ್ತು ಬಾಂಬೆ ಹೈಕೋರ್ಟ್ಗಳಿಗೆ ಶುಕ್ರವಾರ ಬಾಂಬ್ ಬೆದರಿಕೆ ಇ–ಮೇಲ್ ಸಂದೇಶ ಬಂದಿದ್ದು ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಇದರಿಂದಾಗಿ ನ್ಯಾಯಾಲಯಗಳಲ್ಲಿ ವಿಚಾರಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಪೊಲೀಸರು ತಿಳಿಸಿದರು.</p><p>ದೆಹಲಿ ಹೈಕೋರ್ಟ್ ರಿಜಿಸ್ಟಾರ್ ಅವರಿಗೆ ಬೆಳಿಗ್ಗೆ 8.39ಕ್ಕೆ ಬಂದ ಇ–ಮೇಲ್ನಲ್ಲಿ, ಕೋರ್ಟ್ ಕಾಂಪ್ಲೆಕ್ಸ್ನಲ್ಲಿ ಮೂರು ಬಾಂಬ್ಗಳನ್ನು ಇರಿಸಿರುವುದಾಗಿ ಬೆದರಿಸಲಾಗಿತ್ತು. ಬಾಂಬೆ ಹೈಕೋರ್ಟ್ನ ಅಧಿಕೃತ ಇ-ಮೇಲ್ ಐಡಿಗೆ ಬಂದ ಸಂದೇಶದಲ್ಲಿ, ಬಾಂಬ್ ಇಟ್ಟು ಕಟ್ಟಡವನ್ನು ಸ್ಫೋಟಿಸುವುದಾಗಿ ಹೇಳಲಾಗಿತ್ತು ಎಂದು ಅಧಿಕಾರಿಯೊಬ್ಬರು ಹೇಳಿದರು.</p><p>ಮಾಹಿತಿ ಲಭ್ಯವಾದ ಕೂಡಲೇ ಪೊಲೀಸರು ಮತ್ತು ಇತರ ಸಂಸ್ಥೆಗಳು ಶೋಧ ಕಾರ್ಯಾಚರಣೆ ಆರಂಭಿಸಿದವು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳದಲ್ಲಿ ಪರಿಶೀಲನೆ ನಡೆಸಿದರು.</p><p>ಸ್ಥಳಕ್ಕೆ ಧಾವಿಸಿದ ಪೊಲೀಸರು, ಪ್ರಾಥಮಿಕ ಮುನ್ನೆಚ್ಚರಿಕೆ ಕ್ರಮವಾಗಿ ನ್ಯಾಯಾಲಯಗಳ ನ್ಯಾಯಮೂರ್ತಿಗಳು, ವಕೀಲರು, ಸಿಬ್ಬಂದಿ ಮತ್ತು ವೀಕ್ಷಕರನ್ನು ಕೋರ್ಟ್ಗಳ ಆವರಣದ ಆಚೆಗೆ ಕಳುಹಿಸಿದರು. </p><p><strong>ಹುಸಿ ಕರೆ:</strong> ಪರಿಶೀಲನೆ ಬಳಿಕ ಎರಡೂ ನ್ಯಾಯಾಲಯಗಳಲ್ಲಿ ಯಾವುದೇ ಸ್ಫೋಟಕ ಅಥವಾ ಶಂಕಾಸ್ಪದ ವಸ್ತುಗಳು ಪತ್ತೆಯಾಗಲಿಲ್ಲ. ನಂತರ ‘ಹುಸಿ ಬಾಂಬ್ ಬೆದರಿಕೆ’ ಎಂದು ಪೊಲೀಸರು ಘೋಷಿಸಿದರು.</p><p>ನವದೆಹಲಿ ಡಿಸಿಪಿ ದೇವೇಶ್ ಕುಮಾರ್ ಮಹ್ಲಾ ಅವರು, ‘ಈ ಬೆದರಿಕೆ ಸಂದೇಶಕ್ಕೂ ಕೆಲವು ವಾರಗಳ ಹಿಂದೆ ಶಾಲೆಗಳಿಗೆ ಕಳುಹಿಸಲಾಗಿದ್ದ ಬೆದರಿಕೆ ಸಂದೇಶಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದರು.</p>.ದೆಹಲಿ ಹೈಕೋರ್ಟ್ಗೆ ಬಾಂಬ್ ಬೆದರಿಕೆ; ಪೀಠದಿಂದ ಎದ್ದ ನ್ಯಾಯಮೂರ್ತಿಗಳು.ಮುಂಬೈನ ಎಲ್ಲ ಬೀದಿಗಳನ್ನು ತೆರವುಗೊಳಿಸಿ: ಮನೋಜ್ ಜರಾಂಗೆಗೆ ಬಾಂಬೆ ಹೈಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ದೆಹಲಿ ಮತ್ತು ಬಾಂಬೆ ಹೈಕೋರ್ಟ್ಗಳಿಗೆ ಶುಕ್ರವಾರ ಬಾಂಬ್ ಬೆದರಿಕೆ ಇ–ಮೇಲ್ ಸಂದೇಶ ಬಂದಿದ್ದು ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಇದರಿಂದಾಗಿ ನ್ಯಾಯಾಲಯಗಳಲ್ಲಿ ವಿಚಾರಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಪೊಲೀಸರು ತಿಳಿಸಿದರು.</p><p>ದೆಹಲಿ ಹೈಕೋರ್ಟ್ ರಿಜಿಸ್ಟಾರ್ ಅವರಿಗೆ ಬೆಳಿಗ್ಗೆ 8.39ಕ್ಕೆ ಬಂದ ಇ–ಮೇಲ್ನಲ್ಲಿ, ಕೋರ್ಟ್ ಕಾಂಪ್ಲೆಕ್ಸ್ನಲ್ಲಿ ಮೂರು ಬಾಂಬ್ಗಳನ್ನು ಇರಿಸಿರುವುದಾಗಿ ಬೆದರಿಸಲಾಗಿತ್ತು. ಬಾಂಬೆ ಹೈಕೋರ್ಟ್ನ ಅಧಿಕೃತ ಇ-ಮೇಲ್ ಐಡಿಗೆ ಬಂದ ಸಂದೇಶದಲ್ಲಿ, ಬಾಂಬ್ ಇಟ್ಟು ಕಟ್ಟಡವನ್ನು ಸ್ಫೋಟಿಸುವುದಾಗಿ ಹೇಳಲಾಗಿತ್ತು ಎಂದು ಅಧಿಕಾರಿಯೊಬ್ಬರು ಹೇಳಿದರು.</p><p>ಮಾಹಿತಿ ಲಭ್ಯವಾದ ಕೂಡಲೇ ಪೊಲೀಸರು ಮತ್ತು ಇತರ ಸಂಸ್ಥೆಗಳು ಶೋಧ ಕಾರ್ಯಾಚರಣೆ ಆರಂಭಿಸಿದವು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳದಲ್ಲಿ ಪರಿಶೀಲನೆ ನಡೆಸಿದರು.</p><p>ಸ್ಥಳಕ್ಕೆ ಧಾವಿಸಿದ ಪೊಲೀಸರು, ಪ್ರಾಥಮಿಕ ಮುನ್ನೆಚ್ಚರಿಕೆ ಕ್ರಮವಾಗಿ ನ್ಯಾಯಾಲಯಗಳ ನ್ಯಾಯಮೂರ್ತಿಗಳು, ವಕೀಲರು, ಸಿಬ್ಬಂದಿ ಮತ್ತು ವೀಕ್ಷಕರನ್ನು ಕೋರ್ಟ್ಗಳ ಆವರಣದ ಆಚೆಗೆ ಕಳುಹಿಸಿದರು. </p><p><strong>ಹುಸಿ ಕರೆ:</strong> ಪರಿಶೀಲನೆ ಬಳಿಕ ಎರಡೂ ನ್ಯಾಯಾಲಯಗಳಲ್ಲಿ ಯಾವುದೇ ಸ್ಫೋಟಕ ಅಥವಾ ಶಂಕಾಸ್ಪದ ವಸ್ತುಗಳು ಪತ್ತೆಯಾಗಲಿಲ್ಲ. ನಂತರ ‘ಹುಸಿ ಬಾಂಬ್ ಬೆದರಿಕೆ’ ಎಂದು ಪೊಲೀಸರು ಘೋಷಿಸಿದರು.</p><p>ನವದೆಹಲಿ ಡಿಸಿಪಿ ದೇವೇಶ್ ಕುಮಾರ್ ಮಹ್ಲಾ ಅವರು, ‘ಈ ಬೆದರಿಕೆ ಸಂದೇಶಕ್ಕೂ ಕೆಲವು ವಾರಗಳ ಹಿಂದೆ ಶಾಲೆಗಳಿಗೆ ಕಳುಹಿಸಲಾಗಿದ್ದ ಬೆದರಿಕೆ ಸಂದೇಶಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದರು.</p>.ದೆಹಲಿ ಹೈಕೋರ್ಟ್ಗೆ ಬಾಂಬ್ ಬೆದರಿಕೆ; ಪೀಠದಿಂದ ಎದ್ದ ನ್ಯಾಯಮೂರ್ತಿಗಳು.ಮುಂಬೈನ ಎಲ್ಲ ಬೀದಿಗಳನ್ನು ತೆರವುಗೊಳಿಸಿ: ಮನೋಜ್ ಜರಾಂಗೆಗೆ ಬಾಂಬೆ ಹೈಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>