<p><strong>ಮುಂಬೈ</strong>: ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಮತ್ತು ಶಿವಸೇನಾ (ಯುಬಿಟಿ) ವಕ್ತಾರೆ ಸುಷ್ಮಾ ಅಂಧಾರೆ ಅವರಿಂದ ಹಕ್ಕುಚ್ಯುತಿ ಆಗಿದೆ ಎಂದು ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಪ್ರವೀಣ್ ದರೇಕರ್ ಅವರು ನಿಲುವಳಿ ಸೂಚನೆ ಮಂಡಿಸಿದ್ದಾರೆ.</p>.<p>‘ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಬಗ್ಗೆ ವೈಯಕ್ತಿಕ ಹಾಗೂ ಅವಹೇಳನಕಾರಿ ಅಂಶಗಳಿರುವ ಹಾಡನ್ನು ಕುನಾಲ್ ಹಾಡಿದ್ದಾರೆ’ ಎಂದು ನಿಲುವಳಿ ಸೂಚನೆ ಮಂಡಿಸುವ ಸಂದರ್ಭದಲ್ಲಿ ಪ್ರವೀಣ್ ಅವರು ಹೇಳಿದ್ದಾರೆ.</p>.<p>‘ಸುಷ್ಮಾ ಅವರು ಕಾರ್ಯಕ್ರಮವನ್ನು ಬೆಂಬಲಿಸಿ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ, ಇದು ಸದನದ ನಿಂದನೆಗೆ ಸಮ’ ಎಂದು ಅವರು ಹೇಳಿದ್ದಾರೆ. ಕುನಾಲ್ ಮತ್ತು ಸುಷ್ಮಾ ಅವರು ತಮ್ಮ ಮಾತುಗಳ ಮೂಲಕ ಶಾಸನ ಸಭೆಗಳನ್ನು ಅಗೌರವದಿಂದ ಕಂಡಿದ್ದಾರೆ ಎಂದು ಪ್ರವೀಣ್ ಆರೋಪಿಸಿದ್ದಾರೆ.</p>.<p>ಸುಷ್ಮಾ ಅವರು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಅಣಕಿಸಿದ್ದಾರೆ ಎಂದು ದೂರಿ ಶಿವಸೇನಾ ಶಾಸಕ ರಮೇಶ್ ಬೋರ್ನಾರೆ ಅವರು ವಿಧಾನಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಮತ್ತು ಶಿವಸೇನಾ (ಯುಬಿಟಿ) ವಕ್ತಾರೆ ಸುಷ್ಮಾ ಅಂಧಾರೆ ಅವರಿಂದ ಹಕ್ಕುಚ್ಯುತಿ ಆಗಿದೆ ಎಂದು ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಪ್ರವೀಣ್ ದರೇಕರ್ ಅವರು ನಿಲುವಳಿ ಸೂಚನೆ ಮಂಡಿಸಿದ್ದಾರೆ.</p>.<p>‘ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಬಗ್ಗೆ ವೈಯಕ್ತಿಕ ಹಾಗೂ ಅವಹೇಳನಕಾರಿ ಅಂಶಗಳಿರುವ ಹಾಡನ್ನು ಕುನಾಲ್ ಹಾಡಿದ್ದಾರೆ’ ಎಂದು ನಿಲುವಳಿ ಸೂಚನೆ ಮಂಡಿಸುವ ಸಂದರ್ಭದಲ್ಲಿ ಪ್ರವೀಣ್ ಅವರು ಹೇಳಿದ್ದಾರೆ.</p>.<p>‘ಸುಷ್ಮಾ ಅವರು ಕಾರ್ಯಕ್ರಮವನ್ನು ಬೆಂಬಲಿಸಿ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ, ಇದು ಸದನದ ನಿಂದನೆಗೆ ಸಮ’ ಎಂದು ಅವರು ಹೇಳಿದ್ದಾರೆ. ಕುನಾಲ್ ಮತ್ತು ಸುಷ್ಮಾ ಅವರು ತಮ್ಮ ಮಾತುಗಳ ಮೂಲಕ ಶಾಸನ ಸಭೆಗಳನ್ನು ಅಗೌರವದಿಂದ ಕಂಡಿದ್ದಾರೆ ಎಂದು ಪ್ರವೀಣ್ ಆರೋಪಿಸಿದ್ದಾರೆ.</p>.<p>ಸುಷ್ಮಾ ಅವರು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಅಣಕಿಸಿದ್ದಾರೆ ಎಂದು ದೂರಿ ಶಿವಸೇನಾ ಶಾಸಕ ರಮೇಶ್ ಬೋರ್ನಾರೆ ಅವರು ವಿಧಾನಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>