<p><strong>ನವದೆಹಲಿ:</strong> ಪಂಜಾಬ್ ಬಳಿ ಆಕಸ್ಮಿಕವಾಗಿ ಗಡಿ ದಾಟಿದ ಗಡಿ ಭದ್ರತಾ ಪಡೆ (BSF) ಯೋಧನನ್ನು ಪಾಕಿಸ್ತಾನಿ ಸೇನೆ ಸೆರೆ ಹಿಡಿದಿದೆ. ಯೋಧನ ಬಿಡುಗಡೆಗೆ ಉಭಯ ರಾಷ್ಟ್ರಗಳ ಸೇನಾಧಿಕಾರಿಗಳ ನಡುವೆ ಮಾತುಕತೆ ನಡೆದಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p><p>182ನೇ ಬೆಟಾಲಿಯನ್ನ ಕಾನ್ಸ್ಟೆಬಲ್ ಪಿ.ಕೆ. ಸಿಂಗ್ ಬಂಧಿತ ಯೋಧ. ಫಿರೋಜ್ಪುರ್ ಗಡಿ ಬಳಿ ಬುಧವಾರ ಇವರನ್ನು ಪಾಕಿಸ್ತಾನ ಸೇನೆ ವಶಕ್ಕೆ ಪಡೆದಿತ್ತು.</p><p>ಸಿಂಗ್ ಸೇನಾ ಸಮವಸ್ತ್ರ ಧರಿಸಿದ್ದರು ಹಾಗೂ ಸೇವಾ ಬಂದೂಕು ಹೊಂದಿದ್ದರು. ರೈತರೊಂದಿಗೆ ಇದ್ದ ಇವರು, ವಿಶ್ರಾಂತಿಗಾಗಿ ನೆರಳು ಅರಸಿ ಹೊರಟಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಸಿಂಗ್ ಅವರನ್ನು ಪಾಕಿಸ್ತಾನಿ ಸೇನೆ ವಶಕ್ಕೆ ಪಡೆದಿದೆ ಎಂದು ಮೂಲಗಳು ಹೇಳಿವೆ.</p><p>ಇಂಥ ಘಟನೆಗಳು ಎರಡೂ ಕಡೆಯಿಂದ ಆಗಾಗ್ಗ ನಡೆಯುತ್ತಲೇ ಇರುತ್ತವೆ. ಹೀಗಾಗಿ ಇದು ವಿಶೇಷ ಪ್ರಕರಣವಲ್ಲ. ಆದರೆ ಪಹಲ್ಗಾಮ್ ಘಟನೆ ನಂತರದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಬಿಗುವಿನ ವಾತಾವರಣ ಸೃಷ್ಟಿಯಾಗಿರುವುದರಿಂದ ಈ ಘಟನೆ ಮಹತ್ವ ಪಡೆದುಕೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಂಜಾಬ್ ಬಳಿ ಆಕಸ್ಮಿಕವಾಗಿ ಗಡಿ ದಾಟಿದ ಗಡಿ ಭದ್ರತಾ ಪಡೆ (BSF) ಯೋಧನನ್ನು ಪಾಕಿಸ್ತಾನಿ ಸೇನೆ ಸೆರೆ ಹಿಡಿದಿದೆ. ಯೋಧನ ಬಿಡುಗಡೆಗೆ ಉಭಯ ರಾಷ್ಟ್ರಗಳ ಸೇನಾಧಿಕಾರಿಗಳ ನಡುವೆ ಮಾತುಕತೆ ನಡೆದಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p><p>182ನೇ ಬೆಟಾಲಿಯನ್ನ ಕಾನ್ಸ್ಟೆಬಲ್ ಪಿ.ಕೆ. ಸಿಂಗ್ ಬಂಧಿತ ಯೋಧ. ಫಿರೋಜ್ಪುರ್ ಗಡಿ ಬಳಿ ಬುಧವಾರ ಇವರನ್ನು ಪಾಕಿಸ್ತಾನ ಸೇನೆ ವಶಕ್ಕೆ ಪಡೆದಿತ್ತು.</p><p>ಸಿಂಗ್ ಸೇನಾ ಸಮವಸ್ತ್ರ ಧರಿಸಿದ್ದರು ಹಾಗೂ ಸೇವಾ ಬಂದೂಕು ಹೊಂದಿದ್ದರು. ರೈತರೊಂದಿಗೆ ಇದ್ದ ಇವರು, ವಿಶ್ರಾಂತಿಗಾಗಿ ನೆರಳು ಅರಸಿ ಹೊರಟಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಸಿಂಗ್ ಅವರನ್ನು ಪಾಕಿಸ್ತಾನಿ ಸೇನೆ ವಶಕ್ಕೆ ಪಡೆದಿದೆ ಎಂದು ಮೂಲಗಳು ಹೇಳಿವೆ.</p><p>ಇಂಥ ಘಟನೆಗಳು ಎರಡೂ ಕಡೆಯಿಂದ ಆಗಾಗ್ಗ ನಡೆಯುತ್ತಲೇ ಇರುತ್ತವೆ. ಹೀಗಾಗಿ ಇದು ವಿಶೇಷ ಪ್ರಕರಣವಲ್ಲ. ಆದರೆ ಪಹಲ್ಗಾಮ್ ಘಟನೆ ನಂತರದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಬಿಗುವಿನ ವಾತಾವರಣ ಸೃಷ್ಟಿಯಾಗಿರುವುದರಿಂದ ಈ ಘಟನೆ ಮಹತ್ವ ಪಡೆದುಕೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>