<p><strong>ಬರಾಸತ್(ಪಶ್ಚಿಮ ಬಂಗಾಳ)</strong>: ಸಂದೇಶ್ಖಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಹಜಹಾನ್ ಶೇಖ್ ಸಹೋದರ ಹಾಗೂ ಆತನ ಸಹಚರನ ಸಿಬಿಐ ಕಸ್ಟಡಿ ಅವಧಿಯನ್ನು ಮತ್ತೆ ಐದು ದಿನಗಳ ಕಾಲ ವಿಸ್ತರಿಸಿ ಇಲ್ಲಿನ ಉತ್ತರ 24 ಪರಗಣ ಜಿಲ್ಲಾ ನ್ಯಾಯಾಲಯವು ಆದೇಶಿಸಿದೆ.</p><p>ಶಹಜಹಾನ್ ಶೇಖ್ನ ಸಹೋದರ ಶೇಖ್ ಅಲಂಗೀರ್ ಮತ್ತು ಆತನ ಸಹಚರ ಮಫಿಜುರ್ ಮೊಲ್ಲಾ ಅವರನ್ನು ಮತ್ತೆ ಸಿಬಿಐ ಕಸ್ಟಡಿಗೆ ನೀಡಲಾಗಿದೆ.</p><p>ಇದೇ ಮಾರ್ಚ್22ರಂದು ಒಂಬತ್ತು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಲಾಗಿತ್ತು. ಇಂದು (ಭಾನುವಾರ) ಕಸ್ಟಡಿ ಅವಧಿ ಅಂತ್ಯಗೊಂಡ ನಂತರ ಶೇಖ್ ಅಲಂಗೀರ್ ಮತ್ತು ಮಫಿಜುರ್ ಮೊಲ್ಲಾ ಅವರನ್ನು ನ್ಯಾಯಾಲಯ ಮುಂದೆ ಹಾಜರುಪಡಿಸಲಾಯಿತು.</p><p>ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಮೇಲೆ ನಡೆದ ದಾಳಿ ಪ್ರಕರಣದ ಸಂಬಂಧ ತೃಣಮೂಲ ಕಾಂಗ್ರೆಸ್ನಿಂದ (ಟಿಎಂಸಿ) ಅಮಾನತುಗೊಂಡಿರುವ ಮುಖಂಡ ಶಹಜಹಾನ್ ಶೇಖ್ ಹಾಗೂ ಅವರ ಒಂಬತ್ತು ಮಂದಿ ಆಪ್ತರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿತ್ತು.</p><p>ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಸ್ಥಳೀಯರ ಭೂಮಿ ಕಬಳಿಸಿರುವ ಆರೋಪ ಶಜಹಾನ್ ಶೇಖ್ ಮೇಲಿದೆ.</p><p>ಭಾರಿ ಸಂಖ್ಯೆಯ ಮಹಿಳೆಯರು ಟಿಎಂಸಿ ನಾಯಕ ಶಹಜಹಾನ್ ಶೇಖ್ ಹಾಗೂ ಆತನ ಬೆಂಬಲಿಗರು, ಬಲವಂತವಾಗಿ ತಮ್ಮ ಭೂಕಬಳಿಕೆ ಮಾಡಿದ್ದಾರೆ ಮತ್ತು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿದ್ದರು. ಅದಾದ ಬಳಿಕ, 'ಉತ್ತರ 24 ಪರಗಣ' ಜಿಲ್ಲೆಯ ಸಂದೇಶ್ಖಾಲಿಯಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರಾಸತ್(ಪಶ್ಚಿಮ ಬಂಗಾಳ)</strong>: ಸಂದೇಶ್ಖಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಹಜಹಾನ್ ಶೇಖ್ ಸಹೋದರ ಹಾಗೂ ಆತನ ಸಹಚರನ ಸಿಬಿಐ ಕಸ್ಟಡಿ ಅವಧಿಯನ್ನು ಮತ್ತೆ ಐದು ದಿನಗಳ ಕಾಲ ವಿಸ್ತರಿಸಿ ಇಲ್ಲಿನ ಉತ್ತರ 24 ಪರಗಣ ಜಿಲ್ಲಾ ನ್ಯಾಯಾಲಯವು ಆದೇಶಿಸಿದೆ.</p><p>ಶಹಜಹಾನ್ ಶೇಖ್ನ ಸಹೋದರ ಶೇಖ್ ಅಲಂಗೀರ್ ಮತ್ತು ಆತನ ಸಹಚರ ಮಫಿಜುರ್ ಮೊಲ್ಲಾ ಅವರನ್ನು ಮತ್ತೆ ಸಿಬಿಐ ಕಸ್ಟಡಿಗೆ ನೀಡಲಾಗಿದೆ.</p><p>ಇದೇ ಮಾರ್ಚ್22ರಂದು ಒಂಬತ್ತು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಲಾಗಿತ್ತು. ಇಂದು (ಭಾನುವಾರ) ಕಸ್ಟಡಿ ಅವಧಿ ಅಂತ್ಯಗೊಂಡ ನಂತರ ಶೇಖ್ ಅಲಂಗೀರ್ ಮತ್ತು ಮಫಿಜುರ್ ಮೊಲ್ಲಾ ಅವರನ್ನು ನ್ಯಾಯಾಲಯ ಮುಂದೆ ಹಾಜರುಪಡಿಸಲಾಯಿತು.</p><p>ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಮೇಲೆ ನಡೆದ ದಾಳಿ ಪ್ರಕರಣದ ಸಂಬಂಧ ತೃಣಮೂಲ ಕಾಂಗ್ರೆಸ್ನಿಂದ (ಟಿಎಂಸಿ) ಅಮಾನತುಗೊಂಡಿರುವ ಮುಖಂಡ ಶಹಜಹಾನ್ ಶೇಖ್ ಹಾಗೂ ಅವರ ಒಂಬತ್ತು ಮಂದಿ ಆಪ್ತರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿತ್ತು.</p><p>ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಸ್ಥಳೀಯರ ಭೂಮಿ ಕಬಳಿಸಿರುವ ಆರೋಪ ಶಜಹಾನ್ ಶೇಖ್ ಮೇಲಿದೆ.</p><p>ಭಾರಿ ಸಂಖ್ಯೆಯ ಮಹಿಳೆಯರು ಟಿಎಂಸಿ ನಾಯಕ ಶಹಜಹಾನ್ ಶೇಖ್ ಹಾಗೂ ಆತನ ಬೆಂಬಲಿಗರು, ಬಲವಂತವಾಗಿ ತಮ್ಮ ಭೂಕಬಳಿಕೆ ಮಾಡಿದ್ದಾರೆ ಮತ್ತು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿದ್ದರು. ಅದಾದ ಬಳಿಕ, 'ಉತ್ತರ 24 ಪರಗಣ' ಜಿಲ್ಲೆಯ ಸಂದೇಶ್ಖಾಲಿಯಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>