<p><strong>ತ್ರಿಶೂರ್(ಕೇರಳ):</strong> ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಗಳ ಆಡಳಿತದಲ್ಲಿ ಕೇಂದ್ರದ ಮಧ್ಯಪ್ರವೇಶವು ರಾಜ್ಯಗಳ ರಾಜಕೀಯ ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತಿದ್ದು, ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಬುಡಮೇಲು ಮಾಡುತ್ತಿದೆ ಎಂದು ಹೇಳಿದ್ದಾರೆ.</p><p>ಮೋದಿ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಕಿರುಕುಳ ಕೊಡುವುದು ಮಾತ್ರವಲ್ಲದೆ, ದೇಶದ ಬಡಜನರು ಮತ್ತು ಮಹಿಳೆಯರನ್ನು ತುಳಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.</p><p>ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯು(ಕೆಪಿಸಿಸಿ) ಏರ್ಪಡಿಸಿದ್ದ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಅವರು ಮಾತನಾಡಿದ್ದಾರೆ.</p><p>‘ರಾಜ್ಯಗಳ ಆಡಳಿತದಲ್ಲಿ ರಾಜ್ಯಪಾಲರು ಸೇರಿದಂತೆ ಕೇಂದ್ರದ ಹಸ್ತಕ್ಷೇಪ ಹಾಗೂ ರಾಜ್ಯಗಳ ರಾಜಕೀಯ ಸ್ವಾಯತ್ತತೆಯನ್ನು ಕುಗ್ಗಿಸುವ ಪ್ರಯತ್ನಗಳು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಬುಡಮೇಲಾಗಿಸುತ್ತಿವೆ’ ಎಂದು ಖರ್ಗೆ ಹೇಳಿದ್ದಾರೆ.</p><p>ಸಾಂವಿಧಾನಿಕ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ಒಟ್ಟಾಗಿ ನಿಲ್ಲಬೇಕಿದೆ. ಯುಡಿಎಫ್ ಮೈತ್ರಿಕೂಟದ ಜೊತೆ ಕಾಂಗ್ರೆಸ್ ಪಕ್ಷವು ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.</p> <p>ಅಧಿಕ ಹಣದುಬ್ಬರ, ನಿರುದ್ಯೋಗವು ದೇಶದ ಬಡವರು, ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗದ ಜನಸಂಖ್ಯೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿವೆ. ಬಿಜೆಪಿ ಆಡಳಿತಾವಧಿಯಲ್ಲಿ ಸಂಪೂರ್ಣ ಸಾರ್ವಜನಿಕ ವಲಯವನ್ನು ಕಿತ್ತೊಗೆದು, ಖಾಸಗಿ ವಲಯಕ್ಕೆ ಪೂರ್ಣ ಬೆಂಬಲ ನೀಡುವ ಉದ್ದೇಶ ಹೊಂದಲಾಗಿದೆ. </p><p>ಪ್ರಧಾನಿ ನರೇಂದ್ರ ಮೋದಿ ಆಡಳಿತಾವಧಿಯಲ್ಲಿನ ನಿರುದ್ಯೋಗ ಮತ್ತು ಹಣದುಬ್ಬರದ ಸಂಯೋಜನೆಯು ಬಡವರ ಸಂಕಷ್ಟವನ್ನು ಮತ್ತಷ್ಟು ತೀವ್ರಗೊಳಿಸಿದೆ ಎಂದು ಖರ್ಗೆ ಕಿಡಿಕಾರಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಶೂರ್(ಕೇರಳ):</strong> ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಗಳ ಆಡಳಿತದಲ್ಲಿ ಕೇಂದ್ರದ ಮಧ್ಯಪ್ರವೇಶವು ರಾಜ್ಯಗಳ ರಾಜಕೀಯ ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತಿದ್ದು, ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಬುಡಮೇಲು ಮಾಡುತ್ತಿದೆ ಎಂದು ಹೇಳಿದ್ದಾರೆ.</p><p>ಮೋದಿ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಕಿರುಕುಳ ಕೊಡುವುದು ಮಾತ್ರವಲ್ಲದೆ, ದೇಶದ ಬಡಜನರು ಮತ್ತು ಮಹಿಳೆಯರನ್ನು ತುಳಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.</p><p>ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯು(ಕೆಪಿಸಿಸಿ) ಏರ್ಪಡಿಸಿದ್ದ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಅವರು ಮಾತನಾಡಿದ್ದಾರೆ.</p><p>‘ರಾಜ್ಯಗಳ ಆಡಳಿತದಲ್ಲಿ ರಾಜ್ಯಪಾಲರು ಸೇರಿದಂತೆ ಕೇಂದ್ರದ ಹಸ್ತಕ್ಷೇಪ ಹಾಗೂ ರಾಜ್ಯಗಳ ರಾಜಕೀಯ ಸ್ವಾಯತ್ತತೆಯನ್ನು ಕುಗ್ಗಿಸುವ ಪ್ರಯತ್ನಗಳು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಬುಡಮೇಲಾಗಿಸುತ್ತಿವೆ’ ಎಂದು ಖರ್ಗೆ ಹೇಳಿದ್ದಾರೆ.</p><p>ಸಾಂವಿಧಾನಿಕ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ಒಟ್ಟಾಗಿ ನಿಲ್ಲಬೇಕಿದೆ. ಯುಡಿಎಫ್ ಮೈತ್ರಿಕೂಟದ ಜೊತೆ ಕಾಂಗ್ರೆಸ್ ಪಕ್ಷವು ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.</p> <p>ಅಧಿಕ ಹಣದುಬ್ಬರ, ನಿರುದ್ಯೋಗವು ದೇಶದ ಬಡವರು, ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗದ ಜನಸಂಖ್ಯೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿವೆ. ಬಿಜೆಪಿ ಆಡಳಿತಾವಧಿಯಲ್ಲಿ ಸಂಪೂರ್ಣ ಸಾರ್ವಜನಿಕ ವಲಯವನ್ನು ಕಿತ್ತೊಗೆದು, ಖಾಸಗಿ ವಲಯಕ್ಕೆ ಪೂರ್ಣ ಬೆಂಬಲ ನೀಡುವ ಉದ್ದೇಶ ಹೊಂದಲಾಗಿದೆ. </p><p>ಪ್ರಧಾನಿ ನರೇಂದ್ರ ಮೋದಿ ಆಡಳಿತಾವಧಿಯಲ್ಲಿನ ನಿರುದ್ಯೋಗ ಮತ್ತು ಹಣದುಬ್ಬರದ ಸಂಯೋಜನೆಯು ಬಡವರ ಸಂಕಷ್ಟವನ್ನು ಮತ್ತಷ್ಟು ತೀವ್ರಗೊಳಿಸಿದೆ ಎಂದು ಖರ್ಗೆ ಕಿಡಿಕಾರಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>