<p><strong>ಕುಪ್ಪಂ (ಆಂಧ್ರ ಪ್ರದೇಶ):</strong> ‘ವೈಎಸ್ಆರ್ಸಿಪಿ ಆಡಳಿತಾವಧಿಯಲ್ಲಿ ತಿರುಪತಿ ತಿರುಮಲ ದೇವಸ್ಥಾನಕ್ಕೆ (ಟಿಟಿಡಿ) ಸರಬರಾಜು ಮಾಡಲಾದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶವಿದೆ ಎಂದು ಎನ್ಡಿಡಿಬಿ–ಸಿಎಎಲ್ಎಫ್ ಪ್ರಯೋಗಾಲಯದಿಂದ ವರದಿ ಬಂದ ನಂತರವೇ ಮಾತನಾಡಿದ್ದೇನೆ’ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಭಾನುವಾರ ಹೇಳಿದ್ದಾರೆ.</p>.<p>ಇಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಾಯ್ಡು, ದೇವಾಲಯವನ್ನು ಅನಗತ್ಯವಾಗಿ ವಿವಾದಗಳಿಗೆ ಎಳೆಯಲಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಉತ್ತರಿಸಿದರು.</p>.<p>‘ಶುದ್ಧೀಕರಣದ ಭಾಗವಾಗಿ ಆಗಿನ ಕಾರ್ಯನಿರ್ವಾಹಕ ಅಧಿಕಾರಿ ಶ್ಯಾಮಲಾ ರಾವ್ ಅವರು ಎನ್ಡಿಡಿಬಿಯಿಂದ ತುಪ್ಪದ ಮಾದರಿಗಳು ಬೇಕೆಂದು ಕೇಳಿದರು. ಅದು ವರದಿಯನ್ನು ನೀಡಿತು. ಆ ವರದಿಯನ್ನು ಆಧರಿಸಿ, ನಾನು ಅದರಲ್ಲಿ ಪ್ರಾಣಿಗಳ ಕೊಬ್ಬಿನ ಕಲಬೆರಕೆ ಇದೆ ಎಂದು ಹೇಳಿದೆ’ ಎಂದು ತಿಳಿಸಿದರು.</p>.<p>‘ರಾಜ್ಯದ ಆಡಳಿತಾಧಿಕಾರಿಯಾಗಿ ತುಪ್ಪದ ಕಲಬೆರಕೆಯನ್ನು ಪರಿಶೀಲಿಸಲು ವಿಶೇಷ ತನಿಖಾ ತಂಡವನ್ನು ನೇಮಿಸಿದ್ದೇನೆ. ಆದರೆ, ವೈಎಸ್ಆರ್ಸಿಪಿ ನನ್ನ ವ್ಯಕ್ತಿತ್ವಹರಣ ಮಾಡುತ್ತಿದ್ದು, ನಾನು ಕ್ಷಮೆ ಯಾಚಿಸುವಂತೆ ಕೇಳುತ್ತಿದೆ’ ಎಂದು ಆರೋಪಿಸಿದರು.</p>.<p>ತುಪ್ಪ ಕಲಬೆರಕೆ ಪ್ರಕರಣದ ಅಂತಿಮ ಆರೋಪ ಪಟ್ಟಿಯನ್ನು ಇತ್ತೀಚೆಗೆ ಎಸ್ಐಟಿ ಎಸಿಬಿ ನ್ಯಾಯಾಲಯದಲ್ಲಿ ಸಲ್ಲಿಸಿದೆ. ಪ್ರಕರಣದಲ್ಲಿ ಒಂಬತ್ತು ಟಿಟಿಡಿ ಅಧಿಕಾರಿಗಳು, ಐವರು ಡೇರಿ ತಜ್ಞರು ಸೇರಿದಂತೆ ಒಟ್ಟು 36 ಜನರನ್ನು ಆರೋಪಿಗಳೆಂದು ಅದು ಹೆಸರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಪ್ಪಂ (ಆಂಧ್ರ ಪ್ರದೇಶ):</strong> ‘ವೈಎಸ್ಆರ್ಸಿಪಿ ಆಡಳಿತಾವಧಿಯಲ್ಲಿ ತಿರುಪತಿ ತಿರುಮಲ ದೇವಸ್ಥಾನಕ್ಕೆ (ಟಿಟಿಡಿ) ಸರಬರಾಜು ಮಾಡಲಾದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶವಿದೆ ಎಂದು ಎನ್ಡಿಡಿಬಿ–ಸಿಎಎಲ್ಎಫ್ ಪ್ರಯೋಗಾಲಯದಿಂದ ವರದಿ ಬಂದ ನಂತರವೇ ಮಾತನಾಡಿದ್ದೇನೆ’ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಭಾನುವಾರ ಹೇಳಿದ್ದಾರೆ.</p>.<p>ಇಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಾಯ್ಡು, ದೇವಾಲಯವನ್ನು ಅನಗತ್ಯವಾಗಿ ವಿವಾದಗಳಿಗೆ ಎಳೆಯಲಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಉತ್ತರಿಸಿದರು.</p>.<p>‘ಶುದ್ಧೀಕರಣದ ಭಾಗವಾಗಿ ಆಗಿನ ಕಾರ್ಯನಿರ್ವಾಹಕ ಅಧಿಕಾರಿ ಶ್ಯಾಮಲಾ ರಾವ್ ಅವರು ಎನ್ಡಿಡಿಬಿಯಿಂದ ತುಪ್ಪದ ಮಾದರಿಗಳು ಬೇಕೆಂದು ಕೇಳಿದರು. ಅದು ವರದಿಯನ್ನು ನೀಡಿತು. ಆ ವರದಿಯನ್ನು ಆಧರಿಸಿ, ನಾನು ಅದರಲ್ಲಿ ಪ್ರಾಣಿಗಳ ಕೊಬ್ಬಿನ ಕಲಬೆರಕೆ ಇದೆ ಎಂದು ಹೇಳಿದೆ’ ಎಂದು ತಿಳಿಸಿದರು.</p>.<p>‘ರಾಜ್ಯದ ಆಡಳಿತಾಧಿಕಾರಿಯಾಗಿ ತುಪ್ಪದ ಕಲಬೆರಕೆಯನ್ನು ಪರಿಶೀಲಿಸಲು ವಿಶೇಷ ತನಿಖಾ ತಂಡವನ್ನು ನೇಮಿಸಿದ್ದೇನೆ. ಆದರೆ, ವೈಎಸ್ಆರ್ಸಿಪಿ ನನ್ನ ವ್ಯಕ್ತಿತ್ವಹರಣ ಮಾಡುತ್ತಿದ್ದು, ನಾನು ಕ್ಷಮೆ ಯಾಚಿಸುವಂತೆ ಕೇಳುತ್ತಿದೆ’ ಎಂದು ಆರೋಪಿಸಿದರು.</p>.<p>ತುಪ್ಪ ಕಲಬೆರಕೆ ಪ್ರಕರಣದ ಅಂತಿಮ ಆರೋಪ ಪಟ್ಟಿಯನ್ನು ಇತ್ತೀಚೆಗೆ ಎಸ್ಐಟಿ ಎಸಿಬಿ ನ್ಯಾಯಾಲಯದಲ್ಲಿ ಸಲ್ಲಿಸಿದೆ. ಪ್ರಕರಣದಲ್ಲಿ ಒಂಬತ್ತು ಟಿಟಿಡಿ ಅಧಿಕಾರಿಗಳು, ಐವರು ಡೇರಿ ತಜ್ಞರು ಸೇರಿದಂತೆ ಒಟ್ಟು 36 ಜನರನ್ನು ಆರೋಪಿಗಳೆಂದು ಅದು ಹೆಸರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>