<p><strong>ರಾಯಪುರ</strong>: ಛತ್ತೀಸಗಢದ ಸಶಸ್ತ್ರ ಪಡೆಯ (ಸಿಎಎಫ್) ಯೋಧಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ,</p><p>ಮೃತರನ್ನು ಸಿಎಎಫ್ನ 14ನೇ ಬೆಟಾಲಿಯನ್ಗೆ ಸೇರಿದ ಅನಿಲ್ ಸಿಂಗ್ ಗಹರ್ವಾರ್ ಎಂದು ಗುರುತಿಸಲಾಗಿದೆ.</p>.ಮಹಾರಾಷ್ಟ್ರ ಸಂಪುಟದಿಂದ ಧನಂಜಯ ಮುಂಡೆ ಕೈಬಿಡಲು ಹೆಚ್ಚಿದ ಒತ್ತಡ. <p>ಇಲ್ಲಿನ ರಾಖಿ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸ್ ಹೆಡ್ಕ್ವಾರ್ಟರ್ನಲ್ಲಿ ಅನಿಲ್ ತಮ್ಮ ಸರ್ವೀಸ್ ರೈಫಲ್ನಿಂದಲೇ ಗುಂಡು ಹಾರಿಸಿಕೊಂಡು ಭಾನುವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಗುಂಡಿನ ಸದ್ದು ಕೇಳಿ ಆತನ ಸಹೋದ್ಯೋಗಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಅಷ್ಟರ ಹೊತ್ತಿಗೆ ಅನಿಲ್ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ</p><p>ಈ ಘಟನೆ ಕುರಿತು ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ. ಆತನ ಸಾವಿಗೆ ನಿಖರವಾದ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ</strong>: ಛತ್ತೀಸಗಢದ ಸಶಸ್ತ್ರ ಪಡೆಯ (ಸಿಎಎಫ್) ಯೋಧಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ,</p><p>ಮೃತರನ್ನು ಸಿಎಎಫ್ನ 14ನೇ ಬೆಟಾಲಿಯನ್ಗೆ ಸೇರಿದ ಅನಿಲ್ ಸಿಂಗ್ ಗಹರ್ವಾರ್ ಎಂದು ಗುರುತಿಸಲಾಗಿದೆ.</p>.ಮಹಾರಾಷ್ಟ್ರ ಸಂಪುಟದಿಂದ ಧನಂಜಯ ಮುಂಡೆ ಕೈಬಿಡಲು ಹೆಚ್ಚಿದ ಒತ್ತಡ. <p>ಇಲ್ಲಿನ ರಾಖಿ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸ್ ಹೆಡ್ಕ್ವಾರ್ಟರ್ನಲ್ಲಿ ಅನಿಲ್ ತಮ್ಮ ಸರ್ವೀಸ್ ರೈಫಲ್ನಿಂದಲೇ ಗುಂಡು ಹಾರಿಸಿಕೊಂಡು ಭಾನುವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಗುಂಡಿನ ಸದ್ದು ಕೇಳಿ ಆತನ ಸಹೋದ್ಯೋಗಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಅಷ್ಟರ ಹೊತ್ತಿಗೆ ಅನಿಲ್ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ</p><p>ಈ ಘಟನೆ ಕುರಿತು ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ. ಆತನ ಸಾವಿಗೆ ನಿಖರವಾದ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>