<p><strong>ನವದೆಹಲಿ:</strong> ದೇಶದ ಸಂವಿಧಾನವನ್ನು ಕಾಂಗ್ರೆಸ್ ಒಂದು ಕುಟುಂಬದ 'ಖಾಸಗಿ ಆಸ್ತಿ'ಯಾಗಿ ಪರಿಗಣಿಸಿದೆ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. </p><p>'ಭಾರತದ ಸಂವಿಧಾನದ 75 ವರ್ಷಗಳ ವೈಭವಯುತ ಪ್ರಯಾಣ' ಕುರಿತು ಎರಡು ದಿನಗಳ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ, ಕಳೆದ 75 ವರ್ಷಗಳಲ್ಲಿ ಸಂವಿಧಾನದ ಹೆಸರಿನಲ್ಲಿ ಕಾಂಗ್ರೆಸ್ ಮೋಸ ಮಾಡಿದೆ. ನೆಹರೂ-ಗಾಂಧಿ ಕುಟುಂಬಕ್ಕೆ ಪಕ್ಷ ಮತ್ತು ಸಂವಿಧಾನ ಖಾಸಗಿ ಆಸ್ತಿ ಇದ್ದಂತೆ ಎಂದು ಸಂಸತ್ತಿನ ಅನುಮೋದನೆಯಿಲ್ಲದೆ 35ಎ ವಿಧಿಯನ್ನು ಸೇರಿಸಿರುವುದನ್ನು ಉಲ್ಲೇಖಿಸಿ ಆರೋಪಿಸಿದ್ದಾರೆ. </p><p>ಧರ್ಮದ ಆಧಾರದಲ್ಲಿ ಮೀಸಲಾತಿ ಹಂಚಿಕೆ ಮಾಡಲಾಗುವುದಿಲ್ಲ ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಕಾಂಗ್ರೆಸ್ ಒಬಿಸಿಗಳ ಪರವಾಗಿಲ್ಲ. ಮೀಸಲಾತಿ ಹೆಚ್ಚಿಸುವ ಮೂಲಕ ಅದನ್ನು ಮುಸ್ಲಿಮರಿಗೆ ಹಂಚಲು ಬಯಸುತ್ತಿದೆ ಎಂದು ಅವರು ಟೀಕಿಸಿದ್ದಾರೆ. </p><p>ಬಿಜೆಪಿಯ ಒಬ್ಬ ಸಂಸದ ಇದ್ದರೂ ಕೂಡಾ ಧರ್ಮದ ಆಧಾರದ ಮೀಸಲಾತಿಗೆ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಎಂದಿಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕೆಲಸ ಮಾಡಿಲ್ಲ ಎಂದು ಅವರು ದೂರಿದ್ದಾರೆ. </p>.ಏಕಕಾಲಕ್ಕೆ ಚುನಾವಣೆ: ಚರ್ಚೆಗೆ ಮಣೆ.ಎಲ್ಲ ರಾಜ್ಯಗಳಲ್ಲಿ ಯುಸಿಸಿ ಜಾರಿಗೆ ಕ್ರಮ: ಅಮಿತ್ ಶಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದ ಸಂವಿಧಾನವನ್ನು ಕಾಂಗ್ರೆಸ್ ಒಂದು ಕುಟುಂಬದ 'ಖಾಸಗಿ ಆಸ್ತಿ'ಯಾಗಿ ಪರಿಗಣಿಸಿದೆ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. </p><p>'ಭಾರತದ ಸಂವಿಧಾನದ 75 ವರ್ಷಗಳ ವೈಭವಯುತ ಪ್ರಯಾಣ' ಕುರಿತು ಎರಡು ದಿನಗಳ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ, ಕಳೆದ 75 ವರ್ಷಗಳಲ್ಲಿ ಸಂವಿಧಾನದ ಹೆಸರಿನಲ್ಲಿ ಕಾಂಗ್ರೆಸ್ ಮೋಸ ಮಾಡಿದೆ. ನೆಹರೂ-ಗಾಂಧಿ ಕುಟುಂಬಕ್ಕೆ ಪಕ್ಷ ಮತ್ತು ಸಂವಿಧಾನ ಖಾಸಗಿ ಆಸ್ತಿ ಇದ್ದಂತೆ ಎಂದು ಸಂಸತ್ತಿನ ಅನುಮೋದನೆಯಿಲ್ಲದೆ 35ಎ ವಿಧಿಯನ್ನು ಸೇರಿಸಿರುವುದನ್ನು ಉಲ್ಲೇಖಿಸಿ ಆರೋಪಿಸಿದ್ದಾರೆ. </p><p>ಧರ್ಮದ ಆಧಾರದಲ್ಲಿ ಮೀಸಲಾತಿ ಹಂಚಿಕೆ ಮಾಡಲಾಗುವುದಿಲ್ಲ ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಕಾಂಗ್ರೆಸ್ ಒಬಿಸಿಗಳ ಪರವಾಗಿಲ್ಲ. ಮೀಸಲಾತಿ ಹೆಚ್ಚಿಸುವ ಮೂಲಕ ಅದನ್ನು ಮುಸ್ಲಿಮರಿಗೆ ಹಂಚಲು ಬಯಸುತ್ತಿದೆ ಎಂದು ಅವರು ಟೀಕಿಸಿದ್ದಾರೆ. </p><p>ಬಿಜೆಪಿಯ ಒಬ್ಬ ಸಂಸದ ಇದ್ದರೂ ಕೂಡಾ ಧರ್ಮದ ಆಧಾರದ ಮೀಸಲಾತಿಗೆ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಎಂದಿಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕೆಲಸ ಮಾಡಿಲ್ಲ ಎಂದು ಅವರು ದೂರಿದ್ದಾರೆ. </p>.ಏಕಕಾಲಕ್ಕೆ ಚುನಾವಣೆ: ಚರ್ಚೆಗೆ ಮಣೆ.ಎಲ್ಲ ರಾಜ್ಯಗಳಲ್ಲಿ ಯುಸಿಸಿ ಜಾರಿಗೆ ಕ್ರಮ: ಅಮಿತ್ ಶಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>