ದೂರುದಾರ ರಾಜೇಶ್ ಕುಂಟೆ ಅವರಿಗೆ ಈ ಪ್ರಕರಣದಲ್ಲಿ ಯಾವುದೇ ಹೊಸ ದಾಖಲೆಗಳನ್ನು ಸಲ್ಲಿಸಲು ಹೈಕೋರ್ಟ್ನ ಮತ್ತೊಂದು ಪೀಠವು 2021ರಲ್ಲಿ ಅವಕಾಶ ನೀಡಿರಲಿಲ್ಲ. ಆದಾಗ್ಯೂ, ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭೀವಂಡಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಈ ವರ್ಷದ ಜೂನ್ನಲ್ಲಿ ಹೊಸ ದಾಖಲೆಗಳನ್ನು ಸಲ್ಲಿಸಲು ರಾಜೇಶ್ ಕುಂಟೆ ಅವರಿಗೆ ಅನುಮತಿಸಿದೆ. ಈ ಹಂತದಲ್ಲಿ ಅನುಮತಿಸಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವು ಸಂಪೂರ್ಣ ಕಾನೂನುಬಾಹಿರ ಮತ್ತು ಪೂರ್ವಾಗ್ರಹ ಪೀಡಿತವಾದುದು ಎಂದು ರಾಹುಲ್ ಗಾಂಧಿ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.