<p><strong>ನವದೆಹಲಿ</strong>: ಕಾಂಗ್ರೆಸ್ ಮಾಜಿ ಸಂಸದ ಸಂದೀಪ್ ದೀಕ್ಷಿತ್ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅತಿಶಿ ಮತ್ತು ಎಎಪಿ ಸಂಸದ ಸಂಜಯ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ನೋಟೀಸ್ ನೀಡಿದೆ.</p><p>ಜನವರಿ 27ರ ಒಳಗೆ ನೋಟಿಸ್ಗೆ ಉತ್ತರ ನೀಡುವಂತೆ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಪಾರಸ್ ದಲಾಲ್, ಈ ಇಬ್ಬರು ನಾಯಕರಿಗೆ ಸೂಚಿಸಿದ್ದಾರೆ.</p><p>‘ಉದ್ದೇಶಪೂರ್ವಕವಾಗಿ ನನ್ನ ಹೆಸರಿಗೆ ಮಸಿ ಬಳಿಯಲು ಅತಿಶಿ ಮತ್ತು ಸಿಂಗ್ ಯತ್ನಿಸಿದ್ದರು’ ಎಂದು ದೀಕ್ಷಿತ್ ಆರೋಪಿಸಿದ್ದಾರೆ.</p><p>‘ನಾನು(ದೀಕ್ಷಿತ್) ಬಿಜೆಪಿಯಿಂದ ಕೋಟ್ಯಾಂತರ ರೂಪಾಯಿ ಪಡೆದುಕೊಂಡಿದ್ದಲ್ಲದೇ, ಎಎಪಿಯನ್ನು ಸೋಲಿಸಲು ಬಿಜೆಪಿ ಜೊತೆ ಕಾಂಗ್ರೆಸ್ ಶಾಮೀಲಾಗಿದೆ ಎಂದು ಸುದ್ದಿಗೋಷ್ಠಿಯೊಂದರಲ್ಲಿ ಅತಿಶಿ ಮತ್ತು ಸಿಂಗ್ ಆರೋಪಿಸಿದ್ದರು’ ಎಂದು ದೀಕ್ಷಿತ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p><p>ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಂದೀಪ್ ದೀಕ್ಷಿತ್ ಅವರು ಕಣಕ್ಕಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾಂಗ್ರೆಸ್ ಮಾಜಿ ಸಂಸದ ಸಂದೀಪ್ ದೀಕ್ಷಿತ್ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅತಿಶಿ ಮತ್ತು ಎಎಪಿ ಸಂಸದ ಸಂಜಯ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ನೋಟೀಸ್ ನೀಡಿದೆ.</p><p>ಜನವರಿ 27ರ ಒಳಗೆ ನೋಟಿಸ್ಗೆ ಉತ್ತರ ನೀಡುವಂತೆ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಪಾರಸ್ ದಲಾಲ್, ಈ ಇಬ್ಬರು ನಾಯಕರಿಗೆ ಸೂಚಿಸಿದ್ದಾರೆ.</p><p>‘ಉದ್ದೇಶಪೂರ್ವಕವಾಗಿ ನನ್ನ ಹೆಸರಿಗೆ ಮಸಿ ಬಳಿಯಲು ಅತಿಶಿ ಮತ್ತು ಸಿಂಗ್ ಯತ್ನಿಸಿದ್ದರು’ ಎಂದು ದೀಕ್ಷಿತ್ ಆರೋಪಿಸಿದ್ದಾರೆ.</p><p>‘ನಾನು(ದೀಕ್ಷಿತ್) ಬಿಜೆಪಿಯಿಂದ ಕೋಟ್ಯಾಂತರ ರೂಪಾಯಿ ಪಡೆದುಕೊಂಡಿದ್ದಲ್ಲದೇ, ಎಎಪಿಯನ್ನು ಸೋಲಿಸಲು ಬಿಜೆಪಿ ಜೊತೆ ಕಾಂಗ್ರೆಸ್ ಶಾಮೀಲಾಗಿದೆ ಎಂದು ಸುದ್ದಿಗೋಷ್ಠಿಯೊಂದರಲ್ಲಿ ಅತಿಶಿ ಮತ್ತು ಸಿಂಗ್ ಆರೋಪಿಸಿದ್ದರು’ ಎಂದು ದೀಕ್ಷಿತ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p><p>ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಂದೀಪ್ ದೀಕ್ಷಿತ್ ಅವರು ಕಣಕ್ಕಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>