ದೆಹಲಿ ವಾಯು ಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಪರಿಸರ ಸಚಿವ ಗೋಪಾಲ್ ರಾಯ್ ಪ್ರತಿಕ್ರಿಯಿಸಿ, ‘ಮೋಡ ಬಿತ್ತನೆ ಮೂಲಕ ಕೃತಕ ಮಳೆಯಾಗುವಂತೆ ಪ್ರಯತ್ನ ಕೈಗೊಳ್ಳಲಾಗುವುದು’ ಎಂದಿದ್ದಾರೆ.
ವಾಯುಮಾಲಿನ್ಯ ಕುರಿತ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೃಷಿ ತ್ಯಾಜ್ಯ ಸುಡುವಿಕೆ, ವಾಹನಗಳಿಂದ ಉಂಟಾಗುವ ಮಾಲಿನ್ಯ ಮತ್ತು ನಗರದ ಘನತ್ಯಾಜ್ಯವನ್ನು ಬಯಲಿನಲ್ಲಿ ಸುಡುವುದರಿಂದ ಆಗುತ್ತಿರುವ ಮಾಲಿನ್ಯ ಸೇರಿದಂತೆ ವಿವಿಧ ವಿಷಯಗಳ ಕುರಿತು ಪರಿಶೀಲಿಸಿತು.
ರಾಜಸ್ಥಾನ ಮತ್ತು ಉತ್ತರ ಪ್ರದೇಶದ ಹಲವು ನಗರಗಳಲ್ಲಿ ಸಹ ಗಾಳಿಯು ಅಪಾಯಕಾರಿ ಗುಣಮಟ್ಟ ಹೊಂದಿರುವುದು ವರದಿಯಾಗಿದೆ.